ಹುಬ್ಬಳ್ಳಿ: ತಮ್ಮ ಕೌಟುಂಬಿಕ ವಿಷಯದಲ್ಲಿ ವಿನಾಕಾರಣ ಮೂಗು ತೂರಿಸುತ್ತಿದ್ದಾರೆಂದು ಕಾಂಗ್ರೆಸ್ ಮುಖಂಡ ಗಿರೀಶ್ ಗದಿಗೆಪ್ಪಗೌಡರ, ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಅಧ್ಯಕ್ಷ ರಜತ್ ಉಳ್ಳಾಗಡ್ಡಿಮಠ, ಪಾಲಿಕೆ ಸದಸ್ಯ ಚೇತನ್ ಹಿರೇಕೆರೂರು ಸೇರಿದಂತೆ 10 ಜನರ ವಿರುದ್ಧ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ನನ್ನ ಪತ್ನಿಗೆ ವಿಚ್ಛೇದನ ನೀಡಲು ನಾನು ಕೇಸ್ ದಾಖಲಿಸಿದ್ದೇನೆ. ಈ ವಿಷಯದಲ್ಲಿ ನನಗೆ ಹಾಗೂ ನನ್ನ ಅಳಿಯ ಹರ್ಷವರ್ಧನ ಮಲಕಣ್ಣನವರ ಮತ್ತು ವಿಶಾಲ ಭಾವಿಮನಿ ಎಂಬುವವರಿಗೆ ರಾಮತೀರ್ಥ ಐರಸಂಗ ಮತ್ತು ಇನ್ನುಳಿದ 9 ಜನರು ಕಿರುಕುಳ ಕೊಡುತ್ತಿದ್ದಾರೆಂದು ಆರೋಪಿಸಿದ್ದಾರೆ.
ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದೂರು ಪಡೆದಿದ್ದು, ಎಫ್ಐಆರ್ ದಾಖಲು ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಸೆಂಟ್ರಲ್ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿರುವ ನನಗೆ ಟಿಕೆಟ್ ತಪ್ಪಿಸುವ ಹುನ್ನಾರ ನಡೆದಿದೆ ಎಂದು ಗಿರೀಶ್ ಆರೋಪಿಸಿದರು.