ETV Bharat / state

ಪ್ರಚಾರದ ವೇಳೆ ಕೈ-ಕಮಲ ಕಾರ್ಯಕರ್ತರ ಮಧ್ಯೆ ಮಾರಾಮಾರಿ: ಸೆಕ್ಷನ್​​​ 144 ಜಾರಿ - undefined

ಮನೆ ಮನೆ ಪ್ರಚಾರ ಮಾಡುತ್ತಿದ್ದ ಕೈ ಕಾರ್ಯಕರ್ತರ ಮೇಲೆ ಬಿಜೆಪಿ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂಬ ಆರೊಪ ಕೇಳಿಬಂದಿದೆ.

ಪ್ರಚಾರದ ವೇಳೆ ಕೈ-ಕಮಲ ಕಾರ್ಯಕರ್ತರ ಬಡಿದಾಟ
author img

By

Published : May 18, 2019, 8:54 PM IST

ಹುಬ್ಬಳ್ಳಿ: ಮನೆ ಮನೆ ಪ್ರಚಾರ ಮಾಡುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೇ ಮಾರಾಮಾರಿ ನಡೆದಿದೆ.

ಆಸ್ಪತ್ರೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತನಿಗೆ ಚಿಕಿತ್ಸೆ

ಕುಂದಗೋಳ ವಿಧಾನಸಭಾ ಕ್ಷೇತ್ರದ ಅದರಗುಂಚಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆ ಪ್ರಚಾರ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಬಿಜೆಪಿ‌ ಕಾರ್ಯಕರ್ತರು ಪ್ರಚಾರ ಮಾಡಬೇಡಿ ಎಂದು ಜಗಳ ತಗೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಶಿವಪ್ಪ ಉಳ್ಳಾಗಡ್ಡಿ, ಮುಕ್ತುಂ ಎಂಬ ಕಾಂಗ್ರೆಸ್​ ಕಾರ್ಯಕರ್ತರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ಬೆಂಬಲಿತ ಕಾರ್ಯಕರ್ತರಾದ ಮಲ್ಲಿಕಾರ್ಜುನ ಬುರುಡಿ ಹಾಗೂ ಗುರಿಸಿದ್ದಪ್ಪ ಜವಳಿ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದರಗುಂಚಿ ಗ್ರಾಮದಲ್ಲಿ ನಾಳೆ ಸಂಜೆವರೆಗೆ ಸೆಕ್ಷನ್​ 144 ಜಾರಿ ಮಾಡಲಾಗಿದೆ.

ಹುಬ್ಬಳ್ಳಿ: ಮನೆ ಮನೆ ಪ್ರಚಾರ ಮಾಡುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೇ ಮಾರಾಮಾರಿ ನಡೆದಿದೆ.

ಆಸ್ಪತ್ರೆಯಲ್ಲಿ ಕಾಂಗ್ರೆಸ್​ ಕಾರ್ಯಕರ್ತನಿಗೆ ಚಿಕಿತ್ಸೆ

ಕುಂದಗೋಳ ವಿಧಾನಸಭಾ ಕ್ಷೇತ್ರದ ಅದರಗುಂಚಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮನೆ ಮನೆ ಪ್ರಚಾರ ಮಾಡುತ್ತಿದ್ದ ವೇಳೆ ಸ್ಥಳಕ್ಕೆ ಬಂದ ಬಿಜೆಪಿ‌ ಕಾರ್ಯಕರ್ತರು ಪ್ರಚಾರ ಮಾಡಬೇಡಿ ಎಂದು ಜಗಳ ತಗೆದು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಲಾಗಿದೆ.

ಘಟನೆಯಲ್ಲಿ ಶಿವಪ್ಪ ಉಳ್ಳಾಗಡ್ಡಿ, ಮುಕ್ತುಂ ಎಂಬ ಕಾಂಗ್ರೆಸ್​ ಕಾರ್ಯಕರ್ತರು ಗಾಯಗೊಂಡಿದ್ದು, ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಬಿಜೆಪಿ ಬೆಂಬಲಿತ ಕಾರ್ಯಕರ್ತರಾದ ಮಲ್ಲಿಕಾರ್ಜುನ ಬುರುಡಿ ಹಾಗೂ ಗುರಿಸಿದ್ದಪ್ಪ ಜವಳಿ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅದರಗುಂಚಿ ಗ್ರಾಮದಲ್ಲಿ ನಾಳೆ ಸಂಜೆವರೆಗೆ ಸೆಕ್ಷನ್​ 144 ಜಾರಿ ಮಾಡಲಾಗಿದೆ.

Intro:ಹುಬ್ಬಳ್ಳಿ-03

ಮನೆ ಮನೆ ಪ್ರಚಾರ ಮಾಡುವ ವೇಳೆ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಬಿಜೆಪಿ ಕಾರ್ಯಕರ್ತರ ನಡುವೇ ಮಾರಾಮಾರಿ ನಡೆದಿದೆ.
ಕುಂದಗೋಳ ವಿಧಾನ ಸಭಾ ಕ್ಷೇತ್ರದ ಅದರಗುಂಚಿಯಲ್ಲಿ
ಮನೆ ಮನೆ ಪ್ರಚಾರ ಮಾಡುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರಿ ಪ್ರಚಾರ ಮಾಡ ಬೇಡಿ ಎಂದು ಬಿಜೆಪಿ‌ ಕಾರ್ಯಕರ್ತರು ಜಗಳ ತಗೆದು ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಲಾಗಿದೆ.‌ ಶಿವಪ್ಪ ಉಳ್ಳಾಗಡ್ಡಿ, ಮುಕ್ತುಂ ಹಲ್ಲೆಗೆ ಒಳಗಾದ ಕಾಂಗ್ರೆಸ್ ಕಾರ್ಯಕರ್ತರು.ಗಾಯಗೊಂಡವರ‌ನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಬೆಜೆಪಿ ಬೆಂಬಲಿತರಾದ ಮಲ್ಲಿಕಾರ್ಜುನ ಬುರುಡಿ ಹಾಗೂ ಗುರಿಸಿದ್ದಪ್ಪ ಜವಳಿ ಎಂಬುವವರು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ. ಈ ಸಂಬಂಧ ಹುಬ್ಬಳ್ಳಿ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು,. ಅದರಗುಂಚಿ ಗ್ರಾಮದಲ್ಲಿ ನಾಳೆ ಸಾಯಂಕಾಲದ ವರೆಗೂ 144 ಸೆ. ಜಾರಿ ಮಾಡಲಾಗಿದೆ.Body:H B GaddadConclusion:Etv hubli

For All Latest Updates

TAGGED:

ETV Bharat Logo

Copyright © 2025 Ushodaya Enterprises Pvt. Ltd., All Rights Reserved.