ETV Bharat / state

ಜಿ.ಪರಮೇಶ್ವರ್​ ಮೇಲೆ ಐಟಿ ದಾಳಿ ಖಂಡಿಸಿ ಕೈ ಕಾರ್ಯಕರ್ತರ ಪ್ರತಿಭಟನೆ

author img

By

Published : Oct 14, 2019, 6:18 PM IST

ಮಾಜಿ ಡಿಸಿಎಂ ಜಿ.ಪರಮೇಶ್ವರ್​ ಮೇಲೆ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನವನಗರದಲ್ಲಿ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ಕೈ ಕಾರ್ಯಕರ್ತರ ಪ್ರತಿಭಟನೆ

ಹುಬ್ಬಳ್ಳಿ : ಮಾಜಿ ಡಿಸಿಎಂ ಜಿ.ಪರಮೇಶ್ವರ್​ ಮೇಲೆ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನವನಗರದಲ್ಲಿ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ಐಟಿ ಕಚೇರಿ ಬಳಿಯಿರುವ ಪುತ್ಥಳಿಗೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಲು ಮುಂದಾದಾಗ ಮಾಜಿ ಪಾಲಿಕೆ ಬಸೀರ್ ಅಹ್ಮದ್ ಗುಡಮಾಲೆ ಅವರ ಕಾಲಿಗೆ ಬೆಂಕಿ ತಗುಲಿದ್ದು, ಈ ವೇಳೆ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತ ಬೆಂಕಿ ಆರಿಸಿದ್ದಾನೆ. ಅದೃಷ್ಟವಶಾತ್​ ಅನಾಹುತವೊಂದು ತಪ್ಪಿದಂತಾಗಿದೆ.

ಕೈ ಕಾರ್ಯಕರ್ತರ ಪ್ರತಿಭಟನೆ

ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆಯೇ ಐಟಿ, ಇಡಿ ದಾಳಿಗಳು ನಡೆಯುತ್ತಿವೆ. ಬಿಜೆಪಿ ತೆರಿಗೆ ಇಲಾಖೆಗಳ ಮೇಲೆ ಒತ್ತಡ ಹಾಕುವ ಮೂಲಕ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ. ಬಿಜೆಪಿ ದ್ವೇಷದ ರಾಜಕಾರಣ ಮಾಡುವುದಿಲ್ಲ ಎನ್ನುತ್ತಲೇ ದ್ವೇಷದ ರಾಜಕಾರಣ ಮಾಡುತ್ತಿದೆ. ಕೂಡಲೇ ಬಿಜೆಪಿ ದ್ವೇಷದ ರಾಜಕಾರಣವನ್ನು ಕೈಬಿಡಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಐಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೋಲಿಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ನಂತರ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಗೊಳಿಸಿದರು.

ಹುಬ್ಬಳ್ಳಿ : ಮಾಜಿ ಡಿಸಿಎಂ ಜಿ.ಪರಮೇಶ್ವರ್​ ಮೇಲೆ ಐಟಿ ದಾಳಿ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನವನಗರದಲ್ಲಿ ಆದಾಯ ತೆರಿಗೆ ಕಚೇರಿ ಎದುರು ಪ್ರತಿಭಟನೆ ಮಾಡಿದರು.

ಐಟಿ ಕಚೇರಿ ಬಳಿಯಿರುವ ಪುತ್ಥಳಿಗೆ ಪ್ರತಿಭಟನಾ ನಿರತರು ಬೆಂಕಿ ಹಚ್ಚಲು ಮುಂದಾದಾಗ ಮಾಜಿ ಪಾಲಿಕೆ ಬಸೀರ್ ಅಹ್ಮದ್ ಗುಡಮಾಲೆ ಅವರ ಕಾಲಿಗೆ ಬೆಂಕಿ ತಗುಲಿದ್ದು, ಈ ವೇಳೆ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತ ಬೆಂಕಿ ಆರಿಸಿದ್ದಾನೆ. ಅದೃಷ್ಟವಶಾತ್​ ಅನಾಹುತವೊಂದು ತಪ್ಪಿದಂತಾಗಿದೆ.

ಕೈ ಕಾರ್ಯಕರ್ತರ ಪ್ರತಿಭಟನೆ

ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು. ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆಯೇ ಐಟಿ, ಇಡಿ ದಾಳಿಗಳು ನಡೆಯುತ್ತಿವೆ. ಬಿಜೆಪಿ ತೆರಿಗೆ ಇಲಾಖೆಗಳ ಮೇಲೆ ಒತ್ತಡ ಹಾಕುವ ಮೂಲಕ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ. ಬಿಜೆಪಿ ದ್ವೇಷದ ರಾಜಕಾರಣ ಮಾಡುವುದಿಲ್ಲ ಎನ್ನುತ್ತಲೇ ದ್ವೇಷದ ರಾಜಕಾರಣ ಮಾಡುತ್ತಿದೆ. ಕೂಡಲೇ ಬಿಜೆಪಿ ದ್ವೇಷದ ರಾಜಕಾರಣವನ್ನು ಕೈಬಿಡಬೇಕೆಂದು ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಐಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದಾಗ ಪೋಲಿಸರು ಮತ್ತು ಕಾಂಗ್ರೆಸ್ ಕಾರ್ಯಕರ್ತರ ನಡುವೆ ವಾಗ್ವಾದ ನಡೆಯಿತು. ನಂತರ 50 ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆ ಗೊಳಿಸಿದರು.

Intro:HubliBody:ಸ್ಲಗ್:- ಐಟಿ, ಇಡಿ ದಾಳಿ ಖಂಡಿಸಿ ಕಾಂಗ್ರೆಸ್ ಪ್ರತಿಭಟನೆ ವೇಳಿ ಕಾರ್ಯಕರ್ತನ ಕಾಲಿಗೆ ಬೆಂಕಿ...

ಹುಬ್ಬಳ್ಳಿ:-ಮಾಜಿ ಉಪ ಉಪಮುಖ್ಯಮಂತ್ರಿ ಜಿ ಪರಮೇಶ್ವರ ಮೇಲೆ ಐ.ಟಿ.ಹಾಗೂ ಇಡಿ ದಾಳಿ ಖಂಡಿಸಿ ಐಟಿ ಹಾಗೂ ಇಡಿ ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಕಾಂಗ್ರೆಸ್ ಕಾರ್ಯಕರ್ತರು ನವನಗರದಲ್ಲಿನ ಆದಾಯ ತೆರಿಗೆ ಕಛೇರಿ ಎದುರು ಪ್ರತಿಭಟನೆ ಮಾಡಿದರು.ಇನ್ನೂ ಈ ವೇಳೆ ಐಟಿ ಪುತ್ಥಳಿಗೆ ಬೆಂಕಿ ಹಚ್ಚಲು ಮುಂದಾದಾಗ ಮಾಜಿ ಪಾಲಿಕೆ ಸದಸ್ಯನ ಕಾಲಿಗೆ ಬೆಂಕಿ ತಗುಲಿದ ಘಟನೆ ನಡೆದಿದೆ. ಮಾಜಿ ಪಾಲಿಕೆ ಸದಸ್ಯ ಬಸೀರ್ ಅಹ್ಮದ್ ಗುಡಮಾಲೆ ಅವರ ಕಾಲಿಗೆ ಬೆಂಕಿ ತಗುಲಿದ್ದು, ಈ ವೇಳೆ ಪಕ್ಕದಲ್ಲಿ ನಿಂತಿದ್ದ ಕಾರ್ಯಕರ್ತ ಬೆಂಕಿ ನೋಡಿ ಆರಿಸಿದ್ದಾನೆ. ಇದರಿಂದಾಗಿ ಮುಂದೆ ಆಗುತ್ತಿದ್ದ ಬಾರಿ ಅನಾಹುತ ತಪ್ಪಿದಂತಾಗಿದೆ.
ಇನ್ನೂ ಶಾಸಕ ಪ್ರಸಾದ ಅಬ್ಬಯ್ಯ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಬಿಜೆಪಿ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು ಕಾಂಗ್ರೆಸ್ ಕಾರ್ಯಕರ್ತರು. ಕಾಂಗ್ರೆಸ್ ಪಕ್ಷದ ಮುಖಂಡರ ಮೇಲೆಯೇ ಐಟಿ, ಇಡಿ ದಾಳಿಗಳು ನಡೆಯುತ್ತಿದೆ. ಬಿಜೆಪಿ ತೆರಿಗೆ ಇಲಾಖೆಗಳ ಮೇಲೆ ಒತ್ತಡ ಹಾಕುವ ಮೂಲಕ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಿ ದಾಳಿ ಮಾಡಲಾಗುತ್ತಿದೆ. ಬಿಜೆಪಿ ದ್ವೇಷ ರಾಜಕಾರಣ ಮಾಡುವುದಿಲ್ಲ ಎನ್ನುತ್ತಲೇ ದ್ವೇಷದ ರಾಜಕಾರಣ ಮಾಡುತ್ತಿದೆ. ಕೂಡಲೇ ಬಿಜೆಪಿ ದ್ವೇಷದ ರಾಜಕಾರಣವನ್ನು ಕೈಬಿಡಬೇಕೆಂದು ಕೇಂದ್ರ ಹಾಗೂ ರಾಜ್ಯ ಸರಕಾರದ ವಿರುದ್ಧ ಆಗ್ರಹಿಸಿ ಐಟಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನt ಮಾಡಿದರು. ಈ ವೇಳೆ ಪೋಲಿಸರು ಮಧ್ಯ ಪ್ರವೇಶ ಮಾಡಿದ ಹಿನ್ನೆಲೆ ಕೆಲಕಾಲ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಪೊಲೀಸ್ ನಡುವೆ ವಾಗ್ವಾದ ನಡೆಯಿತು. ನಂತರ 50ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೋಲಿಸರು ಬಂಧಿಸಿ ನಂತರ ಬಿಡುಗಡೆ ಗೊಳಿಸಿದರು ಪ್ರತಿಭಟನೆಯಲ್ಲಿನೂರಾರು ಕಾರ್ಯಕರ್ತರು ಇದ್ದರು.

ಬೈಟ:- ಪ್ರಸಾದ ಅಬ್ಬಯ್ಯ. ಶಾಸಕ.
_____________________________


ಹುಬ್ಬಳ್ಳಿ: ಸ್ಟ್ರಿಂಜರ

ಯಲ್ಲಪ್ ಕುಂದಗೋಳConclusion:Yallappa kudagol
ETV Bharat Logo

Copyright © 2024 Ushodaya Enterprises Pvt. Ltd., All Rights Reserved.