ETV Bharat / state

ಕ್ಷೇತ್ರ ಉಳಿಸಿಕೊಂಡ ವಿನಯ್​: ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕುಲಕರ್ಣಿ ಫೈನಲ್

ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಧಾರವಾಡ ಗ್ರಾಮೀಣ ಕ್ಷೇತ್ರದ ಕಾಂಗ್ರೆಸ್​ ಟಿಕೆಟ್​ ಅನ್ನು ವಿನಯ್​ ಕುಲಕರ್ಣಿ ಅವರಿಗೆ ಘೋಷಿಸಲಾಗಿದೆ.

author img

By

Published : Apr 6, 2023, 12:12 PM IST

Updated : Apr 6, 2023, 12:38 PM IST

Congress Ticket announced to Vinay Kulkarni in Dharwad rural
ಕ್ಷೇತ್ರ ಉಳಿಸಿಕೊಂಡ ವಿನಯ್​: ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಕುಲಕರ್ಣಿ ಫೈನಲ್

ಧಾರವಾಡ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಬಿಡುಗಡೆಗೊಳಿಸಿದೆ. ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಜಿಲ್ಲೆಯಿಂದ ಹೊರಗಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ಟಿಕೆಟ್ ನೀಡಿದ್ದು, ಚುನಾವಣಾ ಕಣ ರಂಗೇರುವಂತೆ ಮಾಡಿದೆ. ವಿನಯ್​ ಕುಲಕರ್ಣಿ ಜಿಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಜಿಲ್ಲೆಯಿಂದ ಹೊರಗಿದ್ದಾರೆ. ಈಗ ಚುನಾವಣೆಗೆ ಪಕ್ಷದ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕೋರ್ಟ್ ಗೆ ಅರ್ಜಿ​ ಸಲ್ಲಿಸುವ ಸಾಧ್ಯತೆ ಇದೆ. ಜಿಲ್ಲಾ ಪ್ರವೇಶಕ್ಕೆ ಅವಕಾಶ ನೀಡುವಂತೆ ವಿನಯ್​ ಮನವಿ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರು ತಲೆ ಕೆಟ್ಟು ಸುದೀಪ್ ವಿಚಾರದಲ್ಲಿ ಏನೇನೋ ಮಾತನಾಡುತ್ತಿದ್ದಾರೆ: ಬಿಎಸ್​ವೈ

ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಿಂದ ನಿಲ್ಲುವಂತೆ ವಿನಯ್​ಗೆ ಕಾಂಗ್ರೆಸ್​ ನಾಯಕರು ಒತ್ತಡ ಹಾಕಿದ್ದರು. ಆದರೆ, ಗ್ರಾಮೀಣ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟ ಕಾರಣ, ಅದೇ ಕ್ಷೇತ್ರಕ್ಕೇ ಟಿಕೆಟ್​ ಘೋಷಿಸಲಾಗಿದೆ. ಮತ್ತೊಂದೆಡೆ, ವಿನಯ್​​ ಅಭಿಮಾನಿಗಳು ಸಹ ಕಳೆದ ಕೆಲ ದಿನಗಳ ಹಿಂದೆ ನಿವಾಸದ ಮುಂದೆ ಒಂದು ದಿನ ಪ್ರತಿಭಟನೆ ಮಾಡಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ದೂರು ಇದ್ದರೂ, ಗ್ರಾಮೀಣ ಕ್ಷೇತ್ರಕ್ಕೆ ಟಿಕೆಟ್​ ಕೊಟ್ಟು ಮಣೆ ಹಾಕಲಾಗಿದೆ.

2013ರ ವಿಧಾನಸಭಾ ಚುನಾವಣೆಯಲ್ಲಿ ವಿನಯ್​ ಕುಲಕರ್ಣಿ ಕಾಂಗ್ರೆಸ್​ನಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್​ ಅಭ್ಯರ್ಥಿ ಅಮೃತ್ ಅಯ್ಯಪ್ಪ ದೇಸಾಯಿ ವಿರುದ್ಧ 53,453 ಮತಗಳನ್ನು ಪಡೆದು ವಿನಯ್​ ಜಯ ಸಾಧಿಸಿದ್ದರು. ನಂತರದ 2018ರ ಚುನಾವಣೆಯಲ್ಲಿ ವಿನಯ್​ ಕುಲಕರ್ಣಿ ಸೋಲು ಕಂಡಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಅಮೃತ್​ ಅಯ್ಯಪ್ಪ ದೇಸಾಯಿ 85,133 ಮತಗಳ ಪಡೆದು ಗೆಲುವು ಕಂಡಿದ್ದರು. ವಿನಯ್​ 64,783 ಮತಗಳ ಪಡೆದು 20,340 ಮತಗಳ ಅಂತರದಿಂದ ಸೋತಿದ್ದರು.

ಟಿಕೆಟ್​ ಸಿಕ್ಕರೂ ವಿನಯ್​ಗೆ ಬಂಡಾಯದ ಬಿಸಿ?: ಹಲವು ಊಹಾಪೋಹಗಳ ಮಧ್ಯೆ ಗ್ರಾಮೀಣ ಕ್ಷೇತ್ರದ ಟಿಕೆಟ್​ ಉಳಿಸಿಕೊಳ್ಳಲ್ಲಿ ವಿನಯ್​ ಕುಲಕರ್ಣಿ ಯಶಸ್ವಿಯಾಗಿದ್ದಾರೆ. ಆದರೆ, ಈ ಕ್ಷೇತ್ರದಿಂದ ಇಸ್ಮಾಯಿಲ್ ತಮಟಗಾರ ಕೂಡ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಿಲ್ಲೆಯಲ್ಲಿ ಓರ್ವ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಲು ಒತ್ತಾಯ ಮಾಡಿದ್ದ ಇಸ್ಮಾಯಿಲ್​ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ನಾಳೆ ಧಾರವಾಡಕ್ಕೆ ವಾಪಸ್ ಬರುವ ಸಾಧ್ಯತೆ ಇದ್ದು, ತಮ್ಮ ಮುಂದಿನ ತೀರ್ಮಾನ ಪ್ರಕಟಿಸುವ ನಿರೀಕ್ಷೆ ಇದೆ.

ಸಂತೋಷ್ ಲಾಡ್​ಗೆ ಕಲಘಟಗಿ ಕ್ಷೇತ್ರದ ಟಿಕೆಟ್​​: ಜಿಲ್ಲೆಯ ಮತ್ತೊಂದು ಕ್ಷೇತ್ರ ಕಲಘಟಗಿಗೂ ಕಾಂಗ್ರೆಸ್​ ಟಿಕೆಟ್​ ಘೋಷಣೆ ಮಾಡಿದೆ. ಮಾಜಿ ಸಚಿವ ಸಂತೋಷ ಲಾಡ್​ ಅವರಿಗೆ ಟಿಕೆಟ್ ನೀಡಲಾಗಿದೆ. ಅಲ್ಲಿ ಕೂಡ ನಾಗರಾಜ ಚೆಬ್ಬಿ ತಮಗೆ ಟಿಕೆಟ್​ ನೀಡುವಂತೆ ಮನವಿ ಮಾಡಿದ್ದರು. ಕೊನೆಗೆ ಲಾಡ್​​ ಅವರಿಗೆ​ ಕ್ಷೇತ್ರದ ಟಿಕೆಟ್​ ಕೊಡಲಾಗಿದೆ.

ಕಲಘಟಗಿ ಮತಕ್ಷೇತ್ರದಲ್ಲಿ ಸಂತೋಷ್​ ಲಾಡ್ 2008 ಮತ್ತು 2013ರ ಚುನಾವಣೆಯಲ್ಲಿ ಸತತವಾಗಿ ಎರಡು ಬಾರಿ ಗೆಲುವು ಸಾಧಿಸಿದ್ದರು. 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಂಸಿ ನಿಂಬಣ್ಣವರ್, 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧೆ ಮಾಡಿ ಸಂತೋಷ್​ ಲಾಡ್​ ವಿರುದ್ಧ ಸೋಲು ಕಂಡಿದ್ದರು. 2018ರ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿಯಿಂದ ಕಣಕ್ಕಿಳಿದ್ದ ಎಂಸಿ ನಿಂಬಣ್ಣವರ್ ಅವರು ಸಂತೋಷ್​ ಲಾಡ್ ಅವರನ್ನು ಸೋಲಿಸಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ನಿಂದ​ 42​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ.. ಯಾವ ಕ್ಷೇತ್ರಕ್ಕೆ ಯಾರು ನೋಡಿ

ಧಾರವಾಡ: ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಗಳ ಎರಡನೇ ಪಟ್ಟಿ ಇಂದು ಬಿಡುಗಡೆಗೊಳಿಸಿದೆ. ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಜಿಲ್ಲೆಯಿಂದ ಹೊರಗಿರುವ ಮಾಜಿ ಸಚಿವ ವಿನಯ್​ ಕುಲಕರ್ಣಿ ಟಿಕೆಟ್ ನೀಡಿದ್ದು, ಚುನಾವಣಾ ಕಣ ರಂಗೇರುವಂತೆ ಮಾಡಿದೆ. ವಿನಯ್​ ಕುಲಕರ್ಣಿ ಜಿಪಂ ಸದಸ್ಯ ಯೋಗೀಶ್ ಗೌಡ ಹತ್ಯೆ ಪ್ರಕರಣದಲ್ಲಿ ಧಾರವಾಡ ಜಿಲ್ಲೆಯಿಂದ ಹೊರಗಿದ್ದಾರೆ. ಈಗ ಚುನಾವಣೆಗೆ ಪಕ್ಷದ ಟಿಕೆಟ್ ಸಿಕ್ಕ ಹಿನ್ನೆಲೆಯಲ್ಲಿ ಮತ್ತೊಮ್ಮೆ ಕೋರ್ಟ್ ಗೆ ಅರ್ಜಿ​ ಸಲ್ಲಿಸುವ ಸಾಧ್ಯತೆ ಇದೆ. ಜಿಲ್ಲಾ ಪ್ರವೇಶಕ್ಕೆ ಅವಕಾಶ ನೀಡುವಂತೆ ವಿನಯ್​ ಮನವಿ ಮಾಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಕಾಂಗ್ರೆಸ್ ನಾಯಕರು ತಲೆ ಕೆಟ್ಟು ಸುದೀಪ್ ವಿಚಾರದಲ್ಲಿ ಏನೇನೋ ಮಾತನಾಡುತ್ತಿದ್ದಾರೆ: ಬಿಎಸ್​ವೈ

ಮುಖ್ಯಮಂತ್ರಿ ಬಸವರಾಜ್​ ಬೊಮ್ಮಾಯಿ ಪ್ರತಿನಿಧಿಸುವ ಹಾವೇರಿ ಜಿಲ್ಲೆಯ ಶಿಗ್ಗಾವಿ ಕ್ಷೇತ್ರದಿಂದ ನಿಲ್ಲುವಂತೆ ವಿನಯ್​ಗೆ ಕಾಂಗ್ರೆಸ್​ ನಾಯಕರು ಒತ್ತಡ ಹಾಕಿದ್ದರು. ಆದರೆ, ಗ್ರಾಮೀಣ ಕ್ಷೇತ್ರಕ್ಕೆ ಟಿಕೆಟ್ ನೀಡುವಂತೆ ಬೇಡಿಕೆ ಇಟ್ಟ ಕಾರಣ, ಅದೇ ಕ್ಷೇತ್ರಕ್ಕೇ ಟಿಕೆಟ್​ ಘೋಷಿಸಲಾಗಿದೆ. ಮತ್ತೊಂದೆಡೆ, ವಿನಯ್​​ ಅಭಿಮಾನಿಗಳು ಸಹ ಕಳೆದ ಕೆಲ ದಿನಗಳ ಹಿಂದೆ ನಿವಾಸದ ಮುಂದೆ ಒಂದು ದಿನ ಪ್ರತಿಭಟನೆ ಮಾಡಿ ಧಾರವಾಡ ಗ್ರಾಮೀಣ ಕ್ಷೇತ್ರದಿಂದ ಸ್ಪರ್ಧೆ ಮಾಡುವಂತೆ ಒತ್ತಾಯಿಸಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲೆಯಿಂದ ದೂರು ಇದ್ದರೂ, ಗ್ರಾಮೀಣ ಕ್ಷೇತ್ರಕ್ಕೆ ಟಿಕೆಟ್​ ಕೊಟ್ಟು ಮಣೆ ಹಾಕಲಾಗಿದೆ.

2013ರ ವಿಧಾನಸಭಾ ಚುನಾವಣೆಯಲ್ಲಿ ವಿನಯ್​ ಕುಲಕರ್ಣಿ ಕಾಂಗ್ರೆಸ್​ನಿಂದ ಗೆಲುವು ಸಾಧಿಸಿದ್ದರು. ಜೆಡಿಎಸ್​ ಅಭ್ಯರ್ಥಿ ಅಮೃತ್ ಅಯ್ಯಪ್ಪ ದೇಸಾಯಿ ವಿರುದ್ಧ 53,453 ಮತಗಳನ್ನು ಪಡೆದು ವಿನಯ್​ ಜಯ ಸಾಧಿಸಿದ್ದರು. ನಂತರದ 2018ರ ಚುನಾವಣೆಯಲ್ಲಿ ವಿನಯ್​ ಕುಲಕರ್ಣಿ ಸೋಲು ಕಂಡಿದ್ದರು. ಈ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧೆ ಮಾಡಿದ್ದ ಅಮೃತ್​ ಅಯ್ಯಪ್ಪ ದೇಸಾಯಿ 85,133 ಮತಗಳ ಪಡೆದು ಗೆಲುವು ಕಂಡಿದ್ದರು. ವಿನಯ್​ 64,783 ಮತಗಳ ಪಡೆದು 20,340 ಮತಗಳ ಅಂತರದಿಂದ ಸೋತಿದ್ದರು.

ಟಿಕೆಟ್​ ಸಿಕ್ಕರೂ ವಿನಯ್​ಗೆ ಬಂಡಾಯದ ಬಿಸಿ?: ಹಲವು ಊಹಾಪೋಹಗಳ ಮಧ್ಯೆ ಗ್ರಾಮೀಣ ಕ್ಷೇತ್ರದ ಟಿಕೆಟ್​ ಉಳಿಸಿಕೊಳ್ಳಲ್ಲಿ ವಿನಯ್​ ಕುಲಕರ್ಣಿ ಯಶಸ್ವಿಯಾಗಿದ್ದಾರೆ. ಆದರೆ, ಈ ಕ್ಷೇತ್ರದಿಂದ ಇಸ್ಮಾಯಿಲ್ ತಮಟಗಾರ ಕೂಡ ಕಾಂಗ್ರೆಸ್​ ಟಿಕೆಟ್ ಆಕಾಂಕ್ಷಿಯಾಗಿದ್ದರು. ಜಿಲ್ಲೆಯಲ್ಲಿ ಓರ್ವ ಅಲ್ಪಸಂಖ್ಯಾತ ಅಭ್ಯರ್ಥಿಗೆ ಟಿಕೆಟ್ ಕೊಡಲು ಒತ್ತಾಯ ಮಾಡಿದ್ದ ಇಸ್ಮಾಯಿಲ್​ ಕಳೆದ ನಾಲ್ಕು ದಿನಗಳಿಂದ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ನಾಳೆ ಧಾರವಾಡಕ್ಕೆ ವಾಪಸ್ ಬರುವ ಸಾಧ್ಯತೆ ಇದ್ದು, ತಮ್ಮ ಮುಂದಿನ ತೀರ್ಮಾನ ಪ್ರಕಟಿಸುವ ನಿರೀಕ್ಷೆ ಇದೆ.

ಸಂತೋಷ್ ಲಾಡ್​ಗೆ ಕಲಘಟಗಿ ಕ್ಷೇತ್ರದ ಟಿಕೆಟ್​​: ಜಿಲ್ಲೆಯ ಮತ್ತೊಂದು ಕ್ಷೇತ್ರ ಕಲಘಟಗಿಗೂ ಕಾಂಗ್ರೆಸ್​ ಟಿಕೆಟ್​ ಘೋಷಣೆ ಮಾಡಿದೆ. ಮಾಜಿ ಸಚಿವ ಸಂತೋಷ ಲಾಡ್​ ಅವರಿಗೆ ಟಿಕೆಟ್ ನೀಡಲಾಗಿದೆ. ಅಲ್ಲಿ ಕೂಡ ನಾಗರಾಜ ಚೆಬ್ಬಿ ತಮಗೆ ಟಿಕೆಟ್​ ನೀಡುವಂತೆ ಮನವಿ ಮಾಡಿದ್ದರು. ಕೊನೆಗೆ ಲಾಡ್​​ ಅವರಿಗೆ​ ಕ್ಷೇತ್ರದ ಟಿಕೆಟ್​ ಕೊಡಲಾಗಿದೆ.

ಕಲಘಟಗಿ ಮತಕ್ಷೇತ್ರದಲ್ಲಿ ಸಂತೋಷ್​ ಲಾಡ್ 2008 ಮತ್ತು 2013ರ ಚುನಾವಣೆಯಲ್ಲಿ ಸತತವಾಗಿ ಎರಡು ಬಾರಿ ಗೆಲುವು ಸಾಧಿಸಿದ್ದರು. 2008ರಲ್ಲಿ ಬಿಜೆಪಿಯಿಂದ ಸ್ಪರ್ಧಿಸಿದ್ದ ಎಂಸಿ ನಿಂಬಣ್ಣವರ್, 2013ರ ಚುನಾವಣೆಯಲ್ಲಿ ಕೆಜೆಪಿಯಿಂದ ಸ್ಪರ್ಧೆ ಮಾಡಿ ಸಂತೋಷ್​ ಲಾಡ್​ ವಿರುದ್ಧ ಸೋಲು ಕಂಡಿದ್ದರು. 2018ರ ಚುನಾವಣೆಯಲ್ಲಿ ಮತ್ತೊಮ್ಮೆ ಬಿಜೆಪಿಯಿಂದ ಕಣಕ್ಕಿಳಿದ್ದ ಎಂಸಿ ನಿಂಬಣ್ಣವರ್ ಅವರು ಸಂತೋಷ್​ ಲಾಡ್ ಅವರನ್ನು ಸೋಲಿಸಿದ್ದರು.

ಇದನ್ನೂ ಓದಿ: ಕಾಂಗ್ರೆಸ್​ನಿಂದ​ 42​ ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ.. ಯಾವ ಕ್ಷೇತ್ರಕ್ಕೆ ಯಾರು ನೋಡಿ

Last Updated : Apr 6, 2023, 12:38 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.