ETV Bharat / state

ಕೋರ್ಟ್​ನಿಂದ ಕರ್ನಾಟಕ ಕಾಲೇಜಿನ ಪ್ರಾಚಾರ್ಯರ ಬಂಧನ ವಾರಂಟ್ - arrest warrant for KCD principal

ಬೆಳಗಾವಿ ಜಿಲ್ಲೆಯ ಗೋಕಾಕ್​ನ ಜೆಎಂಎಫ್​ಸಿ ನ್ಯಾಯಾಲಯದಿಂದ ಪ್ರಾಚಾರ್ಯರಿಗೆ ಬಂಧನ ವಾರಂಟ್ ನೀಡಲಾಗಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಲಾಗಿದೆ.

court-issues-arrest-warrant-for-karnataka-college-principal
ಕರ್ನಾಟಕ ಕಾಲೇಜಿನ ಪ್ರಾಚಾರ್ಯರಿಗೆ ಕೋರ್ಟ್​ನಿಂದ ಬಂಧನ ವಾರೆಂಟ್
author img

By

Published : Feb 11, 2022, 9:05 PM IST

ಧಾರವಾಡ: ವಿದ್ಯಾಕಾಶಿ ಧಾರವಾಡದ ಪ್ರತಿಷ್ಠಿತ ಕಾಲೇಜಿನ ಪ್ರಾಚಾರ್ಯರಿಗೆ ಬಂಧನ ವಾರಂಟ್ ನೀಡಲಾಗಿದೆ. ಇಲ್ಲಿನ ಕರ್ನಾಟಕ ಕಾಲೇಜಿನ ಪ್ರಾಚಾರ್ಯರಾದ ದುರಗಪ್ಪ ಕರಡೋಣಿಗೆ‌ ಅವರಿಗೆ ವಾರಂಟ್ ಜಾರಿಯಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್​ನ ಜೆಎಂಎಫ್​ಸಿ ನ್ಯಾಯಾಲಯದಿಂದ ಬಂಧನ ವಾರಂಟ್ ನೀಡಲಾಗಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಲಾಗಿದೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ ವಾರಂಟ್ ಹೊರಡಿಸಲಾಗಿದೆ. ಗೋಕಾಕ್‌ನ ವಿಠ್ಠಲ್ ಎನ್ನುವವರ ಬಳಿ‌ ಕರಡೋಣಿ 3 ಲಕ್ಷ ರೂ. ಹಣ ಪಡೆದಿದ್ದರು. ಹಣ ಹಿಂತಿರುಗಿಸಲು ಚೆಕ್ ನೀಡಿದ್ದರು. ಆದರೆ ಖಾತೆಯಲ್ಲಿ ಹಣವಿಲ್ಲದೇ ಚೆಕ್ ಬೌನ್ಸ್ ಆಗಿರುವುದು ಕಂಡುಬಂದಿತ್ತು. ಪ್ರಾಚಾರ್ಯರ ವಿರುದ್ಧ ಕೋರ್ಟ್ ಗರಂ‌ ಆಗಿದ್ದು, ಬಂಧಿಸಿ ಹಾಜರುಪಡಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ.. ಕಾರಣ?

ಧಾರವಾಡ: ವಿದ್ಯಾಕಾಶಿ ಧಾರವಾಡದ ಪ್ರತಿಷ್ಠಿತ ಕಾಲೇಜಿನ ಪ್ರಾಚಾರ್ಯರಿಗೆ ಬಂಧನ ವಾರಂಟ್ ನೀಡಲಾಗಿದೆ. ಇಲ್ಲಿನ ಕರ್ನಾಟಕ ಕಾಲೇಜಿನ ಪ್ರಾಚಾರ್ಯರಾದ ದುರಗಪ್ಪ ಕರಡೋಣಿಗೆ‌ ಅವರಿಗೆ ವಾರಂಟ್ ಜಾರಿಯಾಗಿದೆ.

ಬೆಳಗಾವಿ ಜಿಲ್ಲೆಯ ಗೋಕಾಕ್​ನ ಜೆಎಂಎಫ್​ಸಿ ನ್ಯಾಯಾಲಯದಿಂದ ಬಂಧನ ವಾರಂಟ್ ನೀಡಲಾಗಿದ್ದು, ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತರಿಗೆ, ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸುವಂತೆ ಸೂಚಿಸಲಾಗಿದೆ.

ಚೆಕ್ ಬೌನ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್​ಗೆ ಹಾಜರಾಗದ ಹಿನ್ನೆಲೆಯಲ್ಲಿ ವಾರಂಟ್ ಹೊರಡಿಸಲಾಗಿದೆ. ಗೋಕಾಕ್‌ನ ವಿಠ್ಠಲ್ ಎನ್ನುವವರ ಬಳಿ‌ ಕರಡೋಣಿ 3 ಲಕ್ಷ ರೂ. ಹಣ ಪಡೆದಿದ್ದರು. ಹಣ ಹಿಂತಿರುಗಿಸಲು ಚೆಕ್ ನೀಡಿದ್ದರು. ಆದರೆ ಖಾತೆಯಲ್ಲಿ ಹಣವಿಲ್ಲದೇ ಚೆಕ್ ಬೌನ್ಸ್ ಆಗಿರುವುದು ಕಂಡುಬಂದಿತ್ತು. ಪ್ರಾಚಾರ್ಯರ ವಿರುದ್ಧ ಕೋರ್ಟ್ ಗರಂ‌ ಆಗಿದ್ದು, ಬಂಧಿಸಿ ಹಾಜರುಪಡಿಸಲು ಆದೇಶಿಸಲಾಗಿದೆ.

ಇದನ್ನೂ ಓದಿ: ಬೆಳಗಾವಿ: ಇಬ್ಬರು ಮಕ್ಕಳೊಂದಿಗೆ ಕೆರೆಗೆ ಹಾರಿ ಮಹಿಳೆ ಆತ್ಮಹತ್ಯೆ.. ಕಾರಣ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.