ಹುಬ್ಬಳ್ಳಿ: ಇಲ್ಲಿನ ಘಂಟಿಕೇರಿಯ ಬಿಸಿಎಂ ವಿದ್ಯಾರ್ಥಿ ನಿಲಯದಲ್ಲಿ ಸ್ಥಾಪಿಸಲಾಗಿರುವ ಕೋವಿಡ್ ಕೇರ್ ಸೆಂಟರ್ನಲ್ಲಿ ದಾಖಲಾಗಿರುವ ಲಕ್ಷಣ ರಹಿತ ಕೋವಿಡ್ ಸೋಂಕಿತರು ಕರೋಕೆ ರಾಗಕ್ಕೆ ಹಾಡು ಹಾಡಿ ಮನರಂಜನೆ ಪಡೆದರು.
ಮಾನಸಿಕ ಆರೋಗ್ಯ ಕಾಪಾಡಲು ಸಹಕಾರಿಯಾಗುವ ಚಟುವಟಿಕೆಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿಗಳಾದ ನಿತೇಶ ಪಾಟೀಲ ಅವರ ಸೂಚನೆ ಮೇರೆಗೆ ಉಪ ವಿಭಾಗಾಧಿಕಾರಿ ಮಹ್ಮದ್ ಜುಬೇರ್, ಡಾ. ಸಂಪತ್ ಸಿಂಗ್ ಸೇರಿದಂತೆ ಸೋಂಕಿತರಿಗೆ ಚಿಕಿತ್ಸೆ ನೀಡುತ್ತಿರುವ ಶುಶ್ರೂಷಕಿಯರು ಈ ಕ್ರಮ ಕೈಗೊಂಡಿದ್ದಾರೆ.