ETV Bharat / state

ಸಿಎಂ ಬೊಮ್ಮಾಯಿ ಊರಲ್ಲಿ ಹರಿಯುತ್ತಿದೆ ನೆತ್ತರು ಕೋಡಿ: ಕ್ರೈಂ ನಿಯಂತ್ರಣದಲ್ಲಿ ಪೊಲೀಸ್ ಇಲಾಖೆ ವಿಫಲ?

author img

By

Published : Jul 11, 2022, 4:03 PM IST

ಸುಮಾರು ಎರಡೂವರೆ ವರ್ಷಗಳಲ್ಲಿ 38 ಕೊಲೆ-ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಕ್ರೈಂ ಪ್ರಕರಣಗಳ ಹೆಚ್ಚಳ- ಕ್ರೈಂ ತಡೆಯಲು ಪೊಲೀಸ್ ಇಲಾಖೆ ವಿಫಲ ಆರೋಪ

crimes-are-increased-in-the-hubballi-and-dharwad-districts
ಹುಬ್ಬಳ್ಳಿ ಧಾರವಾಡದಲ್ಲಿ ಹೆಚ್ಚಿರುವ ಕ್ರೈಂ ಪ್ರಕರಣ

ಹುಬ್ಬಳ್ಳಿ : ಮುಖ್ಯಮಂತ್ರಿಯವರ ತವರು ಹುಬ್ಬಳ್ಳಿ-ಧಾರವಾಡದಲ್ಲಿ ರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊಲೆ, ಕೊಲೆ ಯತ್ನ, ಹಲ್ಲೆಯಂಥ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಚಾಕು, ಚೂರಿ, ತಲ್ವಾರ್, ಮತ್ತಿತರ ಮಾರಕಾಸ್ತ್ರಗಳು ಇಲ್ಲಿ ಆಟಿಕೆಯ ವಸ್ತುಗಳಂತಾಗಿವೆ. ಕೇವಲ ಎರಡೂವರೆ ವರ್ಷಗಳಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಒಟ್ಟು 38 ಕೊಲೆಗಳು ನಡೆದಿವೆ.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹಳೇ ಹುಬ್ಬಳ್ಳಿ ಕೋಮು ಗಲಭೆ ನಂತರ ಹುಬ್ಬಳ್ಳಿಯಲ್ಲಿ ಮೇಲಿಂದ ಮೇಲೆ ನೆತ್ತರು ಹರಿಯುತ್ತಲೇ ಇದೆ. ಇದಕ್ಕೆ ತಾಜಾ ಉದಾಹರಣೆ ಇತ್ತೀಚೆಗೆ ನಡೆದ ಖ್ಯಾತ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿಯವರ ಹತ್ಯೆ. ಹೆಣ್ಣು, ಹೊನ್ನು, ಮಣ್ಣು ವಿಚಾರವಾಗಿ ಒಂದಷ್ಟು ಕೊಲೆಗಳು ನಡೆದಿದ್ದರೆ, ಮತ್ತಷ್ಟು ಕೊಲೆಗಳು ಮೀಟರ್ ಬಡ್ಡಿ, ಹಳೇ ವೈಷಮ್ಯದ ವಿಚಾರ, ಗುಟ್ಟಾ, ಸಿಗರೇಟ್, ಎಗ್‌ರೈಸ್‌ನಂತಹ ಕುಲ್ಲಕ ಕಾರಣಕ್ಕೂ ನೆತ್ತರು ಹರಿದಿರುವುದು ವಿಪರ್ಯಾಸ. ಅಷ್ಟೇ ಅಲ್ಲದೇ ಸ್ನೇಹದಲ್ಲಿಯೇ ಕ್ಷುಲ್ಲಕ ಕಾರಣಕ್ಕೆ ಕೊಲೆಯ ಯತ್ನಗಳು ಸಹ ನಡೆದಿವೆ.

ಹುಬ್ಬಳ್ಳಿ ಧಾರವಾಡದಲ್ಲಿ ಹೆಚ್ಚಿರುವ ಕ್ರೈಂ ಪ್ರಕರಣ

ಕ್ಷುಲ್ಲಕ ಕಾರಣಕ್ಕೆ ಕೊಲೆ ಪ್ರಕರಣಗಳು : ಪ್ರೀತಿ-ಪ್ರೇಮ ವಿಷಯಕ್ಕೆ ಸಂಬಂಧಿಸಿದಂತೆ ಅದೆಷ್ಟೋ ಕೊಲೆ ನಡೆದಿವೆ. ಮನೆಯ ವಿರೋಧದ ನಡುವೆಯೂ ಮದುವೆಯಾದ ಮಗಳನ್ನು ಅಪಹರಿಸಿದ ತಂದೆ, ತಾನು ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಅನ್ಯೋನ್ಯವಾಗಿದ್ದ ಕಾರಣಕ್ಕೆ ನಿರ್ಜನ ಪ್ರದೇಶದಲ್ಲಿ ಯುವಕನ ಕೊಲೆ, ತಂಗಿಯನ್ನು ಚುಡಾಯಿಸಿದ ಕಾರಣಕ್ಕೆ ‌ಕೊಲೆ ಹೀಗೆ ಒಂದಿಲ್ಲೊಂದು ರೀತಿಯಲ್ಲಿ ಹುಬ್ಬಳ್ಳಿಯಲ್ಲಿ ನೆತ್ತರು ಹರಿಯುತ್ತಲೇ ಇದೆ‌.

ಕ್ರೈಂ ನಡೆದಾಗ ಎಫ್.ಐ ಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದು ಬಿಟ್ಟರೆ, ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸುವಲ್ಲಿ ಹುಬ್ಬಳ್ಳಿ ಪೊಲೀಸರು ವಿಫಲರಾದಂತೆ ಕಾಣುತ್ತಾರೆ. ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕೆಲಸ‌ ಮಾಡುತ್ತಿರುವುದು ಸಂತೋಷದ ವಿಚಾರ. ಆದರೆ ಈ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಯಾಕೆ ವಿಫಲಾಗುತ್ತಿದ್ದಾರೆ ಎಂಬ ಪ್ರಶ್ನೆ ಅವಳಿನಗರದ ಪ್ರಜ್ಞಾವಂತ ನಾಗರಿಕರ ಪ್ರಶ್ನೆಯಾಗಿದೆ.

ಸಾಕಷ್ಟು ಹೆಸರು ಮಾಡಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಲಾಬೂರಾಮ್ ಅವರ ಲಾ ಆ್ಯಂಡ್ ಆರ್ಡರ್ ವಿಫಲವಾಗಿದೆಯಾ ಎಂಬ ಅನುಮಾನ ದಟ್ಟವಾಗಿದ್ದು, ಪುಡಿ ರೌಡಿಗಳಿಗೆ ಹಾಗೂ ಕ್ರೈಂ ಪ್ರಕರಣಗಳಲ್ಲಿ ಭಾಗಿಯಾಗುವವರಿಗೆ ಪೊಲೀಸ್ ಇಲಾಖೆಯ ಭಯವೇ ಇಲ್ಲದಂತಾಗಿದೆ. ಇನ್ನಾದರೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಅವಳಿ ನಗರದಲ್ಲಿ ನಡೆಯುತ್ತಿರುವ ಕ್ರೈಂ ಪ್ರಕರಣಗಳಿಗೆ ಬ್ರೇಕ್​ ಹಾಕಬೇಕಿದೆ.

ಓದಿ : ಜೈಲಲ್ಲಿ ಸಹಕೈದಿಯಿಂದ 'ಹೈಟೆಕ್​' ಪಾಠ.. ಸ್ಮಾರ್ಟ್ ಡಿವೈಸ್ ಬಳಸಿ‌ ಕಾರು ಕದಿಯುತ್ತಿದ್ದ ಕಳ್ಳ ಅಂದರ್​

ಹುಬ್ಬಳ್ಳಿ : ಮುಖ್ಯಮಂತ್ರಿಯವರ ತವರು ಹುಬ್ಬಳ್ಳಿ-ಧಾರವಾಡದಲ್ಲಿ ರೌಡಿಗಳ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಕೊಲೆ, ಕೊಲೆ ಯತ್ನ, ಹಲ್ಲೆಯಂಥ ಪ್ರಕರಣಗಳ ಸಂಖ್ಯೆ ಏರುತ್ತಲೇ ಇದೆ. ಚಾಕು, ಚೂರಿ, ತಲ್ವಾರ್, ಮತ್ತಿತರ ಮಾರಕಾಸ್ತ್ರಗಳು ಇಲ್ಲಿ ಆಟಿಕೆಯ ವಸ್ತುಗಳಂತಾಗಿವೆ. ಕೇವಲ ಎರಡೂವರೆ ವರ್ಷಗಳಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರಗಳಲ್ಲಿ ಒಟ್ಟು 38 ಕೊಲೆಗಳು ನಡೆದಿವೆ.

ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹಳೇ ಹುಬ್ಬಳ್ಳಿ ಕೋಮು ಗಲಭೆ ನಂತರ ಹುಬ್ಬಳ್ಳಿಯಲ್ಲಿ ಮೇಲಿಂದ ಮೇಲೆ ನೆತ್ತರು ಹರಿಯುತ್ತಲೇ ಇದೆ. ಇದಕ್ಕೆ ತಾಜಾ ಉದಾಹರಣೆ ಇತ್ತೀಚೆಗೆ ನಡೆದ ಖ್ಯಾತ ಸರಳ ವಾಸ್ತು ತಜ್ಞ ಚಂದ್ರಶೇಖರ್ ಗುರೂಜಿಯವರ ಹತ್ಯೆ. ಹೆಣ್ಣು, ಹೊನ್ನು, ಮಣ್ಣು ವಿಚಾರವಾಗಿ ಒಂದಷ್ಟು ಕೊಲೆಗಳು ನಡೆದಿದ್ದರೆ, ಮತ್ತಷ್ಟು ಕೊಲೆಗಳು ಮೀಟರ್ ಬಡ್ಡಿ, ಹಳೇ ವೈಷಮ್ಯದ ವಿಚಾರ, ಗುಟ್ಟಾ, ಸಿಗರೇಟ್, ಎಗ್‌ರೈಸ್‌ನಂತಹ ಕುಲ್ಲಕ ಕಾರಣಕ್ಕೂ ನೆತ್ತರು ಹರಿದಿರುವುದು ವಿಪರ್ಯಾಸ. ಅಷ್ಟೇ ಅಲ್ಲದೇ ಸ್ನೇಹದಲ್ಲಿಯೇ ಕ್ಷುಲ್ಲಕ ಕಾರಣಕ್ಕೆ ಕೊಲೆಯ ಯತ್ನಗಳು ಸಹ ನಡೆದಿವೆ.

ಹುಬ್ಬಳ್ಳಿ ಧಾರವಾಡದಲ್ಲಿ ಹೆಚ್ಚಿರುವ ಕ್ರೈಂ ಪ್ರಕರಣ

ಕ್ಷುಲ್ಲಕ ಕಾರಣಕ್ಕೆ ಕೊಲೆ ಪ್ರಕರಣಗಳು : ಪ್ರೀತಿ-ಪ್ರೇಮ ವಿಷಯಕ್ಕೆ ಸಂಬಂಧಿಸಿದಂತೆ ಅದೆಷ್ಟೋ ಕೊಲೆ ನಡೆದಿವೆ. ಮನೆಯ ವಿರೋಧದ ನಡುವೆಯೂ ಮದುವೆಯಾದ ಮಗಳನ್ನು ಅಪಹರಿಸಿದ ತಂದೆ, ತಾನು ಪ್ರೀತಿಸುತ್ತಿದ್ದ ಹುಡುಗಿಯ ಜೊತೆ ಅನ್ಯೋನ್ಯವಾಗಿದ್ದ ಕಾರಣಕ್ಕೆ ನಿರ್ಜನ ಪ್ರದೇಶದಲ್ಲಿ ಯುವಕನ ಕೊಲೆ, ತಂಗಿಯನ್ನು ಚುಡಾಯಿಸಿದ ಕಾರಣಕ್ಕೆ ‌ಕೊಲೆ ಹೀಗೆ ಒಂದಿಲ್ಲೊಂದು ರೀತಿಯಲ್ಲಿ ಹುಬ್ಬಳ್ಳಿಯಲ್ಲಿ ನೆತ್ತರು ಹರಿಯುತ್ತಲೇ ಇದೆ‌.

ಕ್ರೈಂ ನಡೆದಾಗ ಎಫ್.ಐ ಆರ್ ದಾಖಲಿಸಿ ಆರೋಪಿಗಳನ್ನು ಬಂಧಿಸಿದ್ದು ಬಿಟ್ಟರೆ, ಸಮಾಜಘಾತುಕ ಶಕ್ತಿಗಳನ್ನು ನಿಯಂತ್ರಿಸುವಲ್ಲಿ ಹುಬ್ಬಳ್ಳಿ ಪೊಲೀಸರು ವಿಫಲರಾದಂತೆ ಕಾಣುತ್ತಾರೆ. ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಹುಬ್ಬಳ್ಳಿ-ಧಾರವಾಡ ಅವಳಿ ನಗರದಲ್ಲಿ ಕೆಲಸ‌ ಮಾಡುತ್ತಿರುವುದು ಸಂತೋಷದ ವಿಚಾರ. ಆದರೆ ಈ ಅಪರಾಧ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಯಾಕೆ ವಿಫಲಾಗುತ್ತಿದ್ದಾರೆ ಎಂಬ ಪ್ರಶ್ನೆ ಅವಳಿನಗರದ ಪ್ರಜ್ಞಾವಂತ ನಾಗರಿಕರ ಪ್ರಶ್ನೆಯಾಗಿದೆ.

ಸಾಕಷ್ಟು ಹೆಸರು ಮಾಡಿದ್ದ ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮೀಷನರೇಟ್ ನಲ್ಲಿ ಲಾಬೂರಾಮ್ ಅವರ ಲಾ ಆ್ಯಂಡ್ ಆರ್ಡರ್ ವಿಫಲವಾಗಿದೆಯಾ ಎಂಬ ಅನುಮಾನ ದಟ್ಟವಾಗಿದ್ದು, ಪುಡಿ ರೌಡಿಗಳಿಗೆ ಹಾಗೂ ಕ್ರೈಂ ಪ್ರಕರಣಗಳಲ್ಲಿ ಭಾಗಿಯಾಗುವವರಿಗೆ ಪೊಲೀಸ್ ಇಲಾಖೆಯ ಭಯವೇ ಇಲ್ಲದಂತಾಗಿದೆ. ಇನ್ನಾದರೂ ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಅವಳಿ ನಗರದಲ್ಲಿ ನಡೆಯುತ್ತಿರುವ ಕ್ರೈಂ ಪ್ರಕರಣಗಳಿಗೆ ಬ್ರೇಕ್​ ಹಾಕಬೇಕಿದೆ.

ಓದಿ : ಜೈಲಲ್ಲಿ ಸಹಕೈದಿಯಿಂದ 'ಹೈಟೆಕ್​' ಪಾಠ.. ಸ್ಮಾರ್ಟ್ ಡಿವೈಸ್ ಬಳಸಿ‌ ಕಾರು ಕದಿಯುತ್ತಿದ್ದ ಕಳ್ಳ ಅಂದರ್​

ETV Bharat Logo

Copyright © 2024 Ushodaya Enterprises Pvt. Ltd., All Rights Reserved.