ETV Bharat / state

ಅಕಾಲಿಕ ಮಳೆಗೆ ಬೆಳೆ ಹಾನಿ: ಬೆಳೆ ಪರಿಹಾರಕ್ಕೆ ಕಳಸಾ ಬಂಡೂರಿ ಹೋರಾಟಗಾರ ಒತ್ತಾಯ

author img

By

Published : Feb 22, 2021, 5:06 PM IST

ಅಕಾಲಿಕ ಮಳೆ ಮತ್ತು ಆನೆಕಲ್ಲು ಬಿದ್ದ ಪರಿಣಾಮ ಹುಬ್ಬಳ್ಳಿ - ಧಾರವಾಡ ಜಿಲ್ಲೆಗಳಲ್ಲಿ ಕಟಾವಿಗೆ ಬಂದಿದ್ದ ಬೆಳೆಗಳು ಹಾನಿಗೊಳಗಾಗಿವೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕಳಸಾ ಬಂಡೂರಿ ಹೋರಾಟಗಾರ
Kalasa Banduri committee president

ಹುಬ್ಬಳ್ಳಿ: ಅಕಾಲಿಕ ಮಳೆ ಮತ್ತು ಆನೆಕಲ್ಲು ಬಿದ್ದ ಪರಿಣಾಮ ಹಿಂಗಾರು ಬೆಳೆಗಳನ್ನು ಕಟಾವು ಮಾಡುವ ಸಂದರ್ಭದಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ

ಧಾರಾವಾಡ ಜಿಲ್ಲೆಯಲ್ಲಿ ಅಕಾಲಿಕ ಮಳೆಯಾಗಿದ್ದು, ಜೋಳ, ಕಡಲೆ, ಹತ್ತಿ, ಗೋಧಿ, ಕುಸಬಿ, ಸಜ್ಜೆ, ತೊಗರಿ ಹಾಗೂ ಮೆಣಸಿನಕಾಯಿ ಹೀಗೆ ಹತ್ತಾರು ಹಿಂಗಾರು ಬೆಳೆಗಳು ಹಾನಿಗೊಳಗಾಾಗಿವೆ. ಇದರಿಂದ ರೈತರಿಗೆ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದ್ದು, ಕಂಗಾಲಾಗಿದ್ದಾರೆ.

ಸಾಕಷ್ಟು ಸಾಲ ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ, ಅಕಾಲಿಕ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ವರುಣನ ಅವಕೃಪೆಗೆ ಒಳಗಾಗಿದೆ. ಈ ಸಂಬಂಧ ಸರ್ಕಾರ ಜಿಲ್ಲಾಧಿಕಾರಿ ಮುಖಾಂತರ ವಿಶೇಷವಾದ ಕಮಿಟಿ ರಚಿಸಿ, ಸರ್ವೆ ಮಾಡಿ ಎಕರೆಗೆ ಸುಮಾರು 60 ರಿಂದ 70 ಸಾವಿರ ರೂ. ಪರಿಹಾರ ನೀಡಬೇಕು. ಸರ್ಕಾರ ಸೂಕ್ತವಾದ ಪರಿಹಾರ ಹಣ ಕೊಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಒತ್ತಾಯಿಸಿದ್ದಾರೆ.

ಹುಬ್ಬಳ್ಳಿ: ಅಕಾಲಿಕ ಮಳೆ ಮತ್ತು ಆನೆಕಲ್ಲು ಬಿದ್ದ ಪರಿಣಾಮ ಹಿಂಗಾರು ಬೆಳೆಗಳನ್ನು ಕಟಾವು ಮಾಡುವ ಸಂದರ್ಭದಲ್ಲಿ ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಇದರಿಂದ ರೈತರು ಕಂಗಾಲಾಗಿದ್ದಾರೆ.

ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ

ಧಾರಾವಾಡ ಜಿಲ್ಲೆಯಲ್ಲಿ ಅಕಾಲಿಕ ಮಳೆಯಾಗಿದ್ದು, ಜೋಳ, ಕಡಲೆ, ಹತ್ತಿ, ಗೋಧಿ, ಕುಸಬಿ, ಸಜ್ಜೆ, ತೊಗರಿ ಹಾಗೂ ಮೆಣಸಿನಕಾಯಿ ಹೀಗೆ ಹತ್ತಾರು ಹಿಂಗಾರು ಬೆಳೆಗಳು ಹಾನಿಗೊಳಗಾಾಗಿವೆ. ಇದರಿಂದ ರೈತರಿಗೆ ದೊಡ್ಡ ಪ್ರಮಾಣದ ನಷ್ಟ ಸಂಭವಿಸಿದ್ದು, ಕಂಗಾಲಾಗಿದ್ದಾರೆ.

ಸಾಕಷ್ಟು ಸಾಲ ಮಾಡಿ ರೈತರು ಬೆಳೆ ಬೆಳೆದಿದ್ದರು. ಆದರೆ, ಅಕಾಲಿಕ ಮಳೆಯಿಂದ ಕೈಗೆ ಬಂದ ತುತ್ತು ಬಾಯಿಗೆ ಬರುವ ಮುನ್ನ ವರುಣನ ಅವಕೃಪೆಗೆ ಒಳಗಾಗಿದೆ. ಈ ಸಂಬಂಧ ಸರ್ಕಾರ ಜಿಲ್ಲಾಧಿಕಾರಿ ಮುಖಾಂತರ ವಿಶೇಷವಾದ ಕಮಿಟಿ ರಚಿಸಿ, ಸರ್ವೆ ಮಾಡಿ ಎಕರೆಗೆ ಸುಮಾರು 60 ರಿಂದ 70 ಸಾವಿರ ರೂ. ಪರಿಹಾರ ನೀಡಬೇಕು. ಸರ್ಕಾರ ಸೂಕ್ತವಾದ ಪರಿಹಾರ ಹಣ ಕೊಡದಿದ್ದರೆ ರಾಜ್ಯಾದ್ಯಂತ ಹೋರಾಟ ಮಾಡಬೇಕಾಗುತ್ತದೆ ಎಂದು ಕಳಸಾ ಬಂಡೂರಿ ರೈತ ಹೋರಾಟ ಸಮಿತಿ ಅಧ್ಯಕ್ಷ ಸಿದ್ದಣ್ಣ ತೇಜಿ ಒತ್ತಾಯಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.