ETV Bharat / state

ಹುಬ್ಬಳ್ಳಿಯಲ್ಲಿ ಪೊಲೀಸ್ ಬಂದೋಬಸ್ತ್​ ನಡುವೆ ದರ್ಗಾ ತೆರವು ಕಾರ್ಯಾಚರಣೆ... ಸಂಚಾರ ಮಾರ್ಗ ಬದಲಾವಣೆ

author img

By

Published : Dec 21, 2022, 12:49 PM IST

ಬಿಗಿ ಪೊಲೀಸ್​ ಬಂದೋಬಸ್ತ್​ ನಡುವೆ ದರ್ಗಾ ತೆರವು ಕಾರ್ಯಾಚರಣೆ ನಡೆಯುತ್ತಿದ್ದು, ಆಡಳಿತವು ಈ ರಸ್ತೆಯಲ್ಲಿ ಸಂಚರಿಸುವ ವಾಹನ ಸವಾರರಿಗೆ ಮಾರ್ಗ ಬದಲಾಯಿಸಿ ಬೇರೆ ವ್ಯವಸ್ಥೆ ಕಲ್ಪಿಸಿದೆ.

Dargah evacuation operation  evacuation operation amid heavy police presence  Dargah evacuation operation in Hubli  ದರ್ಗಾ ತೆರವು ಕಾರ್ಯಾಚರಣೆ  ಪೊಲೀಸ್ ಬಂದೋಬಸ್ತ್​ ನಡುವೆ ದರ್ಗಾ ತೆರವು ಕಾರ್ಯಾಚರಣೆ  ಸಂಚಾರ ಮಾರ್ಗ ಬದಲಾವಣೆ  ಬಿಗಿ ಪೊಲೀಸ್​ ಬಂದೋಬಸ್ತ್​ ನಡುವೆ ದರ್ಗಾ ತೆರವು  ವಾಹನ ಸವಾರರಿಗೆ ಮಾರ್ಗ ಬದಲಾಯಿಸಿ ಬೇರೆ ವ್ಯವಸ್ಥೆ  ಭೈರಿದೇವರಕೊಪ್ಪದ ಬಳಿಯಿರುವ ದರ್ಗಾ ತೆರವು ಕಾರ್ಯಾಚರಣೆ  ಸೂಕ್ತ ಭದ್ರತೆಯೊಂದಿಗೆ ತೆರವು ಕಾರ್ಯ  ಬಿಆರ್​ಟಿಎಸ್ ಮಾರ್ಗ ಬದಲಾವಣೆ  ಬಿಆರ್‌ಟಿಎಸ್‌ ಯೋಜನೆ ಅನುಷ್ಠಾನ  ದರ್ಗಾದ ಆಡಳಿತ ಮಂಡಳಿ  ಭೂಸ್ವಾಧೀನದ ವಿರುದ್ಧ ತಡೆಯಾಜ್ಞೆ
ದರ್ಗಾ ತೆರವು ಕಾರ್ಯಾಚರಣೆ

ಹುಬ್ಬಳ್ಳಿ: ಇಲ್ಲಿನ ಭೈರಿದೇವರಕೊಪ್ಪದ ಬಳಿಯ ದರ್ಗಾ ತೆರವು ಕಾರ್ಯಾಚರಣೆ ಬೆಳಗ್ಗೆಯಿಂದ ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದ ಸುಮಾರು 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನೀಯೋಜಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ತೆರವು ಕಾರ್ಯ ನಡೆಯುತ್ತಿದೆ. ಜಿಲ್ಲಾಧಿಕಾರಿ ಗುರದತ್ತ ಹೆಗಡೆ, ಬಿಆರ್​​ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ಭರತ್, ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲಕೃಷ್ಣ ಬ್ಯಾಕೋಡ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಬಿಆರ್​ಟಿಎಸ್ ಮಾರ್ಗ ಬದಲಾವಣೆ: ದರ್ಗಾ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಓಡಾಡುವ ವಾಹನಗಳ ಸಂಚಾರವನ್ನು ಬದಲಾವಣೆ ಮಾಡಲಾಗಿದೆ. ಧಾರವಾಡ ಕಡೆಯಿಂದ ಹುಬಳ್ಳಿಯತ್ತ ಬರುವ ವಾಹನಗಳನ್ನು ಎಪಿಎಂಸಿ ಮುಖಾಂತರ ಹುಬ್ಬಳ್ಳಿಯತ್ತ ಹಾಗೂ ಹುಬ್ಬಳ್ಳಿಯಿಂದ ಧಾರವಾಡ ಕಡೆ ಹೋಗುವ ವಾಹನಗಳನ್ನು ಬೈರಿದೇವರಕೊಪ್ಪದಿಂದ ಗಾಮನಗಟ್ಟಿ ಮಾರ್ಗವಾಗಿ ಧಾರವಾಡ ಹೋಗಲು ಮಾರ್ಗ ವ್ಯವಸ್ಥೆ ಮಾಡಲಾಗಿದೆ.

2016ರಲ್ಲಿ ತಡೆಯಾಜ್ಞೆ: ಬಿಆರ್‌ಟಿಎಸ್‌ ಯೋಜನೆ ಅನುಷ್ಠಾನಕ್ಕಾಗಿ ಈ ಜಾಗವನ್ನ ಭೂಸ್ವಾಧೀನ ಮಾಡಿಕೊಂಡಿತ್ತು. ಆದ್ರೆ ದರ್ಗಾದ ಆಡಳಿತ ಮಂಡಳಿ 2016ರಲ್ಲಿ ಭೂಸ್ವಾಧೀನದ ವಿರುದ್ಧ ತಡೆಯಾಜ್ಞೆ ತಂದಿತ್ತು. ಬಿಆರ್‌ಟಿಎಸ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಶುಕ್ರವಾರ ನ್ಯಾಯಾಲಯವು ತಡೆಯಾಜ್ಞೆ ತೆರವುಗೊಳಿಸಿತ್ತು. ಈ ನಡುವೆ ಇದೇ ವಿಷಯ ಕುರಿತು ಚರ್ಚಿಸಲು ಸಿಎಂ ಅವರನ್ನು ಭೇಟಿ ಮಾಡಲು ದರ್ಗಾ ಆಡಳಿತ ಮಂಡಳಿ ಸದಸ್ಯರು ಬೆಳಗಾವಿಗೆ ತೆರಳಿದ್ದರು ಎಂಬ ಮಾಹಿತಿ ಇತ್ತು.

ಓದಿ: ಹುಬ್ಬಳ್ಳಿಯಲ್ಲಿ ರಸ್ತೆ ಅಗಲೀಕರಣ ಹಿನ್ನೆಲೆ ಕಾರ್ಯಾಚರಣೆ.. ದರ್ಗಾ ಬಳಿ ಪೊಲೀಸ್ ಬಂದೋಬಸ್ತ್

ಹುಬ್ಬಳ್ಳಿ: ಇಲ್ಲಿನ ಭೈರಿದೇವರಕೊಪ್ಪದ ಬಳಿಯ ದರ್ಗಾ ತೆರವು ಕಾರ್ಯಾಚರಣೆ ಬೆಳಗ್ಗೆಯಿಂದ ಆರಂಭವಾಗಿದೆ. ಹುಬ್ಬಳ್ಳಿ-ಧಾರವಾಡ ಸೇರಿದಂತೆ ಉತ್ತರ ಕನ್ನಡ, ಹಾವೇರಿ, ಗದಗ ಹಾಗೂ ಧಾರವಾಡ ಜಿಲ್ಲೆಗಳಿಂದ ಸುಮಾರು 200 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ಸ್ಥಳದಲ್ಲಿ ನೀಯೋಜಿಸಲಾಗಿದ್ದು, ಸೂಕ್ತ ಭದ್ರತೆಯೊಂದಿಗೆ ತೆರವು ಕಾರ್ಯ ನಡೆಯುತ್ತಿದೆ. ಜಿಲ್ಲಾಧಿಕಾರಿ ಗುರದತ್ತ ಹೆಗಡೆ, ಬಿಆರ್​​ಟಿಎಸ್ ವ್ಯವಸ್ಥಾಪಕ ನಿರ್ದೇಶಕ ಎಸ್.ಭರತ್, ಪೊಲೀಸ್ ಆಯುಕ್ತ ಲಾಭೂರಾಮ್, ಡಿಸಿಪಿಗಳಾದ ಸಾಹಿಲ್ ಬಾಗ್ಲಾ, ಗೋಪಾಲಕೃಷ್ಣ ಬ್ಯಾಕೋಡ್ ಸ್ಥಳಕ್ಕೆ ಭೇಟಿ ನೀಡಿದ್ದಾರೆ.

ಬಿಆರ್​ಟಿಎಸ್ ಮಾರ್ಗ ಬದಲಾವಣೆ: ದರ್ಗಾ ತೆರವು ಕಾರ್ಯಾಚರಣೆ ಹಿನ್ನೆಲೆಯಲ್ಲಿ ಈ ಮಾರ್ಗದಲ್ಲಿ ಓಡಾಡುವ ವಾಹನಗಳ ಸಂಚಾರವನ್ನು ಬದಲಾವಣೆ ಮಾಡಲಾಗಿದೆ. ಧಾರವಾಡ ಕಡೆಯಿಂದ ಹುಬಳ್ಳಿಯತ್ತ ಬರುವ ವಾಹನಗಳನ್ನು ಎಪಿಎಂಸಿ ಮುಖಾಂತರ ಹುಬ್ಬಳ್ಳಿಯತ್ತ ಹಾಗೂ ಹುಬ್ಬಳ್ಳಿಯಿಂದ ಧಾರವಾಡ ಕಡೆ ಹೋಗುವ ವಾಹನಗಳನ್ನು ಬೈರಿದೇವರಕೊಪ್ಪದಿಂದ ಗಾಮನಗಟ್ಟಿ ಮಾರ್ಗವಾಗಿ ಧಾರವಾಡ ಹೋಗಲು ಮಾರ್ಗ ವ್ಯವಸ್ಥೆ ಮಾಡಲಾಗಿದೆ.

2016ರಲ್ಲಿ ತಡೆಯಾಜ್ಞೆ: ಬಿಆರ್‌ಟಿಎಸ್‌ ಯೋಜನೆ ಅನುಷ್ಠಾನಕ್ಕಾಗಿ ಈ ಜಾಗವನ್ನ ಭೂಸ್ವಾಧೀನ ಮಾಡಿಕೊಂಡಿತ್ತು. ಆದ್ರೆ ದರ್ಗಾದ ಆಡಳಿತ ಮಂಡಳಿ 2016ರಲ್ಲಿ ಭೂಸ್ವಾಧೀನದ ವಿರುದ್ಧ ತಡೆಯಾಜ್ಞೆ ತಂದಿತ್ತು. ಬಿಆರ್‌ಟಿಎಸ್‌ ತಡೆಯಾಜ್ಞೆ ತೆರವುಗೊಳಿಸುವಂತೆ ಹೈಕೋರ್ಟ್‌ಗೆ ಮೊರೆ ಹೋಗಿತ್ತು. ಶುಕ್ರವಾರ ನ್ಯಾಯಾಲಯವು ತಡೆಯಾಜ್ಞೆ ತೆರವುಗೊಳಿಸಿತ್ತು. ಈ ನಡುವೆ ಇದೇ ವಿಷಯ ಕುರಿತು ಚರ್ಚಿಸಲು ಸಿಎಂ ಅವರನ್ನು ಭೇಟಿ ಮಾಡಲು ದರ್ಗಾ ಆಡಳಿತ ಮಂಡಳಿ ಸದಸ್ಯರು ಬೆಳಗಾವಿಗೆ ತೆರಳಿದ್ದರು ಎಂಬ ಮಾಹಿತಿ ಇತ್ತು.

ಓದಿ: ಹುಬ್ಬಳ್ಳಿಯಲ್ಲಿ ರಸ್ತೆ ಅಗಲೀಕರಣ ಹಿನ್ನೆಲೆ ಕಾರ್ಯಾಚರಣೆ.. ದರ್ಗಾ ಬಳಿ ಪೊಲೀಸ್ ಬಂದೋಬಸ್ತ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.