ETV Bharat / state

ಪಾಕ್​ ವಿರುದ್ಧದ ಯುದ್ಧದಲ್ಲಿ ಹೋರಾಡಿದ್ದ ನಿವೃತ್ತ ಯೋಧ ಕೊರೊನಾಗೆ ಬಲಿ

author img

By

Published : Jul 23, 2020, 7:12 PM IST

ಪಾಕ್​ ವಿರುದ್ಧದ ಎರಡು ಯುದ್ಧಗಳಲ್ಲಿ ಹೋರಾಡಿದ್ದ ಯೋಧ ಹುಬ್ಬಳ್ಳಿಯಲ್ಲಿ ಕೊರೊನಾಗೆ ಬಲಿಯಾಗಿದ್ದಾರೆ.

fdf
ನಿವೃತ್ತ ಯೋಧ ಕೊರೊನಾಗೆ ಬಲಿ

ಹುಬ್ಬಳ್ಳಿ: ಪಾಕಿಸ್ತಾನದ ವಿರುದ್ಧ ನಡೆದ ಎರಡು ಯುದ್ದಗಳಲ್ಲಿ ಜಯಗಳಿಸಿದ್ದ ಭಾರತೀಯ ಸೇನೆಯ ಸುಬೇದಾರ್ ರಂಗಪ್ಪ ಎಫ್ ಕವಡಿಗಟ್ಟಿ (76) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಇಲ್ಲಿನ ಲೋಕಪ್ಪನ ಹಕ್ಕಲು ವಾಸಿವಾಗಿರುವ ರಂಗಪ್ಪ ಇತ್ತೀಚಿಗೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳವಾರ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಎರಡು ಕೋವಿಡ್‌ ವರದಿಗಳು ನೆಗೆಟಿವ್‌ ಬಂದಿದ್ದವು. ಮಂಗಳವಾರ ಬಂದ ಮೂರನೇ ವರದಿ ಮಾತ್ರ ‘ಪಾಸಿಟಿವ್‌’ ಆಗಿತ್ತು. ಕೋವಿಡ್‌ ನಿಯಮಾನುಸಾರ ಬುಧವಾರ ಜಿಲ್ಲಾಡಳಿತ ಅಂತ್ಯಕ್ರಿಯೆ ನೆರವೇರಿಸಿದೆ.

ಇವರು ಶತ್ರು ದೇಶ ಪಾಕಿಸ್ತಾನದ ವಿರುದ್ಧ ನಡೆದ ಎರಡು ಯುದ್ಧ (1965, 1971) ಗಳಲ್ಲಿ ವೀರಸೇನಾನಿಯಾಗಿ ಹೋರಾಡಿ ಭಾರತದ ಗೆಲುವಿಗೆ ಕಾರಣರಾಗಿದ್ದರು. ಮೂಲತಃ ಬಾದಾಮಿ ತಾಲೂಕು ಹಂಗರಗಿ ಗ್ರಾಮದವರಾದ ಈ ಯೋಧ, ಸೇನಾ ನಿವೃತ್ತಿಯ ಬಳಿಕ ನಗರದಲ್ಲಿ ವಾಸವಾಗಿ ಸೇನೆಗೆ ಸೇರುವಂತೆ ಯುವಕರನ್ನು ಹುರಿದುಂಬಿಸುತ್ತಿದ್ದರು. ಇವರ ಇಬ್ಬರು ಪುತ್ರರು ಸೈನಿಕರಾಗಿ ದೇಶ ಸೇವೆ ಸಲ್ಲಿಸುತ್ತಿದ್ದಾರೆ.

ಹುಬ್ಬಳ್ಳಿ: ಪಾಕಿಸ್ತಾನದ ವಿರುದ್ಧ ನಡೆದ ಎರಡು ಯುದ್ದಗಳಲ್ಲಿ ಜಯಗಳಿಸಿದ್ದ ಭಾರತೀಯ ಸೇನೆಯ ಸುಬೇದಾರ್ ರಂಗಪ್ಪ ಎಫ್ ಕವಡಿಗಟ್ಟಿ (76) ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ.

ಇಲ್ಲಿನ ಲೋಕಪ್ಪನ ಹಕ್ಕಲು ವಾಸಿವಾಗಿರುವ ರಂಗಪ್ಪ ಇತ್ತೀಚಿಗೆ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದು, ಮಂಗಳವಾರ ಮೃತಪಟ್ಟಿದ್ದಾರೆ. ಆಸ್ಪತ್ರೆಗೆ ದಾಖಲಾಗಿದ್ದ ಅವರಿಗೆ ಎರಡು ಕೋವಿಡ್‌ ವರದಿಗಳು ನೆಗೆಟಿವ್‌ ಬಂದಿದ್ದವು. ಮಂಗಳವಾರ ಬಂದ ಮೂರನೇ ವರದಿ ಮಾತ್ರ ‘ಪಾಸಿಟಿವ್‌’ ಆಗಿತ್ತು. ಕೋವಿಡ್‌ ನಿಯಮಾನುಸಾರ ಬುಧವಾರ ಜಿಲ್ಲಾಡಳಿತ ಅಂತ್ಯಕ್ರಿಯೆ ನೆರವೇರಿಸಿದೆ.

ಇವರು ಶತ್ರು ದೇಶ ಪಾಕಿಸ್ತಾನದ ವಿರುದ್ಧ ನಡೆದ ಎರಡು ಯುದ್ಧ (1965, 1971) ಗಳಲ್ಲಿ ವೀರಸೇನಾನಿಯಾಗಿ ಹೋರಾಡಿ ಭಾರತದ ಗೆಲುವಿಗೆ ಕಾರಣರಾಗಿದ್ದರು. ಮೂಲತಃ ಬಾದಾಮಿ ತಾಲೂಕು ಹಂಗರಗಿ ಗ್ರಾಮದವರಾದ ಈ ಯೋಧ, ಸೇನಾ ನಿವೃತ್ತಿಯ ಬಳಿಕ ನಗರದಲ್ಲಿ ವಾಸವಾಗಿ ಸೇನೆಗೆ ಸೇರುವಂತೆ ಯುವಕರನ್ನು ಹುರಿದುಂಬಿಸುತ್ತಿದ್ದರು. ಇವರ ಇಬ್ಬರು ಪುತ್ರರು ಸೈನಿಕರಾಗಿ ದೇಶ ಸೇವೆ ಸಲ್ಲಿಸುತ್ತಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.