ETV Bharat / state

ಕೊರೊನಾ ಸೋಂಕಿತರು ಮೃತಪಟ್ಟರೆ ಅಂತಹವರಿಗೆ ಉಚಿತ ಅಂತ್ಯಕ್ರಿಯೆ: ಹು -ಧಾ ಪಾಲಿಕೆ ನಿರ್ಧಾರ

author img

By

Published : Apr 30, 2021, 10:36 PM IST

ಸೋಂಕಿತರ ಸಾವಿನಿಂದ ತೊಂದರೆಯಲ್ಲಿರುವ ಕುಟುಂಬಗಳಿಗೆ ನೆರವಾಗಲು ಧಾರವಾಡ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​ ಮಾರ್ಗದರ್ಶನದಲ್ಲಿ ಮಹಾನಗರ ಪಾಲಿಕೆಯು ಮೃತ ದೇಹದ ಅಂತ್ಯಸಂಸ್ಕಾರ ನೆರವೇರಿಲು ನಿರ್ಧರಿಸಿದೆ.

Decision for funeral of Corona infected for free in hubli
ಹು-ಧಾ ಪಾಲಿಕೆ ವತಿಯಿಂದ ಉಚಿತವಾಗಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ನಿರ್ಧಾರ

ಹುಬ್ಬಳ್ಳಿ: ಕೊರೊನಾ ಸೋಂಕಿತರ ಮೃತ ದೇಹ ಸಾಗಣೆಗೆ ಉಚಿತವಾಗಿ ವಾಹನ ಸೌಲಭ್ಯ, ಸಂಸ್ಕಾರಕ್ಕೆ ತಗಲುವ ವೆಚ್ಚವನ್ನು ಪಾಲಿಕೆಯಿಂದ ಭರಿಸಿ ಉಚಿತವಾಗಿ ಶವಸಂಸ್ಕಾರ ನೆರವೇರಿಸಲು ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗಿದೆ.

ಹು-ಧಾ ಪಾಲಿಕೆ ವತಿಯಿಂದ ಉಚಿತವಾಗಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ನಿರ್ಧಾರ

ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ ದೇಹಗಳನ್ನು ಸಾಗಿಸಲು ಆ್ಯಂಬುಲೆನ್ಸ್​ ಮಾಲೀಕರು ಮೃತರ ಕುಟುಂಬದವರಿಂದ ಹೆಚ್ಚಿನ ಹಣ ಸಂಗ್ರಹಣೆ ಮಾಡುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯಿಂದ ಕೋವಿಡ್-19 ಸೋಂಕಿನಿಂದ ಮೃತಪಟ್ಟ ದೇಹಗಳನ್ನು ಕಿಮ್ಸ್, ಜಿಲ್ಲಾಸ್ಪತ್ರೆ ಹಾಗೂ ಎಸ್‍ಡಿಎಂ ಸೇರಿದಂತೆ ಖಾಸಗಿ ಆಸ್ಪತ್ರೆಗಳಿಂದ ನಿಗದಿತ ಹೆಗ್ಗೇರಿ ಸ್ಮಶಾನಕ್ಕೆ ಗೌರವಯುತವಾಗಿ ಕೋವಿಡ್-19 ರ ನಿಯಮಾವಳಿಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಲು ಕ್ರಮ ಜರುಗಿಸಲಾಗುತ್ತಿದೆ.

ನಿಧನರಾದ ಸೋಂಕಿತರ ಕುಟುಂಬದ ಸದಸ್ಯರು ಮಹಾನಗರ ಪಾಲಿಕೆಯ ಸಹಾಯವಾಣಿ - 0836-2213888, 9141051611 ಹಾಗೂ 0836-2213898 ಸಂಖ್ಯೆಗೆ ಕರೆ ಮಾಡಿ ತಿಳಿಸಿದರೆ ತಕ್ಷಣ ನೆರವಿಗೆ ದಾವಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ಹುಬ್ಬಳ್ಳಿ: ಕೊರೊನಾ ಸೋಂಕಿತರ ಮೃತ ದೇಹ ಸಾಗಣೆಗೆ ಉಚಿತವಾಗಿ ವಾಹನ ಸೌಲಭ್ಯ, ಸಂಸ್ಕಾರಕ್ಕೆ ತಗಲುವ ವೆಚ್ಚವನ್ನು ಪಾಲಿಕೆಯಿಂದ ಭರಿಸಿ ಉಚಿತವಾಗಿ ಶವಸಂಸ್ಕಾರ ನೆರವೇರಿಸಲು ಪಾಲಿಕೆಯಿಂದ ಕ್ರಮ ಕೈಗೊಳ್ಳಲಾಗಿದೆ.

ಹು-ಧಾ ಪಾಲಿಕೆ ವತಿಯಿಂದ ಉಚಿತವಾಗಿ ಕೊರೊನಾ ಸೋಂಕಿತರ ಅಂತ್ಯಕ್ರಿಯೆಗೆ ನಿರ್ಧಾರ

ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೋವಿಡ್-19 ಸೊಂಕಿನಿಂದ ಮೃತಪಟ್ಟ ದೇಹಗಳನ್ನು ಸಾಗಿಸಲು ಆ್ಯಂಬುಲೆನ್ಸ್​ ಮಾಲೀಕರು ಮೃತರ ಕುಟುಂಬದವರಿಂದ ಹೆಚ್ಚಿನ ಹಣ ಸಂಗ್ರಹಣೆ ಮಾಡುತ್ತಿರುವುದು ಕಂಡು ಬಂದಿದೆ. ಈ ಹಿನ್ನೆಲೆ ಸಾರ್ವಜನಿಕರಿಗೆ ಆಗುತ್ತಿರುವ ತೊಂದರೆಯನ್ನು ನಿವಾರಿಸಲು ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯಿಂದ ಕೋವಿಡ್-19 ಸೋಂಕಿನಿಂದ ಮೃತಪಟ್ಟ ದೇಹಗಳನ್ನು ಕಿಮ್ಸ್, ಜಿಲ್ಲಾಸ್ಪತ್ರೆ ಹಾಗೂ ಎಸ್‍ಡಿಎಂ ಸೇರಿದಂತೆ ಖಾಸಗಿ ಆಸ್ಪತ್ರೆಗಳಿಂದ ನಿಗದಿತ ಹೆಗ್ಗೇರಿ ಸ್ಮಶಾನಕ್ಕೆ ಗೌರವಯುತವಾಗಿ ಕೋವಿಡ್-19 ರ ನಿಯಮಾವಳಿಗಳ ಪ್ರಕಾರ ಅಂತ್ಯಸಂಸ್ಕಾರ ಮಾಡಲು ಕ್ರಮ ಜರುಗಿಸಲಾಗುತ್ತಿದೆ.

ನಿಧನರಾದ ಸೋಂಕಿತರ ಕುಟುಂಬದ ಸದಸ್ಯರು ಮಹಾನಗರ ಪಾಲಿಕೆಯ ಸಹಾಯವಾಣಿ - 0836-2213888, 9141051611 ಹಾಗೂ 0836-2213898 ಸಂಖ್ಯೆಗೆ ಕರೆ ಮಾಡಿ ತಿಳಿಸಿದರೆ ತಕ್ಷಣ ನೆರವಿಗೆ ದಾವಿಸಲಾಗುವುದು ಎಂದು ಪಾಲಿಕೆ ಆಯುಕ್ತ ಗುರುದತ್ತ ಹೆಗಡೆ ತಿಳಿಸಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.