ಹುಬ್ಬಳ್ಳಿ : ಮೂವರು ಐನಾತಿ ಮನೆಗಳ್ಳರನ್ನು ವಶಕ್ಕೆ ಪಡೆಯುವಲ್ಲಿ ಗೋಕುಲ ರೋಡ್ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.
ಪ್ರೇಮಕುಮಾರ ಭೀಮಪ್ಪ ಪೂಜಾರ, ವಿರೇಶ ಜಂಬುನಾಥ ಕಾಂಬಳೆ, ರಾಘವೇಂದ್ರ ಮಲ್ಲಪ್ಪ ಸಲಗಾರ ಬಂಧಿತ ಆರೋಪಿಗಳು. ಇವರು ಮನೆಗಳ ಬೀಗ ಮುರಿದು ಕಳ್ಳತನ ಮಾಡುತ್ತಿದ್ದರು. ಈ ಕುರಿತು ಗೋಕುಲ ರೋಡ್ ಪೊಲೀಸ್ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣ ದಾಖಲಾಗಿದ್ದವು.
ಪ್ರಕರಣ ತನಿಖೆ ನಡೆಸಿದ ಪೊಲೀಸರು ಮೂವರು ಖದೀಮರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರಿಂದ ದ್ವಿಚಕ್ರ ವಾಹನ, ಲ್ಯಾಪ್ಟಾಪ್, ಟಿವಿ ಹಾಗೂ ಬೆಳ್ಳಿಯ ಆಭರಣಗಳನ್ನು ವಶಕ್ಕೆ ಪಡೆಯಲಾಗಿದೆ.