ಧಾರವಾಡ : ಹೆಸರಾಂತ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರ ಪದ್ಮಶ್ರೀ ಪ್ರೊ.ಎಂ.ವೆಂಕಟೇಶ್ ಕುಮಾರ್ ಅವರು ಮಧ್ಯಪ್ರದೇಶ ಸರ್ಕಾರ ನೀಡುವ ಪ್ರತಿಷ್ಠಿತ ಕಾಳಿದಾಸ ಸಮ್ಮಾನ್ ಪ್ರಶಸ್ತಿಗೆ ಭಾಜನರಾಗಿದ್ದಾರೆ.
2017ನೇ ಸಾಲಿನ ಪುರಸ್ಕಾರ ಕಳೆದ ಡಿಸೆಂಬರ್ನಲ್ಲಿ ಪ್ರಕಟವಾಗಿದೆ. ಹಿಂದೂಸ್ತಾನಿ ಸಂಗೀತ ಕ್ಷೇತ್ರಕ್ಕೆ ಅವರು ನೀಡಿರುವ ಕೊಡುಗೆ, ಸಾಧನೆಗಳನ್ನು ಆಧರಿಸಿ ಈ ಪ್ರಶಸ್ತಿ ನೀಡಲಾಗಿದೆ ಎಂದು ಮಧ್ಯಪ್ರದೇಶ ಸರ್ಕಾರದ ಸಂಸ್ಕೃತಿ ಸಂಚಾಲನಾಯದ ಸಂಚಾಲಕ ಆದಿತಿಕುಮಾರ್ ತ್ರಿಪಾಠಿ ತಿಳಿಸಿದ್ದಾರೆ.
ಪ್ರಶಸ್ತಿಯು 2 ಲಕ್ಷ ರೂ.ಗಳ ನಗದು ಹಾಗೂ ಸ್ಮರಣಿಕೆಗಳನ್ನು ಒಳಗೊಂಡಿದೆ.
ಇದನ್ನೂ ಓದಿ: ಉಡುಪಿ: ರಸ್ತೆ ದಾಟುತ್ತಿದ್ದ ಮೂವರಿಗೆ ಡಿಕ್ಕಿ ಹೊಡೆದ ಕಾರು-ಭೀಕರ ದೃಶ್ಯ ಸಿಸಿಟಿಯಲ್ಲಿ ಸೆರೆ