ETV Bharat / state

ಧಾರವಾಡ: ಲಾರಿಗೆ ಸಿಲುಕಿ ಕರ್ತವ್ಯನಿರತ ಕಾನ್ಸ್‌ಟೇಬಲ್ ಸಾವು - CCTV VIDEO

author img

By

Published : Sep 4, 2021, 12:24 PM IST

ಧಾರವಾಡದ ಕೆಎಂಎಫ್ ಬಳಿ ನಡೆದ ಅಪಘಾತದಲ್ಲಿ ಕರ್ತವ್ಯನಿರತ ಕಾನ್ಸ್​ಟೇಬಲ್​ ಮೃತಪಟ್ಟಿದ್ದಾರೆ. ಈ ಘಟನೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

dharwad-constable-died-in-accident-cctv-video
ಧಾರವಾಡ: ಲಾರಿಗೆ ಸಿಲುಕಿ ಕರ್ತವ್ಯನಿರತ ಕಾನ್ಸ್‌ಟೇಬಲ್ ಸಾವು... CCTV VIDEO

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ನಿನ್ನೆ ಕರ್ತವ್ಯನಿರತ ಪೊಲೀಸ್​​ ಕಾನ್ಸ್‌ಟೇಬಲ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

dharwad-constable-died-in-accident-cctv-video
ಕಾನ್ಸ್‌ಟೇಬಲ್ ನಿಂಗಪ್ಪ ಭೂಸಣ್ಣವರ

ಧಾರವಾಡ ವಿದ್ಯಾಗಿರಿ ಠಾಣೆಯ ಸಿಬ್ಬಂದಿ ನಿಂಗಪ್ಪ ಭೂಸಣ್ಣವರ, ಕೆಎಂಎಫ್ ಬಳಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಬೋರ್​​ವೆಲ್ ಲಾರಿಯ ಎಡಭಾಗದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು.

ಸಿಸಿಟಿವಿ ವಿಡಿಯೋ

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಊಟ ಕೊಡಲು ಕಾನ್ಸ್‌ಟೇಬಲ್ ನಿಂಗಪ್ಪ ಭೂಸಣ್ಣವರ ಹೊರಟಿದ್ದರು. ಅಪಘಾತದ ದೃಶ್ಯವು ಅಂಗಡಿಯಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಸಿಬ್ಬಂದಿಗೆ ಊಟ ನೀಡಲು ತೆರಳುತ್ತಿದ್ದ ಪೊಲೀಸ್ ಕಾನ್ಸ್​​​ಟೇಬಲ್ ಅಪಘಾತಕ್ಕೆ ಬಲಿ

ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆ ನಿನ್ನೆ ಕರ್ತವ್ಯನಿರತ ಪೊಲೀಸ್​​ ಕಾನ್ಸ್‌ಟೇಬಲ್ ಅಪಘಾತದಲ್ಲಿ ಸಾವನ್ನಪ್ಪಿದ್ದು, ಘಟನೆಯ ದೃಶ್ಯ ಸಿಸಿಟಿವಿ ಕ್ಯಾಮರಾದಲ್ಲಿ ಸೆರೆಯಾಗಿದೆ.

dharwad-constable-died-in-accident-cctv-video
ಕಾನ್ಸ್‌ಟೇಬಲ್ ನಿಂಗಪ್ಪ ಭೂಸಣ್ಣವರ

ಧಾರವಾಡ ವಿದ್ಯಾಗಿರಿ ಠಾಣೆಯ ಸಿಬ್ಬಂದಿ ನಿಂಗಪ್ಪ ಭೂಸಣ್ಣವರ, ಕೆಎಂಎಫ್ ಬಳಿ ಬೈಕ್​ನಲ್ಲಿ ತೆರಳುತ್ತಿದ್ದ ವೇಳೆ ಬೋರ್​​ವೆಲ್ ಲಾರಿಯ ಎಡಭಾಗದಡಿ ಸಿಲುಕಿ ಸ್ಥಳದಲ್ಲೇ ಮೃತಪಟ್ಟಿದ್ದರು.

ಸಿಸಿಟಿವಿ ವಿಡಿಯೋ

ಚುನಾವಣಾ ಕರ್ತವ್ಯ ನಿರತ ಸಿಬ್ಬಂದಿಗೆ ಊಟ ಕೊಡಲು ಕಾನ್ಸ್‌ಟೇಬಲ್ ನಿಂಗಪ್ಪ ಭೂಸಣ್ಣವರ ಹೊರಟಿದ್ದರು. ಅಪಘಾತದ ದೃಶ್ಯವು ಅಂಗಡಿಯಲ್ಲಿನ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಅಪಘಾತದ ಸ್ಥಳಕ್ಕೆ ಪೊಲೀಸ್ ಆಯುಕ್ತ ಲಾಬೂರಾಮ್ ಸೇರಿ, ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಇದನ್ನೂ ಓದಿ: ಸಿಬ್ಬಂದಿಗೆ ಊಟ ನೀಡಲು ತೆರಳುತ್ತಿದ್ದ ಪೊಲೀಸ್ ಕಾನ್ಸ್​​​ಟೇಬಲ್ ಅಪಘಾತಕ್ಕೆ ಬಲಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.