ಧಾರವಾಡ: ದೇಶಾದ್ಯಂತ ಕೊರೊನಾ ವೈರಸ್ ಭೀತಿ ಹಿನ್ನೆಲೆ, ಜಿಲ್ಲೆಯಲ್ಲಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ದೀಪಾ ಚೋಳನ್ ತಿಳಿಸಿದರು.
ಈ ಕುರಿತು ಮಾತನಾಡಿರುವ ಜಿಲ್ಲಾಧಿಕಾರಿ ದೀಪಾ ಚೋಳನ್, ಧಾರವಾಡ ಜಿಲ್ಲೆಯಲ್ಲಿ ಇಲ್ಲಿಯವರೆಗೆ ಯಾವುದೇ ಪ್ರಕರಣ ಕಂಡು ಬಂದಿಲ್ಲ. ವೈರಸ್ ಕುರಿತು ಜನರಿಗೆ ಹೆಚ್ಚು ತಿಳಿವಳಿಕೆ ಮೂಡಿಸುತ್ತಿದ್ದೇವೆ ಎಂದರು.
ಸೋಂಕು ಇರುವ ವ್ಯಕ್ತಿ ಬಳಿ ಹೋದರೆ ಮಾತ್ರ ಈ ವೈರಸ್ ಬರುತ್ತೆ. ಇದು ಗಾಳಿಯಲ್ಲಿ ಹರಡುವಂತಹದಲ್ಲ. ಎಲ್ಲರೂ ಮಾಸ್ಕ್ ಹಾಕಿಕೊಳ್ಳಬೇಕಿಲ್ಲ ಯಾರಿಗೆ ನೆಗಡಿ, ಶೀತ ಇರುತ್ತೆ ಅವರು ಮಾತ್ರ ಮಾಸ್ಕ್ ಹಾಕಿಕೊಳ್ಳಬೇಕು. ಧಾರವಾಡ ಜಿಲ್ಲೆಯ ಜನ ಭಯ ಪಡಬೇಕಾಗಿಲ್ಲ ಎಂದು ಧೈರ್ಯ ತುಂಬಿದ್ದಾರೆ.