ಹುಬ್ಬಳ್ಳಿ : ಅಕಾಲಿಕ ಮಳೆ ಹಾಗೂ ಬೆಳೆಗೆ ಸರಿಯಾದ ಬೆಲೆ ಸಿಗದ ಹಿನ್ನಲೆ ರೈತರೊಬ್ಬರು ತಾವು ಬೆಳೆದ ಮೆಣಸಿನಕಾಯಿ ಬೆಳೆಯನ್ನು ನಾಶಪಡಿಸಿರುವ ಘಟನೆ ಹುಬ್ಬಳ್ಳಿ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿ ನಡೆದಿದೆ.
ರೈತ ಜೈಪಾಲ ಯೋಗಪ್ಪನವರ ತಮ್ಮ ಮೂರು ಎಕರೆ ಜಮೀನಿನಲ್ಲಿ ಮೆಣಸಿನಕಾಯಿ ಬೆಳೆದಿದ್ದರು. ಆದರೆ, ಅಕಾಲಿಕ ಮಳೆ ಪರಿಣಾಮ ನಿರೀಕ್ಷೆಗೆ ತಕ್ಕಂತೆ ಬೆಳೆ ಬಂದಿರಲಿಲ್ಲ. ಜೊತೆಗೆ ಬೆಳೆಗೆ ಸರಿಯಾದ ಬೆಲೆ ಸಿಗದ ಕಾರಣ ಟ್ರ್ಯಾಕ್ಟರ್ ಮೂಲಕ ಬೆಳೆಯನ್ನು ನಾಶಪಡಿಸಿದ್ದಾರೆ.