ETV Bharat / state

ಸಾಲಬಾಧೆ: ಬನ್ನಿ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ರೈತ

ಸಾಲಬಾಧೆಯಿಂದ ಬೇಸತ್ತು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ಪಟ್ಟಣದಲ್ಲಿ ನಡೆದಿದೆ.‌

author img

By

Published : Oct 18, 2019, 9:11 AM IST

ರೈತ ಆತ್ಮಹತ್ಯೆ

ಹುಬ್ಬಳ್ಳಿ : ಸಾಲಬಾಧೆಯಿಂದ ಬೇಸತ್ತು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ಪಟ್ಟಣದಲ್ಲಿ ನಡೆದಿದೆ.‌

ವಿರೂಪಾಕ್ಷಪ್ಪ ಕೊಪ್ಪದ ಎಂಬ ರೈತ 16 ಎಕರೆ ಜಮೀನು ಹೊಂದಿದ್ದು, ಖಾಸಗಿ ಬ್ಯಾಂಕ್ ಸೇರಿದಂತೆ ಬೇರೆ ಕಡೆಗಳಲ್ಲಿ 6 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಸತತ ಮೂರು ವರ್ಷ ಬರಗಾಲದಿಂದ ಬೆಳೆಹಾನಿಯಾಗಿತ್ತು. ಈ ವರ್ಷವಾದ್ರೂ ಒಳ್ಳೆಯ ಫಸಲು ಬರಬಹುದೆಂದು ವಿರೂಪಾಕ್ಷಪ್ಪ ನಿರೀಕ್ಷಿಸಿದ್ದರು. ಆದರೆ ನಿರಂತರ ಮಳೆಯಿಂದ ಬೆಳೆದ ಬೆಳೆಯೆಲ್ಲ ಕೊಳೆತು ನಾಶವಾಗಿದ್ದರಿಂದ ತೀವ್ರವಾಗಿ ಮನನೊಂದು ತಮ್ಮ ಜಮೀನಿನಲ್ಲಿದ್ದ ಬನ್ನಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ : ಸಾಲಬಾಧೆಯಿಂದ ಬೇಸತ್ತು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ ಕುಂದಗೋಳ ಪಟ್ಟಣದಲ್ಲಿ ನಡೆದಿದೆ.‌

ವಿರೂಪಾಕ್ಷಪ್ಪ ಕೊಪ್ಪದ ಎಂಬ ರೈತ 16 ಎಕರೆ ಜಮೀನು ಹೊಂದಿದ್ದು, ಖಾಸಗಿ ಬ್ಯಾಂಕ್ ಸೇರಿದಂತೆ ಬೇರೆ ಕಡೆಗಳಲ್ಲಿ 6 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಸತತ ಮೂರು ವರ್ಷ ಬರಗಾಲದಿಂದ ಬೆಳೆಹಾನಿಯಾಗಿತ್ತು. ಈ ವರ್ಷವಾದ್ರೂ ಒಳ್ಳೆಯ ಫಸಲು ಬರಬಹುದೆಂದು ವಿರೂಪಾಕ್ಷಪ್ಪ ನಿರೀಕ್ಷಿಸಿದ್ದರು. ಆದರೆ ನಿರಂತರ ಮಳೆಯಿಂದ ಬೆಳೆದ ಬೆಳೆಯೆಲ್ಲ ಕೊಳೆತು ನಾಶವಾಗಿದ್ದರಿಂದ ತೀವ್ರವಾಗಿ ಮನನೊಂದು ತಮ್ಮ ಜಮೀನಿನಲ್ಲಿದ್ದ ಬನ್ನಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Intro:ಹುಬ್ಬಳ್ಳಿ-04

ಸಾಲ ಬಾಧೆಯಿಂದ ಬೆಸತ್ತು ರೈತನೋರ್ವ ಆತ್ಮಹತ್ಯೆ ಮಾಡಿಕೊಂಡ ಘಟನೆ
ಕುಂದಗೋಳ ಪಟ್ಟಣದಲ್ಲಿ ನಡೆದಿದೆ.‌ ವಿರೂಪಾಕ್ಷಪ್ಪ ಕೊಪ್ಪದ ಆತ್ಮಹತ್ಯೆ ಮಾಡಿಕೊಂಡ ರೈತ.
16 ಎಕರೆ ಜಮೀನು ಹೊಂದಿರುವ ಇವರು
ಖಾಸಗಿ ಬ್ಯಾಂಕ್ ಸೇರಿದಂತೆ ಬೇರೆ ಕಡೆಗಳಲ್ಲಿ 6 ಲಕ್ಷ ರೂಪಾಯಿ ಸಾಲ ಮಾಡಿದ್ದರು. ಸತತ ಬರಗಾಲದ ಹಾಗೂ ನಿರಂತರವಾಗಿ ಸುರಿದ ಮಳೆಯಿಂದ ಬೆಳೆ ನಾಶವಾಗಿದ್ದರಿಂದ ಮನನೊಂದು ತಮ್ಮ ಜಮೀನಿನ ಬನ್ನಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಈ‌ ಸಂಬಂಧ
ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.Body:H B GaddadConclusion:Etv hubli
ETV Bharat Logo

Copyright © 2024 Ushodaya Enterprises Pvt. Ltd., All Rights Reserved.