ETV Bharat / state

ಮಹಾನಗರ ಪಾಲಿಕೆ ಚುನಾವಣೆಗೆ ಗುಂಪು ಪ್ರಚಾರ ನಿಷೇಧ: ಜಿಲ್ಲಾ ಚುನಾವಣಾಧಿಕಾರಿ ಆದೇಶ - ಲ್ಲಿ ಕೋವಿಡ್ ಸೋಂಕು

ಪಾಲಿಕೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗವು ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾನದ ಪರಿಚ್ಛೇದ 243 ಝೆಡ್‍ ಎ ಅನ್ವಯ ಕೆಲವು ನಿರ್ದೇಶನಗಳನ್ನು ನೀಡಿ ಆದೇಶಿಸಿದೆ. ಅದನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ ಎಚ್ಚರಿಕೆ ನೀಡಿದ್ದಾರೆ.

ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ
ಜಿಲ್ಲಾ ಚುನಾವಣಾಧಿಕಾರಿ ನಿತೇಶ್ ಪಾಟೀಲ
author img

By

Published : Aug 18, 2021, 6:07 PM IST

ಧಾರವಾಡ: ರಾಜ್ಯದಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆ ಪ್ರಸ್ತುತ ಘೋಷಣೆ ಆಗಿರುವ ಹುಬ್ಬಳ್ಳಿ - ಧಾರವಾಡ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಹಾಗೂ ಬಹಿರಂಗ ಪ್ರಚಾರಕ್ಕೆ ಮಾರ್ಗಸೂಚಿಗಳನ್ನು ನೀಡಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.

ಅದನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಚುನಾವಣಾ ಆಯೋಗವು ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾನದ ಪರಿಚ್ಛೇದ 243 ಝೆಡ್‍ ಎ ಅನ್ವಯ ಕೆಲವು ನಿರ್ದೇಶನಗಳನ್ನು ನೀಡಿ ಆದೇಶಿಸಿದೆ. ಅಭ್ಯರ್ಥಿಯೂ ಸೇರಿ ಗರಿಷ್ಠ 5 ಜನ ಬೆಂಬಲಿಗರೊಂದಿಗೆ ಫೇಸ್‍ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸಬಹುದು.

ಪ್ರಚಾರಕ್ಕೆ ವಾಹನ ಬಳಸುವುದನ್ನು ಮತ್ತು ಗುಂಪು ಗುಂಪು ಸೇರಿ ಪ್ರಚಾರ ಮಾಡುವುದನ್ನು ನಿಷೇಧಿಸಿದೆ. ಮುದ್ರಣ ಹಾಗೂ ವಿದ್ಯುನ್ಮಾನ (ಇಲೆಕ್ಟ್ರಾನಿಕ್​ ಮೀಡಿಯಾ) ಮಾಧ್ಯಮದಲ್ಲಿ ಪ್ರಚಾರ ಕೈಗೊಳ್ಳಬಹುದು ಮತ್ತು ಅವುಗಳ ವೆಚ್ಚದ ವಿವರವನ್ನು ಸಲ್ಲಿಸಬೇಕು.

ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರ ಹಂಚಬಹುದು. ಈ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ್​ ಧರಿಸಿರಬೇಕು ಎಂದು ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಅದರಂತೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವತ್ರಿಕ ಚುನಾವಣೆಗಾಗಿ ಕೈಗೊಳ್ಳುವ ಪ್ರಚಾರ ಕಾರ್ಯದಲ್ಲಿ ಆಯೋಗವು ನೀಡಿರುವ ಆದೇಶವನ್ನು ಕಡ್ಡಾಯವಾಗಿ ಎಲ್ಲ ಅಭ್ಯರ್ಥಿಗಳು ಪಾಲಿಸಬೇಕು. ಈ ಕುರಿತು ಸದಾಚಾರ ಸಂಹಿತೆಯ ಸಮಿತಿ ಕಣ್ಗಾವಲು ವಹಿಸಿದ್ದು, ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ಧಾರವಾಡ: ರಾಜ್ಯದಲ್ಲಿ ಕೋವಿಡ್ ಸೋಂಕಿನ ಹಿನ್ನೆಲೆ ಪ್ರಸ್ತುತ ಘೋಷಣೆ ಆಗಿರುವ ಹುಬ್ಬಳ್ಳಿ - ಧಾರವಾಡ ಸಾರ್ವತ್ರಿಕ ಚುನಾವಣೆಗೆ ಸ್ಪರ್ಧಿಸಿರುವ ಅಭ್ಯರ್ಥಿಗಳು ಮನೆ ಮನೆ ಪ್ರಚಾರ ಹಾಗೂ ಬಹಿರಂಗ ಪ್ರಚಾರಕ್ಕೆ ಮಾರ್ಗಸೂಚಿಗಳನ್ನು ನೀಡಿ ರಾಜ್ಯ ಚುನಾವಣಾ ಆಯೋಗವು ಆದೇಶ ಹೊರಡಿಸಿದೆ.

ಅದನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಪಾಲಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಮತ್ತು ಜಿಲ್ಲಾಧಿಕಾರಿ ನಿತೇಶ್ ಪಾಟೀಲ ಸೂಚಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ರಾಜ್ಯ ಚುನಾವಣಾ ಆಯೋಗವು ಅಭ್ಯರ್ಥಿಗಳು ಪ್ರಚಾರ ಕೈಗೊಳ್ಳುವ ಕುರಿತು ಭಾರತ ಸಂವಿಧಾನದ ಪರಿಚ್ಛೇದ 243 ಝೆಡ್‍ ಎ ಅನ್ವಯ ಕೆಲವು ನಿರ್ದೇಶನಗಳನ್ನು ನೀಡಿ ಆದೇಶಿಸಿದೆ. ಅಭ್ಯರ್ಥಿಯೂ ಸೇರಿ ಗರಿಷ್ಠ 5 ಜನ ಬೆಂಬಲಿಗರೊಂದಿಗೆ ಫೇಸ್‍ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಂಡು ಮನೆ ಮನೆಗೆ ಭೇಟಿ ನೀಡಿ ಪ್ರಚಾರ ನಡೆಸಬಹುದು.

ಪ್ರಚಾರಕ್ಕೆ ವಾಹನ ಬಳಸುವುದನ್ನು ಮತ್ತು ಗುಂಪು ಗುಂಪು ಸೇರಿ ಪ್ರಚಾರ ಮಾಡುವುದನ್ನು ನಿಷೇಧಿಸಿದೆ. ಮುದ್ರಣ ಹಾಗೂ ವಿದ್ಯುನ್ಮಾನ (ಇಲೆಕ್ಟ್ರಾನಿಕ್​ ಮೀಡಿಯಾ) ಮಾಧ್ಯಮದಲ್ಲಿ ಪ್ರಚಾರ ಕೈಗೊಳ್ಳಬಹುದು ಮತ್ತು ಅವುಗಳ ವೆಚ್ಚದ ವಿವರವನ್ನು ಸಲ್ಲಿಸಬೇಕು.

ಪ್ರಚಾರಕ್ಕಾಗಿ ನಿಯಮಾನುಸಾರ ಮುದ್ರಿಸಿದ ಕರಪತ್ರ ಹಂಚಬಹುದು. ಈ ಸಮಯದಲ್ಲಿ ಕಡ್ಡಾಯವಾಗಿ ಮಾಸ್ಕ್​ ಧರಿಸಿರಬೇಕು ಎಂದು ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.

ಅದರಂತೆ ಹುಬ್ಬಳ್ಳಿ - ಧಾರವಾಡ ಮಹಾನಗರ ಪಾಲಿಕೆಯ ವ್ಯಾಪ್ತಿಯಲ್ಲಿ ಸಾರ್ವತ್ರಿಕ ಚುನಾವಣೆಗಾಗಿ ಕೈಗೊಳ್ಳುವ ಪ್ರಚಾರ ಕಾರ್ಯದಲ್ಲಿ ಆಯೋಗವು ನೀಡಿರುವ ಆದೇಶವನ್ನು ಕಡ್ಡಾಯವಾಗಿ ಎಲ್ಲ ಅಭ್ಯರ್ಥಿಗಳು ಪಾಲಿಸಬೇಕು. ಈ ಕುರಿತು ಸದಾಚಾರ ಸಂಹಿತೆಯ ಸಮಿತಿ ಕಣ್ಗಾವಲು ವಹಿಸಿದ್ದು, ಉಲ್ಲಂಘನೆ ಕಂಡು ಬಂದಲ್ಲಿ ತಕ್ಷಣ ಕಾನೂನಾತ್ಮಕ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.