ಧಾರವಾಡ: ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದ ತಾಲೂಕಿನ ಹಾರೋ ಬೆಳವಡಿ ಬಳಿಯ ತಾತ್ಕಾಲಿಕ ಸೇತುವೆ ಮುಳುಗಡೆಯಾಗಿದೆ.
ಧಾರವಾಡ ತಾಲೂಕಿನ ಹಾರೋಬೆಳವಡಿ ಗ್ರಾಮದ ಸಮೀಪವಿರುವ ಈ ತಾತ್ಕಾಲಿಕ ಸೇತುವೆ ಮೇಲೆ ನೀರು ತುಂಬಿ ಹರಿಯುತ್ತಿದೆ. ಕಳೆದ ಆಗಸ್ಟ್ ನಲ್ಲಿ ಸೇತುವೆ ಕೊಚ್ಚಿ ಹೋಗಿತ್ತು. ಸೇತುವೆ ದುರಸ್ತಿ ಕಾರ್ಯ ನಡೆದಿದ್ದ ಹಿನ್ನೆಲೆ ಪಕ್ಕದಲ್ಲಿ ತಾತ್ಕಾಲಿಕ ಸೇತುವೆ ನಿರ್ಮಿಸಲಾಗಿತ್ತು. ಅದರ ಮೇಲಿಂದ ಹಳ್ಳದ ನೀರು ಹರಿದು ಹೋಗುತ್ತಿದೆ.
ತುಪ್ಪರಿ ಹಳ್ಳಕ್ಕೆ ಈ ತಾತ್ಕಾಲಿಕ ಸೇತುವೆ ಕಟ್ಟಲಾಗಿದೆ. ಇದೀಗ ನೀರು ತುಂಬಿ ಹರಿಯುತ್ತಿರುವುದರಿಂದ ಧಾರವಾಡ-ಸವದತ್ತಿ ರಸ್ತೆ ಸಂಚಾರ ಬಂದ್ ಆಗಿದೆ.