ETV Bharat / state

ಗುಡೇನಕಟ್ಟಿ ಗ್ರಾಮ ಜಲಾವೃತ: ಮನೆಗಳು ಕುಸಿಯುವ ಭೀತಿ!

author img

By

Published : Aug 13, 2019, 9:41 PM IST

ಕುಂದಗೋಳ ತಾಲೂಕಿನಲ್ಲಿ ಮೊದಲೇ ಬೆಣ್ಣೆಹಳ್ಳ, ಸೀಮೆಹಳ್ಳ ತುಂಬಿ ಹರಿಯುತ್ತಿದ್ದು, ಅದರಂತೆ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿನ ಜೈನ್ ಮಂದಿರದ ಓಣಿ ಕೂಡಾ ಸಂಪೂರ್ಣ ಜಲಾವೃತಗೊಂಡಿದೆ‌.

ಹೊಲಗಳು ಜಲಾವೃತ

ಹುಬ್ಬಳ್ಳಿ: ನಿರಂತರ ಸುರಿದ ಮಳೆಗೆ ಗುಡೇನಕಟ್ಟಿ ಗ್ರಾಮ ಜಲಾವೃತಗೊಂಡಿದ್ದು, ಜನ ಪರದಾಡುವಂತಾಗಿದೆ. ಕುಂದಗೋಳ ತಾಲೂಕಿನಲ್ಲಿ ಮೊದಲೇ ಬೆಣ್ಣೆಹಳ್ಳ, ಸೀಮೆಹಳ್ಳ ತುಂಬಿ ಹರಿಯುತ್ತಿದ್ದು, ಅದರಂತೆ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿನ ಜೈನ್ ಮಂದಿರದ ಓಣಿ ಕೂಡಾ ಸಂಪೂರ್ಣ ಜಲಾವೃತಗೊಂಡಿದೆ‌.

ಮನೆಗಳ ಸುತ್ತ ನೀರು ನಿಂತಿದ್ದು, ಕುಸಿಯುವ ಭೀತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ, ಕುಂದಗೋಳ ತಾಲೂಕಿನ ತಹಶೀಲ್ದಾರ್​, ನೋಡಲ್ ಅಧಿಕಾರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ಗುಡೇನಕಟ್ಟಿ ಗ್ರಾಮ ಜಲಾವೃತ

ಹೀಗಾಗಿ ಮುಂದಾಗುವ ಅನಾಹುತಗಳನ್ನು ತಪ್ಪಿಸಲು ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನಹರಿಸಬೇಕು. ನಿಂತ ನೀರನ್ನು ತೆರವುಗೊಳಿಸುವ ಕಾರ್ಯ ಮಾಡಬೇಕು. ಅಲ್ಲದೇ ತಾಲೂಕಿನ ಹಳ್ಳಕೊಳ್ಳಗಳು ತುಂಬಿ ಹರಿದ ಪರಿಣಾಮ ವ್ಯವಸಾಯ ಭೂಮಿಗಳ ಒಡ್ಡು ಒಡೆದು ಸಾವಿರಾರು ಎಕರೆಯಲ್ಲಿ ಬೆಳೆದ ಬೆಳೆಗಳು ನಾಶವಾಗಿವೆ. ಕೂಡಲೇ ಅತಿವೃಷ್ಟಿಯ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

ಹುಬ್ಬಳ್ಳಿ: ನಿರಂತರ ಸುರಿದ ಮಳೆಗೆ ಗುಡೇನಕಟ್ಟಿ ಗ್ರಾಮ ಜಲಾವೃತಗೊಂಡಿದ್ದು, ಜನ ಪರದಾಡುವಂತಾಗಿದೆ. ಕುಂದಗೋಳ ತಾಲೂಕಿನಲ್ಲಿ ಮೊದಲೇ ಬೆಣ್ಣೆಹಳ್ಳ, ಸೀಮೆಹಳ್ಳ ತುಂಬಿ ಹರಿಯುತ್ತಿದ್ದು, ಅದರಂತೆ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿನ ಜೈನ್ ಮಂದಿರದ ಓಣಿ ಕೂಡಾ ಸಂಪೂರ್ಣ ಜಲಾವೃತಗೊಂಡಿದೆ‌.

ಮನೆಗಳ ಸುತ್ತ ನೀರು ನಿಂತಿದ್ದು, ಕುಸಿಯುವ ಭೀತಿ ಎದುರಾಗಿದೆ. ಈ ಬಗ್ಗೆ ಗ್ರಾಮ ಪಂಚಾಯಿತಿ, ಕುಂದಗೋಳ ತಾಲೂಕಿನ ತಹಶೀಲ್ದಾರ್​, ನೋಡಲ್ ಅಧಿಕಾರಿ, ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾ ಅಧಿಕಾರಿಗಳ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ ಎನ್ನಲಾಗಿದೆ.

ಗುಡೇನಕಟ್ಟಿ ಗ್ರಾಮ ಜಲಾವೃತ

ಹೀಗಾಗಿ ಮುಂದಾಗುವ ಅನಾಹುತಗಳನ್ನು ತಪ್ಪಿಸಲು ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನಹರಿಸಬೇಕು. ನಿಂತ ನೀರನ್ನು ತೆರವುಗೊಳಿಸುವ ಕಾರ್ಯ ಮಾಡಬೇಕು. ಅಲ್ಲದೇ ತಾಲೂಕಿನ ಹಳ್ಳಕೊಳ್ಳಗಳು ತುಂಬಿ ಹರಿದ ಪರಿಣಾಮ ವ್ಯವಸಾಯ ಭೂಮಿಗಳ ಒಡ್ಡು ಒಡೆದು ಸಾವಿರಾರು ಎಕರೆಯಲ್ಲಿ ಬೆಳೆದ ಬೆಳೆಗಳು ನಾಶವಾಗಿವೆ. ಕೂಡಲೇ ಅತಿವೃಷ್ಟಿಯ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.

Intro:ಹುಬ್ಬಳಿ : ಸ್ಟ್ರಿಂಜರ್Body:ಸತತ ಮಳೆ : ಗುಡೇನಕಟ್ಟಿ ಗ್ರಾಮ ಹಾಗೂ ಹೋಲಗಳು ಜಲಾವೃತ

ಹುಬ್ಬಳ್ಳಿ:- ನಿರಂತರ ಸುರಿದ ಮಳೆಗೆ ಗುಡೇನಕಟ್ಟಿ ಗ್ರಾಮದಲ್ಲಿ ನೀರು ನಿಂತು ಜಲಾವೃತಗೊಂಡಿದ್ದು, ಜನ ಪರಿಪಾಟಲು ಅನುಭವಿಸುವಂತಾಗಿದೆ...

ಕುಂದಗೋಳ ತಾಲೂಕಿನಲ್ಲಿ ಮೊದಲೇ ಬೆನ್ನೆ ಹಳ್ಳ. ಸೀಮೆ ಹಳ್ಳ ತುಂಬಿ ಹರಿಯುತ್ತಿದ್ದು, ಅದರಂತೆ ತಾಲೂಕಿನ ಗುಡೇನಕಟ್ಟಿ ಗ್ರಾಮದಲ್ಲಿನ ಜೈನ್ ಮಂದಿರದ ಓಣಿ ಕೂಡಾ ಸಂಪೂರ್ಣ ಜಲಾವೃತಗೊಂಡಿದೆ‌. ಪರಿಣಾಮ ಸುತ್ತಮುತ್ತಲಿನ ಮನೆಗಳ ಪಕ್ಕ ನೀರು ನಿಂತಿದ್ದು ಕುಸಿಯುವ ಭೀತ್ತಿ ಎದುರಾಗಿದೆ. ಅಲ್ಲದೇ ಪ್ರತಿನಿತ್ಯ ಸಂಚರಿಸಲು ಕಷ್ಟವಾಗುತ್ತಿದೆ. ಈ ಬಗ್ಗೆ ಗ್ರಾಮ ಪಂಚಾಯತ, ಕುಂದಗೋಳ ತಾಲೂಕಿನ ತಹಶಿಲ್ದಾರ, ನೋಡಲ್ ಅಧಿಕಾರಿ, ತಾಲೂಕು ಪಂಚಾಯತ ಕಾರ್ಯ ನಿರ್ವಹಣಾ ಅಧಿಕಾರಿ, ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮುಂದಾಗುವ ಅನಾಹುತಗಳನ್ನು ತಪ್ಪಿಸಲು ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನಹರಿಸಿ ನಿಂತ ನೀರನ್ನು ತೆರವುಗೊಳಿಸುವ ಕಾರ್ಯ ಮಾಡಬೇಕು. ಅಲ್ಲದೇ ತಾಲೂಕಿನ ಹಳ್ಳ ಕೊಳ್ಳಗಳು ತುಂಬಿ ಹರಿದ ಪರಿಣಾಮ ವ್ಯವಸಾಯ ಭೂಮಿಗಳ ಒಡ್ಡು ಒಡೆದು ಸಾವಿರಾರು ಎಕರೆಯಲ್ಲಿ ಬೆಳೆದ ಬೆಳೆಗಳು ನಾಶವಾಗಿವೆ ಕೂಡಲೇ ಅತಿವೃಷ್ಟಿಯ ಸಮೀಕ್ಷೆ ನಡೆಸಿ ಸೂಕ್ತ ಪರಿಹಾರ ಒದಗಿಸಬೇಕೆಂದು ಗ್ರಾಮಸ್ಥರು ಆಗ್ರಹಿಸುತ್ತಿದ್ದಾರೆ.

ಬೈಟ್:- ಬಸವರಾಜ ಯೋಗಪ್ಪನವರ.ಬನಿಯನ್ ಹಾಕಿಕೊಂಡವ್ರು..

ಬೈಟ್:- ಅಡಿವೆಪ್ಪ ಹುಬ್ಬಳ್ಳಿ.


____________________________________________,_

ಯಲ್ಲಪ್ಪ‌ ಕುಂದಗೋಳ

ಹುಬ್ಬಳ್ಳಿ: ಸ್ಟ್ರಿಂಜರ
Conclusion:ಯಲ್ಲಪ್ಪ ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.