ETV Bharat / state

ಹುಬ್ಬಳ್ಳಿಯಲ್ಲಿ ಮಳೆಯ ಆರ್ಭಟ: ಜಲ ಸಂಕಷ್ಟಕ್ಕೆ ತುತ್ತಾದ ಮೂರು ಸಾವಿರ ಮಠ!

ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹುಬ್ಬಳ್ಳಿ ನಗರ ನಲುಗಿ ಹೋಗಿದ್ದು, ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

author img

By

Published : Aug 8, 2019, 10:36 PM IST

ಧಾರಾಕಾರ ಮಳೆಗೆ ನಲುಗಿ ಹೋದ ಹುಬ್ಬಳ್ಳಿ

ಹುಬ್ಬಳ್ಳಿ: ರಾಜ್ಯಾದ್ಯಂತ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯ ಅಬ್ಬರಕ್ಕೆ ಹುಬ್ಬಳ್ಳಿ ನಗರವು ಜಲಸಂಕಷ್ಟಕ್ಕೆ ತುತ್ತಾಗಿದೆ.

ಉತ್ತರ ಕರ್ನಾಟಕದ ಪ್ರಖ್ಯಾತ ಮೂರು ಸಾವಿರ ಮಠದ ಕರ್ತೃ ಗದ್ದುಗೆಗೆ ಇದೇ ಮೊದಲ ಬಾರಿಗೆ ನೀರು ನುಗ್ಗಿದೆ. ಮಠದೊಳಗೆ ನಿಂತಿರುವ ನೀರನ್ನು ಹೊರಹಾಕಲು ಹರಸಾಹಸ ಪಡುವಂತಾಗಿದೆ. ಆದರೆ ನೀರಿನ ನಡುವೆಯೂ ಕೂಡ ಅರ್ಚಕರು ಗದ್ದುಗೆಗೆ ‌ಪೂಜೆ ಪುನಸ್ಕಾರ ನೆರವೇರಿಸುತ್ತಿದ್ದಾರೆ.

ಧಾರಾಕಾರ ಮಳೆಗೆ ನಲುಗಿ ಹೋದ ಹುಬ್ಬಳ್ಳಿ

ಇನ್ನು ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಬೃಹತ್ ಮರವೊಂದು ಸಾರಿಗೆ ಬಸ್​ ಮೇಲೆ ಬಿದ್ದಿದೆ. ಪರಿಣಾಮ ಬಸ್​​​ನ ಮೇಲ್ಭಾಗ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್​ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಬಳಿಕ ಪಾಲಿಕೆ ಸಿಬ್ಬಂದಿ ಆಗಮಿಸಿ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ, ಹುಬ್ಬಳ್ಳಿಯ ಇಂದಿರಾ ನಗರದಲ್ಲೆಡೆ ನೀರು ತುಂಬಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಇನ್ನು ಅತಿವೃಷ್ಟಿ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಲಗುಂದ ವಿಧಾನಸಭಾ ಕ್ಷೇತ್ರದ ಬೆಣ್ಣೆ ಹಳ್ಳದಲ್ಲಿ ಪ್ರವಾಹದಿಂದ ಬೆಳೆಗಳು ಕೊಚ್ಚಿ ಹೋಗಿದ್ದು, ಜಮೀನುಗಳು ಜಲಾವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಗದೀಶ್ ಶೆಟ್ಟರ್ ಆದಷ್ಟು ಬೇಗ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದರು.

ಹುಬ್ಬಳ್ಳಿ: ರಾಜ್ಯಾದ್ಯಂತ ಸತತವಾಗಿ ಸುರಿಯುತ್ತಿರುವ ಭಾರಿ ಮಳೆಯ ಅಬ್ಬರಕ್ಕೆ ಹುಬ್ಬಳ್ಳಿ ನಗರವು ಜಲಸಂಕಷ್ಟಕ್ಕೆ ತುತ್ತಾಗಿದೆ.

ಉತ್ತರ ಕರ್ನಾಟಕದ ಪ್ರಖ್ಯಾತ ಮೂರು ಸಾವಿರ ಮಠದ ಕರ್ತೃ ಗದ್ದುಗೆಗೆ ಇದೇ ಮೊದಲ ಬಾರಿಗೆ ನೀರು ನುಗ್ಗಿದೆ. ಮಠದೊಳಗೆ ನಿಂತಿರುವ ನೀರನ್ನು ಹೊರಹಾಕಲು ಹರಸಾಹಸ ಪಡುವಂತಾಗಿದೆ. ಆದರೆ ನೀರಿನ ನಡುವೆಯೂ ಕೂಡ ಅರ್ಚಕರು ಗದ್ದುಗೆಗೆ ‌ಪೂಜೆ ಪುನಸ್ಕಾರ ನೆರವೇರಿಸುತ್ತಿದ್ದಾರೆ.

ಧಾರಾಕಾರ ಮಳೆಗೆ ನಲುಗಿ ಹೋದ ಹುಬ್ಬಳ್ಳಿ

ಇನ್ನು ನಗರದ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಬೃಹತ್ ಮರವೊಂದು ಸಾರಿಗೆ ಬಸ್​ ಮೇಲೆ ಬಿದ್ದಿದೆ. ಪರಿಣಾಮ ಬಸ್​​​ನ ಮೇಲ್ಭಾಗ ನಜ್ಜುಗುಜ್ಜಾಗಿದ್ದು ಅದೃಷ್ಟವಶಾತ್​ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಘಟನೆಯಿಂದ ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಪರದಾಡುವಂತಾಗಿತ್ತು. ಬಳಿಕ ಪಾಲಿಕೆ ಸಿಬ್ಬಂದಿ ಆಗಮಿಸಿ ಮರ ತೆರವುಗೊಳಿಸಿ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಅಷ್ಟೇ ಅಲ್ಲದೇ, ಹುಬ್ಬಳ್ಳಿಯ ಇಂದಿರಾ ನಗರದಲ್ಲೆಡೆ ನೀರು ತುಂಬಿದ್ದು ಜನ ಜೀವನ ಅಸ್ತವ್ಯಸ್ತಗೊಂಡಿದೆ.

ಇನ್ನು ಅತಿವೃಷ್ಟಿ ಪ್ರದೇಶಗಳಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ನವಲಗುಂದ ವಿಧಾನಸಭಾ ಕ್ಷೇತ್ರದ ಬೆಣ್ಣೆ ಹಳ್ಳದಲ್ಲಿ ಪ್ರವಾಹದಿಂದ ಬೆಳೆಗಳು ಕೊಚ್ಚಿ ಹೋಗಿದ್ದು, ಜಮೀನುಗಳು ಜಲಾವೃತಗೊಂಡಿದೆ. ಈ ಹಿನ್ನೆಲೆಯಲ್ಲಿ ಕೂಡಲೇ ಪರಿಹಾರ ನೀಡಬೇಕು ಎಂದು ರೈತರು ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಜಗದೀಶ್ ಶೆಟ್ಟರ್ ಆದಷ್ಟು ಬೇಗ ಪರಿಹಾರ ಕಾರ್ಯಗಳನ್ನು ಕೈಗೆತ್ತಿಕೊಳ್ಳುವುದಾಗಿ ಭರವಸೆ ನೀಡಿದರು.

Intro:ಹುಬ್ಬಳಿBody:ಸಾರಿಗೆ ಬಸ್ಸ ಮೇಲೆ ಬಿದ್ದ ಬೃಹತ್ ಮರ

ಹುಬ್ಬಳ್ಳಿ:- ಸತತವಾಗಿ ಸುರಿಯುತ್ತಿರುವ ಬಾರಿ ಮಳೆಯಿಂದಾಗಿ ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದ ಪಕ್ಕದಲ್ಲಿರುವ ಬೃಹತ್ ಮರವೊಂದು ಸಾರಿಗೆ ಬಸ್ಸ ಮೇಲೆ ಬಿದ್ದಿರುವ ಘಟನೆ ನಡೆದಿದೆ. ಪರಿಣಾಮ ಸಾರಿಗೆ ಬಸ್ಸಿನ ಮೇಲ್ಭಾಗ ನಗ್ಗು - ಗುಜ್ಜಾಗಿದ್ದು ಅದೃಷ್ಟವಶಾತ ಬಸ್ಸಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ಪ್ರಾಣಹಾನಿಯಾಗಿಲ್ಲ ,ಇನ್ನೂ ಮೊದಲೇ ವಾಹನಗಳ ಹೆಚ್ಚು ದಟ್ಟಣೆ ಹೊಂದಿರುವ ರಸ್ತೆ ಇದಾಗಿದ್ದು ಪರಿಣಾಮ ಬಹಳಷ್ಟು ಕಾಲ ಟ್ರಾಫಿಕ್ ಸಮಸ್ಯೆ ಉಂಟಾಗಿ ವಾಹನ ಸವಾರರು ಪರದಾಟ ನಡೆಸಿದರು. ಇನ್ನೂ ಪಾಲಿಕೆ ಸಿಬ್ಬಂದಿ ಆಗಮಿಸಿ ಮರವನ್ನು ತೆರವುಗೊಳಿಸಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಟ್ಟರು...

ಇನ್ನೂ ಹುಬ್ಬಳ್ಳಿಯ ಇಂದಿರಾ ನಗರದಲ್ಲೆಡೆ ನೀರು ತುಂಬಿದ್ದು ಜನರ ಜೀವನ ಅಸ್ತವ್ಯಸ್ಥಗೊಂಡಿದೆ.

__________________________

ಹುಬ್ಬಳ್ಳಿ_: ಸ್ಟ್ರಿಂಜರ

ಯಲ್ಲಪ್ಪ‌ ಕುಂದಗೋಳConclusion:ಯಲ್ಲಪ್‌ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.