ETV Bharat / state

6 ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ - ಹೈದರಾಬಾದ್ ​​ಬಸ್ ಸಂಚಾರ ಪುನಾರಂಭ

author img

By

Published : Sep 29, 2020, 9:26 PM IST

ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ- ಹೈದರಾಬಾದ್ ​​ಬಸ್ ಸಂಚಾರವನ್ನು ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಪುನಃ ಆರಂಭಿಸಲಾಗಿದೆ. ಎಲ್ಲ ಬಸ್​ಗಳಿಗೆ ಆನ್​ಲೈನ್​ ಮತ್ತು ಮುಂಗಡ ಬುಕ್ಕಿಂಗ್ ಕೌಂಟರ್​ಗಳ ಮೂಲಕ ಆಸನಗಳನ್ನು ಕಾಯ್ದಿರಿಸುವ ವ್ಯವಸ್ಥೆಯನ್ನು ಕಲ್ಪಿಸಿ ಕೊಡಲಾಗಿದೆ.

Hubli - Hyderabad Bus Resumption
ಹುಬ್ಬಳ್ಳಿ-ಹೈದರಾಬಾದ್ ​​ಬಸ್ ಸಂಚಾರ ಪುನರಾರಂಭ

ಹುಬ್ಬಳ್ಳಿ: ಲಾಕ್​ಡೌನ್​ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ - ಹೈದರಾಬಾದ್​​ ರಾಜ್ಯ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್​ಗಳ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಬಸ್​ಗಳು ಗೋಕುಲ್​ ರಸ್ತೆಯ ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾ.ಕ.ರ.ಸಾ. ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್​. ರಾಮನಗೌಡರ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 1 ಎಸಿ ಸ್ಲೀಪರ್ (ರಾತ್ರಿ 8-00ಕ್ಕೆ), 1 ನಾನ್ ಎಸಿ ಸ್ಲೀಪರ್ (ಸಂಜೆ 7-00ಕ್ಕೆ), 1 ರಾಜಹಂಸ (ಸಂಜೆ 7-30ಕ್ಕೆ) ಹಾಗೂ 2 ವೇಗದೂತ ಬಸ್​ಗಳ (ಬೆಳಗ್ಗೆ 7-00 ಮತ್ತು 8-00ಕ್ಕೆ) ಸಂಚಾರವನ್ನು ಆರಂಭಿಸಲಾಗಿದೆ.

ಬೆಳಗ್ಗೆ 7-00ಗಂಟೆಗೆ ಹೊರಡುವ ವೇಗದೂತ ಮತ್ತು ಎಲ್ಲ ಐಶಾರಾಮಿ ಬಸ್​ಗಳು ಗದಗ, ಕೊಪ್ಪಳ, ಗಂಗಾವತಿ, ಸಿಂಧನೂರು, ರಾಯಚೂರು, ಮೆಹಬೂಬ್​​ ನಗರ, ಝಡ್ ಚರ್ಲಾ ಮಾರ್ಗವಾಗಿ ಸಂಚರಿಸುತ್ತವೆ. ಬೆಳಗ್ಗೆ 8-00 ಗಂಟೆಗೆ ಹೊರಡುವ ವೇಗದೂತ ಬಸ್​ ನವಲಗುಂದ, ರೋಣ, ಗಜೇಂದ್ರಗಡ, ಕುಷ್ಟಗಿ, ಸಿಂಧನೂರು, ರಾಯಚೂರು, ಮೆಹಬೂಬ್ ನಗರ, ಝಡ್ ಚರ್ಲಾ ಮಾರ್ಗವಾಗಿ ಸಂಚರಿಸುತ್ತದೆ.

ಎಲ್ಲ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಬಸ್​ನಲ್ಲಿ ಬ್ಲಾಂಕೆಟ್ ಮತ್ತು ನೀರಿನ ಬಾಟಲಿಗಳನ್ನು ನೀಡುವುದಿಲ್ಲ. ಎಲ್ಲ ಬಸ್​ಗಳಿಗೆ ಆನ್​ಲೈನ್​ ಮತ್ತು ಮುಂಗಡ ಬುಕ್ಕಿಂಗ್ ಕೌಂಟರ್​ಗಳ ಮೂಲಕ ಆಸನಗಳನ್ನು ಕಾಯ್ದಿರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ವೋಲ್ವೋ ಬಸ್ ಸಂಚಾರ ಆರಂಭಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ರಾಮನಗೌಡರ ಮಾಹಿತಿ ನೀಡಿದ್ದಾರೆ.

ಹುಬ್ಬಳ್ಳಿ: ಲಾಕ್​ಡೌನ್​ ಕಾರಣದಿಂದ ಕಳೆದ ಆರು ತಿಂಗಳಿಂದ ಸ್ಥಗಿತಗೊಂಡಿದ್ದ ಹುಬ್ಬಳ್ಳಿ - ಹೈದರಾಬಾದ್​​ ರಾಜ್ಯ ಸಾರಿಗೆ ಬಸ್ ಸಂಚಾರವನ್ನು ಮತ್ತೆ ಆರಂಭಿಸಲಾಗಿದೆ. ಸರ್ಕಾರದ ಮಾರ್ಗದರ್ಶಿ ನಿರ್ದೇಶನಗಳ ಪ್ರಕಾರ ಎಲ್ಲ ಸುರಕ್ಷತಾ ಕ್ರಮಗಳೊಂದಿಗೆ ಬಸ್​ಗಳ ಕಾರ್ಯಾಚರಣೆ ಮಾಡಲಾಗುತ್ತಿದ್ದು, ಈ ಬಸ್​ಗಳು ಗೋಕುಲ್​ ರಸ್ತೆಯ ಹೊಸ ಬಸ್ ನಿಲ್ದಾಣ ಹಾಗೂ ಹೊಸೂರು ಪ್ರಾದೇಶಿಕ ಬಸ್ ನಿಲ್ದಾಣದಿಂದ ಹೊರಡುತ್ತವೆ ಎಂದು ವಾ.ಕ.ರ.ಸಾ. ಸಂಸ್ಥೆಯ ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್​. ರಾಮನಗೌಡರ ತಿಳಿಸಿದ್ದಾರೆ.

ಮೊದಲ ಹಂತದಲ್ಲಿ 1 ಎಸಿ ಸ್ಲೀಪರ್ (ರಾತ್ರಿ 8-00ಕ್ಕೆ), 1 ನಾನ್ ಎಸಿ ಸ್ಲೀಪರ್ (ಸಂಜೆ 7-00ಕ್ಕೆ), 1 ರಾಜಹಂಸ (ಸಂಜೆ 7-30ಕ್ಕೆ) ಹಾಗೂ 2 ವೇಗದೂತ ಬಸ್​ಗಳ (ಬೆಳಗ್ಗೆ 7-00 ಮತ್ತು 8-00ಕ್ಕೆ) ಸಂಚಾರವನ್ನು ಆರಂಭಿಸಲಾಗಿದೆ.

ಬೆಳಗ್ಗೆ 7-00ಗಂಟೆಗೆ ಹೊರಡುವ ವೇಗದೂತ ಮತ್ತು ಎಲ್ಲ ಐಶಾರಾಮಿ ಬಸ್​ಗಳು ಗದಗ, ಕೊಪ್ಪಳ, ಗಂಗಾವತಿ, ಸಿಂಧನೂರು, ರಾಯಚೂರು, ಮೆಹಬೂಬ್​​ ನಗರ, ಝಡ್ ಚರ್ಲಾ ಮಾರ್ಗವಾಗಿ ಸಂಚರಿಸುತ್ತವೆ. ಬೆಳಗ್ಗೆ 8-00 ಗಂಟೆಗೆ ಹೊರಡುವ ವೇಗದೂತ ಬಸ್​ ನವಲಗುಂದ, ರೋಣ, ಗಜೇಂದ್ರಗಡ, ಕುಷ್ಟಗಿ, ಸಿಂಧನೂರು, ರಾಯಚೂರು, ಮೆಹಬೂಬ್ ನಗರ, ಝಡ್ ಚರ್ಲಾ ಮಾರ್ಗವಾಗಿ ಸಂಚರಿಸುತ್ತದೆ.

ಎಲ್ಲ ಪ್ರಯಾಣಿಕರು ಮಾಸ್ಕ್ ಧರಿಸುವುದು ಕಡ್ಡಾಯವಾಗಿರುತ್ತದೆ. ಬಸ್​ನಲ್ಲಿ ಬ್ಲಾಂಕೆಟ್ ಮತ್ತು ನೀರಿನ ಬಾಟಲಿಗಳನ್ನು ನೀಡುವುದಿಲ್ಲ. ಎಲ್ಲ ಬಸ್​ಗಳಿಗೆ ಆನ್​ಲೈನ್​ ಮತ್ತು ಮುಂಗಡ ಬುಕ್ಕಿಂಗ್ ಕೌಂಟರ್​ಗಳ ಮೂಲಕ ಆಸನಗಳನ್ನು ಕಾಯ್ದಿರಿಸುವ ವ್ಯವಸ್ಥೆಯನ್ನು ಕಲ್ಪಿಸಲಾಗಿರುತ್ತದೆ. ಸಾರ್ವಜನಿಕರ ಪ್ರತಿಕ್ರಿಯೆ ಗಮನಿಸಿ ವೋಲ್ವೋ ಬಸ್ ಸಂಚಾರ ಆರಂಭಿಸುವ ಬಗ್ಗೆ ನಿರ್ಧರಿಸಲಾಗುತ್ತದೆ ಎಂದು ರಾಮನಗೌಡರ ಮಾಹಿತಿ ನೀಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.