ETV Bharat / state

Hubli Crime : ಕೌಟುಂಬಿಕ ಕಲಹ.. ಕೊಡಲಿಯಿಂದ ಪತ್ನಿಯನ್ನು ಕೊಚ್ಚಿ ಕೊಂದು ಪೊಲೀಸರಿಗೆ ಶರಣಾದ ಪತಿ

ಕೌಟುಂಬಿಕ ಕಲಹ ಹಿನ್ನೆಲೆ ಪತಿಯೇ ಪತ್ನಿಯನ್ನು ಹತ್ಯೆಗೈದು ಪೊಲೀಸರಿಗೆ ಶರಣಾಗಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

author img

By

Published : Jul 10, 2023, 1:40 PM IST

ಪತ್ನಿಯ ಹತ್ಯೆಗೈದ ಪತಿ
ಪತ್ನಿಯ ಹತ್ಯೆಗೈದ ಪತಿ

ಹುಬ್ಬಳ್ಳಿ: ಕೌಟುಂಬಿಕ ಕಲಹ ಹಿನ್ನೆಲೆ ಪತಿಯೇ ಪತ್ನಿಯ ತಲೆಗೆ ಕೊಡಲಿಯಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ನಗರದ ಆನಂದನಗರದ ಬ್ಯಾಹಟ್ಟಿ ಪ್ಲಾಟ್​​ನಲ್ಲಿಂದು ಬೆಳಗ್ಗೆ ನಡೆದಿದೆ. ಮೊನ್ನೆಯಷ್ಟೇ ಪತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಮತ್ತೊಮ್ಮೆ ನೆತ್ತರು ಹರಿದಿದ್ದು, ಭೀಕರ ಘಟನೆಗೆ ವಾಣಿಜ್ಯ ನಗರಿ ಹುಬ್ಬಳ್ಳಿ ಜನರು ಬೆಚ್ಚಿಬಿದ್ದಿದ್ದಾರೆ.

ಭೀಮಪ್ಪ ಮುತ್ತಲಗಿ ಎಂಬಾತನೇ ತನ್ನ ಪತ್ನಿ ಮಂಜುಳಾರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿ. ಕೊಡಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯು ಭೀತಿಗೊಂಡು ತಾನೇ ಪೊಲೀಸರಿಗೆ ಶರಣಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಕೌಟುಂಬಿಕ ಕಲಹವೆಂದು ತಿಳಿದು ಬಂದಿದೆ. ಈ ಕುರಿತಂತೆ ಘಟನಾ ಸ್ಥಳಕ್ಕೆ ದಕ್ಷಿಣ ವಿಭಾಗ ಎಸಿಪಿ ಆರ್.ಕೆ.ಪಾಟೀಲ್, ಹಳೇ ಹುಬ್ಬಳ್ಳಿ ಠಾಣೆಯ ಇನ್ಸ್​ಪೆಕ್ಟರ್​ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಬನ್ನಿಕೊಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪತ್ನಿಯ ಶೀಲ ಶಂಕಿಸಿ ಕೊಲೆ: ಇತ್ತೀಚೆಗೆ ಮೈಸೂರಿನಲ್ಲಿ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಪತಿ ಬಳಿಕ ಪೊಲೀಸ್ ಠಾಣೆಗೆ ಹೋಗಿ‌ ಶರಣಾಗಿದ್ದ ಘಟನೆ ನಗರದ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಲೋಕೇಶ್ ಆರಾಧ್ಯ, ಪತ್ನಿ ಪಲ್ಲವಿ ಅವರನ್ನು ಹತ್ಯೆಗೈದ್ದಿದ್ದ.

ಲೋಕೇಶ್ ಮತ್ತು ಪಲ್ಲವಿ 9 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ 7 ವರ್ಷದ ಮಗನಿದ್ದು, ಮೈಸೂರಿನ ಕೆಎಸ್‌ಆರ್‌ಟಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿ ಪತಿ ಲೋಕೇಶ್ ಆಗಾಗ್ಗೆ ತನ್ನ ಹೆಂಡತಿಯ ಶೀಲವನ್ನು ಶಂಕಿಸಿ ಜಗಳ ಮಾಡುತ್ತಿದ್ದ. ಒಂದೊಮ್ಮೆ ಇದೇ ವಿಚಾರವಾಗಿ ಲೋಕೇಶ್​ ದೊಡ್ಡ ಗಲಾಟೆ ಮಾಡಿಕೊಂಡಿದ್ದ. ಪತ್ನಿ ಪಲ್ಲವಿ ಅವರ ತಾಯಿ ಮತ್ತು ಸೋದರ ಮಾವ ಬಂದು ರಾಜೀ ಸಂಧಾನ ಮಾಡಿ, ಇಬ್ಬರಿಗೂ ಬುದ್ಧಿವಾದ ಹೇಳಿ ಹೋಗಿದ್ದರು.

ಆದರೂ, ಸರಿಯಾಗದ ಲೋಕೇಶ್ ಆರಾಧ್ಯ ಮತ್ತೆ ತಗಾದೆ ತೆಗೆದು ಹೆಂಡತಿ ಪಲ್ಲವಿಯ ಮೇಲೆ ಹಲ್ಲೆ ಮಾಡಿ, ಕತ್ತು ಹಿಸುಕಿ ಹತ್ಯೆ ಮಾಡಿದ್ದ. ಈ ಸಂಬಂಧ ಪಲ್ಲವಿ ಅವರ ತಂದೆ ಆಲನಹಳ್ಳಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಪೊಲೀಸರು ಆರೋಪಿ ಲೋಕೇಶನ್​ ಶೋಧ ನಡೆಸುವಾಗ ಆತನೇ ಸ್ವತಃ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ.

ಇದನ್ನೂ ಓದಿ: ಬೆಂಗಳೂರಲ್ಲಿ ಡಂಬಲ್ಸ್​ನಿಂದ ಹೊಡೆದು ಪತ್ನಿ ಕೊಂದು ಪೊಲೀಸರಿಗೆ ಕರೆ ಮಾಡಿದ ಗಂಡ

ಹುಬ್ಬಳ್ಳಿ: ಕೌಟುಂಬಿಕ ಕಲಹ ಹಿನ್ನೆಲೆ ಪತಿಯೇ ಪತ್ನಿಯ ತಲೆಗೆ ಕೊಡಲಿಯಂದ ಕೊಚ್ಚಿ ಬರ್ಬರ ಹತ್ಯೆ ಮಾಡಿರುವ ಘಟನೆ ನಗರದ ಆನಂದನಗರದ ಬ್ಯಾಹಟ್ಟಿ ಪ್ಲಾಟ್​​ನಲ್ಲಿಂದು ಬೆಳಗ್ಗೆ ನಡೆದಿದೆ. ಮೊನ್ನೆಯಷ್ಟೇ ಪತಿಯೊಬ್ಬ ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿದ ಪ್ರಕರಣ ಮಾಸುವ ಮುನ್ನವೇ ಇಂದು ಬೆಳ್ಳಂಬೆಳಿಗ್ಗೆ ಮತ್ತೊಮ್ಮೆ ನೆತ್ತರು ಹರಿದಿದ್ದು, ಭೀಕರ ಘಟನೆಗೆ ವಾಣಿಜ್ಯ ನಗರಿ ಹುಬ್ಬಳ್ಳಿ ಜನರು ಬೆಚ್ಚಿಬಿದ್ದಿದ್ದಾರೆ.

ಭೀಮಪ್ಪ ಮುತ್ತಲಗಿ ಎಂಬಾತನೇ ತನ್ನ ಪತ್ನಿ ಮಂಜುಳಾರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಆರೋಪಿ. ಕೊಡಲಿಯಿಂದ ತಲೆಗೆ ಹೊಡೆದು ಬರ್ಬರವಾಗಿ ಹತ್ಯೆ ಮಾಡಿದ ಆರೋಪಿಯು ಭೀತಿಗೊಂಡು ತಾನೇ ಪೊಲೀಸರಿಗೆ ಶರಣಾಗಿದ್ದು, ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ದುರ್ಘಟನೆಗೆ ಸಂಬಂಧಿಸಿದಂತೆ ಕೌಟುಂಬಿಕ ಕಲಹವೆಂದು ತಿಳಿದು ಬಂದಿದೆ. ಈ ಕುರಿತಂತೆ ಘಟನಾ ಸ್ಥಳಕ್ಕೆ ದಕ್ಷಿಣ ವಿಭಾಗ ಎಸಿಪಿ ಆರ್.ಕೆ.ಪಾಟೀಲ್, ಹಳೇ ಹುಬ್ಬಳ್ಳಿ ಠಾಣೆಯ ಇನ್ಸ್​ಪೆಕ್ಟರ್​ ಸುರೇಶ ಯಳ್ಳೂರ ಹಾಗೂ ಪಿಎಸ್ಐ ಬನ್ನಿಕೊಪ್ಪ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಳೇ ಹುಬ್ಬಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ.

ಪತ್ನಿಯ ಶೀಲ ಶಂಕಿಸಿ ಕೊಲೆ: ಇತ್ತೀಚೆಗೆ ಮೈಸೂರಿನಲ್ಲಿ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಪತಿ ಬಳಿಕ ಪೊಲೀಸ್ ಠಾಣೆಗೆ ಹೋಗಿ‌ ಶರಣಾಗಿದ್ದ ಘಟನೆ ನಗರದ ಆಲನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿತ್ತು. ಲೋಕೇಶ್ ಆರಾಧ್ಯ, ಪತ್ನಿ ಪಲ್ಲವಿ ಅವರನ್ನು ಹತ್ಯೆಗೈದ್ದಿದ್ದ.

ಲೋಕೇಶ್ ಮತ್ತು ಪಲ್ಲವಿ 9 ವರ್ಷಗಳ ಹಿಂದೆ ವಿವಾಹವಾಗಿದ್ದರು. ದಂಪತಿಗೆ 7 ವರ್ಷದ ಮಗನಿದ್ದು, ಮೈಸೂರಿನ ಕೆಎಸ್‌ಆರ್‌ಟಿ ಬಡಾವಣೆಯಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಆರೋಪಿ ಪತಿ ಲೋಕೇಶ್ ಆಗಾಗ್ಗೆ ತನ್ನ ಹೆಂಡತಿಯ ಶೀಲವನ್ನು ಶಂಕಿಸಿ ಜಗಳ ಮಾಡುತ್ತಿದ್ದ. ಒಂದೊಮ್ಮೆ ಇದೇ ವಿಚಾರವಾಗಿ ಲೋಕೇಶ್​ ದೊಡ್ಡ ಗಲಾಟೆ ಮಾಡಿಕೊಂಡಿದ್ದ. ಪತ್ನಿ ಪಲ್ಲವಿ ಅವರ ತಾಯಿ ಮತ್ತು ಸೋದರ ಮಾವ ಬಂದು ರಾಜೀ ಸಂಧಾನ ಮಾಡಿ, ಇಬ್ಬರಿಗೂ ಬುದ್ಧಿವಾದ ಹೇಳಿ ಹೋಗಿದ್ದರು.

ಆದರೂ, ಸರಿಯಾಗದ ಲೋಕೇಶ್ ಆರಾಧ್ಯ ಮತ್ತೆ ತಗಾದೆ ತೆಗೆದು ಹೆಂಡತಿ ಪಲ್ಲವಿಯ ಮೇಲೆ ಹಲ್ಲೆ ಮಾಡಿ, ಕತ್ತು ಹಿಸುಕಿ ಹತ್ಯೆ ಮಾಡಿದ್ದ. ಈ ಸಂಬಂಧ ಪಲ್ಲವಿ ಅವರ ತಂದೆ ಆಲನಹಳ್ಳಿ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಪೊಲೀಸರು ಆರೋಪಿ ಲೋಕೇಶನ್​ ಶೋಧ ನಡೆಸುವಾಗ ಆತನೇ ಸ್ವತಃ ಪೊಲೀಸ್ ಠಾಣೆಗೆ ಬಂದು ಶರಣಾಗಿದ್ದ.

ಇದನ್ನೂ ಓದಿ: ಬೆಂಗಳೂರಲ್ಲಿ ಡಂಬಲ್ಸ್​ನಿಂದ ಹೊಡೆದು ಪತ್ನಿ ಕೊಂದು ಪೊಲೀಸರಿಗೆ ಕರೆ ಮಾಡಿದ ಗಂಡ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.