ETV Bharat / state

'ಯಡಿಯೂರಪ್ಪರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದ್ರೆ ಬಿಜೆಪಿಗೆ ತಕ್ಕ ಪಾಠ ಕಲಿಸುತ್ತೇವೆ'

ಯಡಿಯೂರಪ್ಪನವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಪಂಚಮಸಾಲಿ ಸಮುದಾಯ ಅವರ ಬೆನ್ನಿಗೆ ನಿಲ್ಲಲಿದ್ದು, ಬಿಜೆಪಿಗೆ ತಕ್ಕ ಪಾಠ ಕಳಿಸುತ್ತೇವೆ ಎಂದು ಹುಬ್ಬಳ್ಳಿ ಹೊಸಮಠದ ಸ್ವಾಮೀಜಿ ಎಚ್ಚರಿಸಿದ್ದಾರೆ.

author img

By

Published : Jul 25, 2021, 2:46 PM IST

Swamiji warning to BJP
ಶಿವಯೋಗಿ ರಾಜೇಂದ್ರ ಮಹಾಸ್ವಾಮಿ

ಹುಬ್ಬಳ್ಳಿ : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಳಿಸುವುದಾಗಿ ಹುಬ್ಬಳ್ಳಿಯ ಹೊಸಮಠದ ಮನ್ನಿರಂಜನ್ ಚಂದ್ರಶೇಖರ್ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಹೇಳಿಕೆ

ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಬಹಳಷ್ಟು ಶ್ರಮ ವಹಿಸಿರುವ ಧೀಮಂತ ನಾಯಕ ಬಿ.ಎಸ್ ಯಡಿಯೂರಪ್ಪ. ಪ್ರತಿ ಬಾರಿ ಸಿಎಂ ಹುದ್ದೆಗೆ ಏರಿದಾಗ ಅಪೂರ್ಣ ಆಡಳಿತ ಮಾಡಿದ್ದಾರೆ. ಈ ಬಾರಿಯಾದರೂ ಪೂರ್ಣ ಪ್ರಮಾಣದಲ್ಲಿ ಆಡಳಿತ ನಡೆಸಲು ಬಿಜೆಪಿ ಹೈಕಮಾಂಡ್ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಸಂಜೆಯೊಳಗೆ ಹೈಕಮಾಂಡ್ ಸಂದೇಶ ಬರಲಿದೆ, ಕಾದು ನೋಡಿ: ಬಿಎಸ್‌ವೈ

ಈ ವಯಸ್ಸಿನಲ್ಲಿಯೂ ಯಡಿಯೂರಪ್ಪನವರು ಬಹಳ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರವಾಹ, ಕೋವಿಡ್ ಸಂದರ್ಭಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಸಿಎಂ ಹುದ್ದೆಯಿಂದ ಕೆಳಗಿಳಿಸಿದರೆ ಪಂಚಮಸಾಲಿ ಸಮುದಾಯ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲಲಿದೆ ಎಂದು ಹೇಳಿದರು.

ಹುಬ್ಬಳ್ಳಿ : ಯಡಿಯೂರಪ್ಪ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿದರೆ ಮುಂದಿನ ದಿನಗಳಲ್ಲಿ ಬಿಜೆಪಿಗೆ ತಕ್ಕ ಪಾಠ ಕಳಿಸುವುದಾಗಿ ಹುಬ್ಬಳ್ಳಿಯ ಹೊಸಮಠದ ಮನ್ನಿರಂಜನ್ ಚಂದ್ರಶೇಖರ್ ಶಿವಯೋಗಿ ರಾಜೇಂದ್ರ ಸ್ವಾಮೀಜಿ ಎಚ್ಚರಿಕೆ ನೀಡಿದ್ದಾರೆ.

ಶಿವಯೋಗಿ ರಾಜೇಂದ್ರ ಮಹಾಸ್ವಾಮಿ ಹೇಳಿಕೆ

ನಗರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬಿಜೆಪಿ ಸರ್ಕಾರ ಬರಲು ಬಹಳಷ್ಟು ಶ್ರಮ ವಹಿಸಿರುವ ಧೀಮಂತ ನಾಯಕ ಬಿ.ಎಸ್ ಯಡಿಯೂರಪ್ಪ. ಪ್ರತಿ ಬಾರಿ ಸಿಎಂ ಹುದ್ದೆಗೆ ಏರಿದಾಗ ಅಪೂರ್ಣ ಆಡಳಿತ ಮಾಡಿದ್ದಾರೆ. ಈ ಬಾರಿಯಾದರೂ ಪೂರ್ಣ ಪ್ರಮಾಣದಲ್ಲಿ ಆಡಳಿತ ನಡೆಸಲು ಬಿಜೆಪಿ ಹೈಕಮಾಂಡ್ ಅವಕಾಶ ನೀಡಬೇಕು ಎಂದು ಆಗ್ರಹಿಸಿದರು.

ಇದನ್ನೂ ಓದಿ : ಸಂಜೆಯೊಳಗೆ ಹೈಕಮಾಂಡ್ ಸಂದೇಶ ಬರಲಿದೆ, ಕಾದು ನೋಡಿ: ಬಿಎಸ್‌ವೈ

ಈ ವಯಸ್ಸಿನಲ್ಲಿಯೂ ಯಡಿಯೂರಪ್ಪನವರು ಬಹಳ ಉತ್ಸಾಹದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಪ್ರವಾಹ, ಕೋವಿಡ್ ಸಂದರ್ಭಗಳನ್ನು ಸಮರ್ಥವಾಗಿ ನಿರ್ವಹಿಸಿದ್ದಾರೆ. ಸಿಎಂ ಹುದ್ದೆಯಿಂದ ಕೆಳಗಿಳಿಸಿದರೆ ಪಂಚಮಸಾಲಿ ಸಮುದಾಯ ಯಡಿಯೂರಪ್ಪ ಅವರ ಬೆನ್ನಿಗೆ ನಿಲ್ಲಲಿದೆ ಎಂದು ಹೇಳಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.