ETV Bharat / state

ಹುಬ್ಬಳ್ಳಿ ಕಿಮ್ಸ್ ನರ್ಸ್​ಗಳನ್ನು ಕುರಿತು ರೀಲ್ಸ್ ಪ್ರಕರಣ.. ಒಂದು ವಾರ ಕಾಲೇಜಿನಿಂದ 11 ವೈದ್ಯ ವಿದ್ಯಾರ್ಥಿಗಳು ಅಮಾನತ್ತು

author img

By

Published : Aug 8, 2023, 4:08 PM IST

Updated : Aug 8, 2023, 9:29 PM IST

ಹುಬ್ಬಳ್ಳಿ ಕಿಮ್ಸ್​ನ 11 ಮಂದಿ ವೈದ್ಯಕೀಯ ವಿದ್ಯಾರ್ಥಿಗಳನ್ನು ಒಂದು ವಾರ ಕಾಲೇಜಿನಿಂದ ಪ್ರಿನ್ಸಿಪಾಲ್ ಡಾ. ಈಶ್ವರ ಹೊಸಮನಿ ಅವರು ಅಮಾನತ್ತು ಮಾಡಿದ್ದಾರೆ.

ಕಿಮ್ಸ್ ನರ್ಸ್​ಗಳನ್ನು ಕುರಿತು ರಿಲ್ಸ್ ಪ್ರಕರಣ
ಕಿಮ್ಸ್ ನರ್ಸ್​ಗಳನ್ನು ಕುರಿತು ರಿಲ್ಸ್ ಪ್ರಕರಣ
ಹುಬ್ಬಳ್ಳಿ ಕಿಮ್ಸ್ ನರ್ಸ್​ಗಳನ್ನು ಕುರಿತು ರೀಲ್ಸ್ ಪ್ರಕರಣ

ಹುಬ್ಬಳ್ಳಿ : ನರ್ಸ್​ಗಳನ್ನು ಕುರಿತು ಕನ್ನಡ ಚಿತ್ರವೊಂದರ ಹಾಡಿಗೆ ರೀಲ್ಸ್ ಮಾಡಿ ಕಿಮ್ಸ್ ಆಸ್ಪತ್ರೆ 11 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಕಿಮ್ಸ್ ಆಸ್ಪತ್ರೆಯ ನರ್ಸ್​ಗಳಿಗೆ ಅಪಮಾನ ಮಾಡಲಾಗಿದೆ. ಈ 11 ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೆ ನರ್ಸ್ ಅಸೋಸಿಯೇಷನ್ ಅಧ್ಯಕ್ಷೆ ಸುನೀತಾ ನಾಯ್ಕ ಸೋಮವಾರ ದೂರು ಸಲ್ಲಿಸಿದ್ದರು.

ಹುಬ್ಬಳ್ಳಿ ಕಿಮ್ಸ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ನರ್ಸ್​ಗಳನ್ನು ಗುರಿಯಾಗಿಟ್ಟುಕೊಂಡು ಯಾವುದೇ ಅನುಮತಿ ಪಡೆಯದೆ ರೀಲ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಮತ್ತು ಧಾರವಾಡ ಜಿಲ್ಲಾ ಶುಶ್ರೂಷಕರ ಸಂಘ ವಿರೋಧ ವ್ಯಕ್ತಪಡಿಸಿತ್ತು. ಈ ವಿಚಾರವಾಗಿ ಮಾತನಾಡಿದ ನರ್ಸ್ ಅಸೋಸಿಯೇಷನ್ ಅಧ್ಯಕ್ಷೆ ಸುನೀತಾ ನಾಯ್ಕ ಅವರು, ವಿಡಿಯೋವನ್ನು ನರ್ಸ್ ಗಳನ್ನು ಅಸಭ್ಯವಾಗಿ, ಅಗೌರವಿಸುವ ರೀತಿಯಲ್ಲಿ ಮಾಡಲಾಗಿದೆ. ಈ ಮೂಲಕ ನರ್ಸ್ ಗಳಿಗೆ ಅವಮಾನ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ವಿಡಿಯೋ ವೈರಲ್​ ಆಗಿದೆ. ಕೂಡಲೇ ಅವಮಾನ ‌ಮಾಡಿದ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದರು.

ಇನ್ನು, ಈಟಿವಿ ಭಾರತಕ್ಕೆ ಪ್ರತಿಕ್ರಿಯೆ ನೀಡಿದ ಕಿಮ್ಸ್​ನ ಪ್ರಿನ್ಸಿಪಾಲ್ ಡಾ. ಈಶ್ವರ ಹೊಸಮನಿ, ಈ ಬಗ್ಗೆ 6 ಜನರ ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ರೀಲ್ಸ್ ಮಾಡಿದ ವಿದ್ಯಾರ್ಥಿಗಳು ಬಂದು ಭೇಟಿಯಾಗಿದ್ದಾರೆ. ಅದಲ್ಲದೇ ತಮ್ಮದು ತಪ್ಪಾಗಿದೆ ಎಂದು ಕ್ಷಮೆಯನ್ನು ಕೇಳಿದ್ದಾರೆ. ಆದರೂ ವಿದ್ಯಾರ್ಥಿಗಳು ಮಾಡಿದ್ದು ಖಂಡನೀಯ, ಹೀಗಾಗಿ 11 ಜನ ವೈದ್ಯ ವಿದ್ಯಾರ್ಥಿಗಳನ್ನು ಒಂದು ವಾರ ಕಾಲ ಕಾಲೇಜಿನಿಂದ ಅಮಾನತ್ತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರತ್ಯೇಕ ಪ್ರಕರಣ-ಹುಬ್ಬಳ್ಳಿ ಕಾಲೇಜು ಪ್ರಕರಣ : ಮತ್ತೊಂದೆಡೆ ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಬಿಂಬಿಸುವಂತಹ ಫೋಟೋಗಳನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಘಟನೆ ನಡೆದಿತ್ತು. ಇದನ್ನು ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜೆಸಿ ನಗರದ ವುಮೆನ್ಸ್ ಕಾಲೇಜಿನಿಂದ ಪ್ರಾರಂಭವಾಗಿ ಅಂಬೇಡ್ಕರ್ ಸರ್ಕಲ್ ಮೂಲಕ ತಹಶೀಲ್ದಾರ್​ ಕಚೇರಿಗೆ ಆಗಮಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದು ಖಂಡನೀಯವಾಗಿದ್ದು, ಈ ಕುರಿತು ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಈ ಕುರಿತಂತೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದ ಕುರಿತಂತೆ ಕಾವಲು ಇಡಬೇಕು. ಇಂತಹ ಅಜಾಗರೂಕತೆ ಆಗದಂತೆ ನೋಡಿಕೊಳ್ಳಬೇಕು. ಇಂತಹ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಹೋರಾಟ ಪ್ರಮುಖ ರಾಘವೇಂದ್ರ ಪೆದ್ದಾರ, ಸುಶೀಲ್ ಇಟಗಿ, ನವೀನ್ ಬಳ್ಳಾರಿ, ಪೃಥ್ವಿಕುಮಾರ್, ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಉಡುಪಿ ವಿಡಿಯೋ ವಿವಾದ: ಬಿಜೆಪಿ ಪ್ರತಿಭಟನೆ.. ಸಿಐಡಿ ತನಿಖೆಗೆ ಶ್ರೀನಿವಾಸ ಪೂಜಾರಿ ಆಗ್ರಹ

ಹುಬ್ಬಳ್ಳಿ ಕಿಮ್ಸ್ ನರ್ಸ್​ಗಳನ್ನು ಕುರಿತು ರೀಲ್ಸ್ ಪ್ರಕರಣ

ಹುಬ್ಬಳ್ಳಿ : ನರ್ಸ್​ಗಳನ್ನು ಕುರಿತು ಕನ್ನಡ ಚಿತ್ರವೊಂದರ ಹಾಡಿಗೆ ರೀಲ್ಸ್ ಮಾಡಿ ಕಿಮ್ಸ್ ಆಸ್ಪತ್ರೆ 11 ಮಂದಿ ವೈದ್ಯಕೀಯ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದರು. ಈ ಹಿನ್ನೆಲೆ ಕಿಮ್ಸ್ ಆಸ್ಪತ್ರೆಯ ನರ್ಸ್​ಗಳಿಗೆ ಅಪಮಾನ ಮಾಡಲಾಗಿದೆ. ಈ 11 ವಿದ್ಯಾರ್ಥಿಗಳ ವಿರುದ್ಧ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ನಿರ್ದೇಶಕ ಡಾ. ರಾಮಲಿಂಗಪ್ಪ ಅಂಟರತಾನಿ ಅವರಿಗೆ ನರ್ಸ್ ಅಸೋಸಿಯೇಷನ್ ಅಧ್ಯಕ್ಷೆ ಸುನೀತಾ ನಾಯ್ಕ ಸೋಮವಾರ ದೂರು ಸಲ್ಲಿಸಿದ್ದರು.

ಹುಬ್ಬಳ್ಳಿ ಕಿಮ್ಸ್‌ನಲ್ಲಿ ಎಂಬಿಬಿಎಸ್ ವಿದ್ಯಾರ್ಥಿಗಳ ನರ್ಸ್​ಗಳನ್ನು ಗುರಿಯಾಗಿಟ್ಟುಕೊಂಡು ಯಾವುದೇ ಅನುಮತಿ ಪಡೆಯದೆ ರೀಲ್ಸ್ ಮಾಡಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಕರ್ನಾಟಕ ರಾಜ್ಯ ನರ್ಸ್ ಅಸೋಸಿಯೇಷನ್ ಮತ್ತು ಧಾರವಾಡ ಜಿಲ್ಲಾ ಶುಶ್ರೂಷಕರ ಸಂಘ ವಿರೋಧ ವ್ಯಕ್ತಪಡಿಸಿತ್ತು. ಈ ವಿಚಾರವಾಗಿ ಮಾತನಾಡಿದ ನರ್ಸ್ ಅಸೋಸಿಯೇಷನ್ ಅಧ್ಯಕ್ಷೆ ಸುನೀತಾ ನಾಯ್ಕ ಅವರು, ವಿಡಿಯೋವನ್ನು ನರ್ಸ್ ಗಳನ್ನು ಅಸಭ್ಯವಾಗಿ, ಅಗೌರವಿಸುವ ರೀತಿಯಲ್ಲಿ ಮಾಡಲಾಗಿದೆ. ಈ ಮೂಲಕ ನರ್ಸ್ ಗಳಿಗೆ ಅವಮಾನ ಮಾಡಲಾಗಿದ್ದು, ರಾಜ್ಯದೆಲ್ಲೆಡೆ ವಿಡಿಯೋ ವೈರಲ್​ ಆಗಿದೆ. ಕೂಡಲೇ ಅವಮಾನ ‌ಮಾಡಿದ ವಿದ್ಯಾರ್ಥಿಗಳಿಗೆ ಕಠಿಣ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದರು.

ಇನ್ನು, ಈಟಿವಿ ಭಾರತಕ್ಕೆ ಪ್ರತಿಕ್ರಿಯೆ ನೀಡಿದ ಕಿಮ್ಸ್​ನ ಪ್ರಿನ್ಸಿಪಾಲ್ ಡಾ. ಈಶ್ವರ ಹೊಸಮನಿ, ಈ ಬಗ್ಗೆ 6 ಜನರ ಸಮಿತಿ ರಚನೆ ಮಾಡಲಾಗಿದೆ. ಈಗಾಗಲೇ ರೀಲ್ಸ್ ಮಾಡಿದ ವಿದ್ಯಾರ್ಥಿಗಳು ಬಂದು ಭೇಟಿಯಾಗಿದ್ದಾರೆ. ಅದಲ್ಲದೇ ತಮ್ಮದು ತಪ್ಪಾಗಿದೆ ಎಂದು ಕ್ಷಮೆಯನ್ನು ಕೇಳಿದ್ದಾರೆ. ಆದರೂ ವಿದ್ಯಾರ್ಥಿಗಳು ಮಾಡಿದ್ದು ಖಂಡನೀಯ, ಹೀಗಾಗಿ 11 ಜನ ವೈದ್ಯ ವಿದ್ಯಾರ್ಥಿಗಳನ್ನು ಒಂದು ವಾರ ಕಾಲ ಕಾಲೇಜಿನಿಂದ ಅಮಾನತ್ತು ಮಾಡಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪ್ರತ್ಯೇಕ ಪ್ರಕರಣ-ಹುಬ್ಬಳ್ಳಿ ಕಾಲೇಜು ಪ್ರಕರಣ : ಮತ್ತೊಂದೆಡೆ ನಗರದ ಖಾಸಗಿ ಕಾಲೇಜು ವಿದ್ಯಾರ್ಥಿನಿಯರನ್ನು ಅಸಭ್ಯವಾಗಿ ಬಿಂಬಿಸುವಂತಹ ಫೋಟೋಗಳನ್ನು ತಿರುಚಿ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿರುವ ಘಟನೆ ನಡೆದಿತ್ತು. ಇದನ್ನು ಖಂಡಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ವತಿಯಿಂದ ಪ್ರತಿಭಟನೆ ನಡೆಸಲಾಯಿತು. ಜೆಸಿ ನಗರದ ವುಮೆನ್ಸ್ ಕಾಲೇಜಿನಿಂದ ಪ್ರಾರಂಭವಾಗಿ ಅಂಬೇಡ್ಕರ್ ಸರ್ಕಲ್ ಮೂಲಕ ತಹಶೀಲ್ದಾರ್​ ಕಚೇರಿಗೆ ಆಗಮಿಸಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.

ಕಾಲೇಜಿನಲ್ಲಿ ವಿದ್ಯಾರ್ಥಿನಿಯರಿಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದು ಖಂಡನೀಯವಾಗಿದ್ದು, ಈ ಕುರಿತು ರಾಜ್ಯ ಸರ್ಕಾರ ತಪ್ಪಿತಸ್ಥರ ವಿರುದ್ಧ ಕ್ರಮ ಜರುಗಿಸಬೇಕು. ಈ ಕುರಿತಂತೆ ರಾಜ್ಯ ಸರ್ಕಾರ ತನಿಖೆ ನಡೆಸಬೇಕು. ಪೊಲೀಸ್ ಇಲಾಖೆ ಸಾಮಾಜಿಕ ಜಾಲತಾಣದ ಕುರಿತಂತೆ ಕಾವಲು ಇಡಬೇಕು. ಇಂತಹ ಅಜಾಗರೂಕತೆ ಆಗದಂತೆ ನೋಡಿಕೊಳ್ಳಬೇಕು. ಇಂತಹ ಘಟನೆಗಳಿಗೆ ಸಂಬಂಧಿಸಿದಂತೆ ಪೊಲೀಸರು ಕಟ್ಟುನಿಟ್ಟಿನ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದರು.

ಈ ಸಂದರ್ಭದಲ್ಲಿ ತಾಲೂಕು ಹೋರಾಟ ಪ್ರಮುಖ ರಾಘವೇಂದ್ರ ಪೆದ್ದಾರ, ಸುಶೀಲ್ ಇಟಗಿ, ನವೀನ್ ಬಳ್ಳಾರಿ, ಪೃಥ್ವಿಕುಮಾರ್, ಸೇರಿದಂತೆ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಇದನ್ನೂ ಓದಿ : ಉಡುಪಿ ವಿಡಿಯೋ ವಿವಾದ: ಬಿಜೆಪಿ ಪ್ರತಿಭಟನೆ.. ಸಿಐಡಿ ತನಿಖೆಗೆ ಶ್ರೀನಿವಾಸ ಪೂಜಾರಿ ಆಗ್ರಹ

Last Updated : Aug 8, 2023, 9:29 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.