ETV Bharat / state

ಹುಬ್ಬಳ್ಳಿಯಲ್ಲಿ ಮುಂದುವರೆದ ಗಾಂಜಾ ಕಾರ್ಯಾಚರಣೆ; ಇಬ್ಬರು ಆರೋಪಿಗಳ ಬಂಧನ

author img

By

Published : Sep 5, 2020, 7:26 PM IST

Updated : Sep 5, 2020, 7:37 PM IST

ಗಾಂಜಾ ದಂಧೆಯನ್ನು ತಡೆಯಲು ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದು, ಇಂದು ಮತ್ತೆ ಇಬ್ಬರು ಗಾಂಜಾ ಆರೋಪಿಗಳನ್ನು ಬಂಧಿಸಿದ್ದಾರೆ.

Accused
Accused

ಹುಬ್ಬಳ್ಳಿ: ನಗರದಲ್ಲಿ ಗಾಂಜಾ ಹಾವಳಿ ನಿರ್ಮೂಲನಾ ಕಾರ್ಯಾಚರಣೆ ಇಂದೂ ಮುಂದುವರೆದಿದ್ದು, ಇಂದು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ನೂರ್ ಅಹಮ್ಮದ್ ಹಾಗೂ ಅಕ್ಷಯ ವೇರ್ಣೆಕರ ಬಂಧಿತ ಆರೋಪಿಗಳು. ಇವರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತು ಮಾಹಿತಿ ಪಡೆದ ಹುಬ್ಬಳ್ಳಿ-ಧಾರವಾಡ ನಗರ ಆರ್ಥಿಕ ಅಪರಾಧ ಮತ್ತು ಮಾದಕ ವಸ್ತುಗಳ ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿ ಇಬ್ಬರನ್ನು ಬಂಧಿಸಿ 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ನಿನ್ನೆ ತಿಮ್ಮಸಾಗರದ ವಿಶ್ವನಾಥ ಮಲ್ಲಪ್ಪ ಕರಡಿಗುಡ್ಡ ಹಾಗೂ ಮಂಟೂರ ರಸ್ತೆಯ ನರೇಶಕುಮಾರ ರಾಜನ್ನ ನಾಯಕಂಟಿ ಎಂಬ ಇಬ್ಬರನ್ನು ಬಂಧಿಸಿ ಅವರಿಂದ 1 ಕೆಜಿ 795 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದರು.

ಇಂದಿನ ಕಾರ್ಯಾಚರಣೆ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹುಬ್ಬಳ್ಳಿ: ನಗರದಲ್ಲಿ ಗಾಂಜಾ ಹಾವಳಿ ನಿರ್ಮೂಲನಾ ಕಾರ್ಯಾಚರಣೆ ಇಂದೂ ಮುಂದುವರೆದಿದ್ದು, ಇಂದು ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸುವಲ್ಲಿ ಉಪನಗರ ಠಾಣೆ ಪೊಲೀಸರು ಯಶಸ್ವಿಯಾಗಿದ್ದಾರೆ.

ನಗರದ ನೂರ್ ಅಹಮ್ಮದ್ ಹಾಗೂ ಅಕ್ಷಯ ವೇರ್ಣೆಕರ ಬಂಧಿತ ಆರೋಪಿಗಳು. ಇವರು ನಗರದ ಪ್ರಮುಖ ಪ್ರದೇಶಗಳಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದರು. ಈ ಕುರಿತು ಮಾಹಿತಿ ಪಡೆದ ಹುಬ್ಬಳ್ಳಿ-ಧಾರವಾಡ ನಗರ ಆರ್ಥಿಕ ಅಪರಾಧ ಮತ್ತು ಮಾದಕ ವಸ್ತುಗಳ ಅಪರಾಧ ಪೊಲೀಸ್ ಠಾಣೆಯ ಸಿಬ್ಬಂದಿ ಇಬ್ಬರನ್ನು ಬಂಧಿಸಿ 500 ಗ್ರಾಂ ಗಾಂಜಾ ವಶಪಡಿಸಿಕೊಂಡಿದ್ದಾರೆ.

ನಿನ್ನೆ ತಿಮ್ಮಸಾಗರದ ವಿಶ್ವನಾಥ ಮಲ್ಲಪ್ಪ ಕರಡಿಗುಡ್ಡ ಹಾಗೂ ಮಂಟೂರ ರಸ್ತೆಯ ನರೇಶಕುಮಾರ ರಾಜನ್ನ ನಾಯಕಂಟಿ ಎಂಬ ಇಬ್ಬರನ್ನು ಬಂಧಿಸಿ ಅವರಿಂದ 1 ಕೆಜಿ 795 ಗ್ರಾಂ ಗಾಂಜಾ ವಶಕ್ಕೆ ಪಡೆದಿದ್ದರು.

ಇಂದಿನ ಕಾರ್ಯಾಚರಣೆ ಕುರಿತು ಉಪನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Last Updated : Sep 5, 2020, 7:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.