ETV Bharat / state

ಅನರ್ಹರ ಪರ ಸಿಎಂ ಮಾತನಾಡಿರುವುದರಲ್ಲಿ ತಪ್ಪೇನಿಲ್ಲ: ಬಸವರಾಜ ಹೊರಟ್ಟಿ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್​ವೈ  ಸರ್ಕಾರದ ಸ್ಥಿರತೆ ಬಗ್ಗೆ ಮಾತನಾಡಿರಬಹುದು. ಅಲ್ಲದೇ ಬಿಜೆಪಿಗೆ ಬೆಂಬಲ ನೀಡುವುದರ ಬಗ್ಗೆಯೂ ಚರ್ಚೆ ನಡೆದಿರಬಹುದು. ರಾಜಕೀಯದಲ್ಲಿ ಯಾರು ಶಾಶ್ವತ ಗೆಳೆಯರಲ್ಲ ಎಂದರು.

author img

By

Published : Nov 2, 2019, 1:05 PM IST

ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನರ್ಹ ಶಾಸಕರ ತ್ಯಾಗದಿಂದ. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಿಜ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಅನರ್ಹ ಶಾಸಕರಿಂದ ನಮ್ಮ ಸರ್ಕಾರ ಬಂದಿದೆ ಎಂಬ ಸಿಎಂ ಬಿಎಸ್​ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅನರ್ಹ ಶಾಸಕರು ಬಿಜೆಪಿಯವರನ್ನು ನಂಬಿ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ಮುಖ್ಯಮಂತ್ರಿಗಳ ಅನರ್ಹರ ಪರ ಹೇಳಿಕೆಗೆ ನನ್ನ ಸಹಮತವಿದೆ ಎಂದರು.

ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್​ವೈ ಸರ್ಕಾರದ ಸ್ಥಿರತೆ ಬಗ್ಗೆ ಮಾತನಾಡಿರಬಹುದು. ಅಲ್ಲದೇ ಬಿಜೆಪಿಗೆ ಬೆಂಬಲ ನೀಡುವುದರ ಬಗ್ಗೆಯೂ ಚರ್ಚೆ ನಡೆದಿರಬಹುದು. ರಾಜಕೀಯದಲ್ಲಿ ಯಾರು ಶಾಶ್ವತ ಗೆಳೆಯರಲ್ಲ ಎಂದ ಅವರು, ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರು ಚುನಾವಣೆ ಬೇಡ ಎಂದು ಹೆಚ್​ಡಿಕೆ ಹೇಳಿದ್ದಾರೆ. ಅದಕ್ಕೆ ಬಿಜೆಪಿಗೆ ಬೆಂಬಲ ಸೂಚಿಸಲು ತಿರ್ಮಾನಿಸಿರಬಹುದು. ಈ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದ ತೆಗೆದುಹಾಕುವ ವಿಚಾರ ತಪ್ಪು. ಇದರ ಪರಿಣಾಮ ಮಕ್ಕಳ ಮೇಲೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಪಾಠ ಮಾಡಬೇಕಾ, ಅಥವಾ ಬೇಡವಾ ಎಂಬ ಆತಂಕದಲ್ಲಿ ಇರುವಂತಾಗುತ್ತದೆ. ತಕ್ಷಣವೇ ಇತಿಹಾಸ ತಜ್ಞರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದರು.

ಹುಬ್ಬಳ್ಳಿ: ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನರ್ಹ ಶಾಸಕರ ತ್ಯಾಗದಿಂದ. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಿಜ ಎಂದು ವಿಧಾನ ಪರಿಷತ್ ಸದಸ್ಯ ಮತ್ತು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದ್ದಾರೆ.

ಬಿಜೆಪಿ ಕೋರ್​ ಕಮಿಟಿ ಸಭೆಯಲ್ಲಿ ಅನರ್ಹ ಶಾಸಕರಿಂದ ನಮ್ಮ ಸರ್ಕಾರ ಬಂದಿದೆ ಎಂಬ ಸಿಎಂ ಬಿಎಸ್​ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅನರ್ಹ ಶಾಸಕರು ಬಿಜೆಪಿಯವರನ್ನು ನಂಬಿ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ಮುಖ್ಯಮಂತ್ರಿಗಳ ಅನರ್ಹರ ಪರ ಹೇಳಿಕೆಗೆ ನನ್ನ ಸಹಮತವಿದೆ ಎಂದರು.

ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ

ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿಎಸ್​ವೈ ಸರ್ಕಾರದ ಸ್ಥಿರತೆ ಬಗ್ಗೆ ಮಾತನಾಡಿರಬಹುದು. ಅಲ್ಲದೇ ಬಿಜೆಪಿಗೆ ಬೆಂಬಲ ನೀಡುವುದರ ಬಗ್ಗೆಯೂ ಚರ್ಚೆ ನಡೆದಿರಬಹುದು. ರಾಜಕೀಯದಲ್ಲಿ ಯಾರು ಶಾಶ್ವತ ಗೆಳೆಯರಲ್ಲ ಎಂದ ಅವರು, ರಾಜ್ಯದಲ್ಲಿ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಉಂಟಾಗಿ ಅಪಾರ ಪ್ರಮಾಣದ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮರು ಚುನಾವಣೆ ಬೇಡ ಎಂದು ಹೆಚ್​ಡಿಕೆ ಹೇಳಿದ್ದಾರೆ. ಅದಕ್ಕೆ ಬಿಜೆಪಿಗೆ ಬೆಂಬಲ ಸೂಚಿಸಲು ತಿರ್ಮಾನಿಸಿರಬಹುದು. ಈ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದ ತೆಗೆದುಹಾಕುವ ವಿಚಾರ ತಪ್ಪು. ಇದರ ಪರಿಣಾಮ ಮಕ್ಕಳ ಮೇಲೆ ಆಗುತ್ತದೆ. ಈ ಹಿನ್ನೆಲೆಯಲ್ಲಿ ಶಿಕ್ಷಕರು ಪಾಠ ಮಾಡಬೇಕಾ, ಅಥವಾ ಬೇಡವಾ ಎಂಬ ಆತಂಕದಲ್ಲಿ ಇರುವಂತಾಗುತ್ತದೆ. ತಕ್ಷಣವೇ ಇತಿಹಾಸ ತಜ್ಞರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು ಎಂದು ಸಲಹೆ ನೀಡಿದರು.

Intro:ಹುಬ್ಬಳಿBody:ಅನರ್ಹ ಶಾಸಕರಿಂದಲ್ಲೇ ಬಿಜೆಪಿ ಸರ್ಕಾರ ಬಂದಿದ್ದು ಬಿಎಸ್ ವೈ ಹೇಳಿಕೆ ವಿಚಾರ

ಸಿಎಂ ಬಿ.ಎಸ್.ವೈ ಹೇಳಿಕೆಗೆ ಸಹಮತ ಇದೆ : ಹೊರಟ್ಟಿ

ಹುಬ್ಬಳ್ಳಿ:- ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಅನರ್ಹ ಶಾಸಕರ ತ್ಯಾಗದಿಂದ. ಬಿಜೆಪಿ ಆಪರೇಷನ್ ಕಮಲ ಮಾಡಿದ್ದು ನಿಜಾ, ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿಕೆಗೆ ಸಹಮತವಿದ್ದು, ಮಾತು ಕೊಟ್ಟ ರೀತಿ ನಡೆದುಕೊಳ್ಳಬೇಕೆಂದು ವಿಧಾನ ಪರಿಷತ್ ಸದಸ್ಯ ಮತ್ತು ಜೆಡಿಎಸ್ ಮುಖಂಡ ಬಸವರಾಜ ಹೊರಟ್ಟಿ ಹೇಳಿದರು.ನಗರದಲ್ಲಿಂದು ಬಿಜೆಪಿ ಕೋರ ಕಮಿಟಿ ಸಭೆಯಲ್ಲಿ ಅನರ್ಹ ಶಾಸಕರಿಂದ ನಮ್ಮ ಸರಕಾರ ಬಂದಿದೆ ಎಂಬ ಸಿಎಂ ಬಿಎಸ್ ವೈ ಹೇಳಿಕೆಗೆ ಪ್ರತಿಕ್ರಿಯೆ ನೀಡಿದ ಅವರು, ಅನರ್ಹ ಶಾಸಕರು ಬಿಜೆಪಿಯವರನ್ನು ನಂಬಿ ಶಾಸಕ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ. ಹೀಗಾಗಿ ಈ ವಿಷಯದಲ್ಲಿ ಮುಖ್ಯಮಂತ್ರಿಗಳ ಹೇಳಿಕೆಗೆ ನನ್ನ ಸಹಮತ ವಿದೆ ಎಂದರು,ಇನ್ನೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಹಾಗೂ ಬಿ.ಎಸ್ ವೈ ಮಾತುಕತೆ ಮಾಡಿರುವುದು ಸರಕಾರ ಸ್ಥಿರತೆ ಬಗ್ಗೆ ಮಾತನಾಡಿರಬಹುದು. ಅಲ್ಲದೇ ಬಿಜೆಪಿ ಗೆ ಬೆಂಬಲ ನೀಡುವುದರ ಬಗ್ಗೆಯೂ ಚರ್ಚೆ ನಡೆದಿರಬಹುದು. ರಾಜಕೀಯದಲ್ಲಿ ಯಾರು ಶಾಶ್ವತ ಗೆಳೆಯರಲ್ಲ ಎಂದರು.ರಾಜ್ಯದಲ್ಲಿ ಅತಿ ಮಳೆಯಿಂದ ಪ್ರವಾಹ ಪರಿಸ್ಥಿತಿಯಿಂದ ಅಪಾರ ಪ್ರಮಾಣದ ಹಾನಿಯಾಗಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮರು ಚುನಾವಣೆ ಬೇಡ ಎಂದು ಹೇಳಿದ್ದಾರೆ. ಅದಕ್ಕೆ ಬಿಜೆಪಿಗೆ ಬೆಂಬಲ ಸೂಚಿಸಲು ತಿರ್ಮಾಣಿಸಿರಬಹುದು. ಈ ಬಗ್ಗೆ ನನಗೆ ಯಾವುದೇ ಅಸಮಾಧಾನವಿಲ್ಲ. ಮಾಜಿ ಪ್ರಧಾನಿ ದೇವೆಗೌಡರ ಜೊತೆಗೆ ಈ ಹಿಂದೆ ಮಾತನಾಡಿದ್ದೇನೆ. ಅವರು ಹಿಂದೆ ನಡೆದ ಘಟನೆಗಳ ಬಗ್ಗೆ ತಲೆ ಕೆಡಿಸಿಕೊಳ್ಳಬೇಡಿ ಅಂತಾ ಹೇಳಿದ್ದಾರೆ ಎಂದರು.ಬಿಜೆಪಿ ಸರ್ಕಾರ ಟಿಪ್ಪು ಸುಲ್ತಾನ್ ಇತಿಹಾಸವನ್ನು ಪಠ್ಯದಿಂದ ತೆಗೆದುಹಾಕುವ ವಿಚಾರ ತಪ್ಪು. ಇದರ ಪರಿಣಾಮ ಮಕ್ಕಳ ಮೇಲೆ ಆಗುವುದು. ಈ ಹಿನ್ನಲೆಯಲ್ಲಿ ಶಿಕ್ಷಕರು ಪಾಠ ಮಾಡಬೇಕಾ, ಅಥವಾ ಬೇಡವಾ ಎಂಬ ಆತಂಕದಲ್ಲಿ ಕಾಲ ಕಳೆಯುವಾಗುವುದು. ಹೀಗಾಗಿ ತಕ್ಷಣವೇ ಇತಿಹಾಸ ತಜ್ಞರ ಜೊತೆಗೆ ಚರ್ಚಿಸಿ ಸೂಕ್ತ ನಿರ್ಧಾರ ತೆಗೆದುಕೊಳ್ಳುವುದು ಒಳ್ಳೆಯದು ಎಂದರು.

ಬೈಟ್: ಬಸವರಾಜ ಹೋರಟ್ಟಿ ಜೆಡಿಎಸ್ ಮುಖಂಡ...

_________________________


ಹುಬ್ಬಳ್ಳಿ:- ಸ್ಟ್ರಿಂಜರ

ಯಲ್ಲಪ್ ಕುಂದಗೋಳConclusion:ಯಲ್ಲಪ್‌ಕುಂದಗೊಳ
ETV Bharat Logo

Copyright © 2024 Ushodaya Enterprises Pvt. Ltd., All Rights Reserved.