ಹುಬ್ಬಳ್ಳಿ : ದೆಹಲಿಯ ನಿಜಾಮುದ್ದೀನ್ನಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ 12 ಮಂದಿಯನ್ನು ಪೊಲೀಸರು ಕಿಮ್ಸ್ಗೆ ದಾಖಲಿಸಿದ್ದಾರೆ. ನಗರದ ಗೋಪನಕೊಪ್ಪದ ಈ 12 ಜನ ಧಾರ್ಮಿಕ ಸಭೆಯಲ್ಲಿ ಪಾಲ್ಗೊಂಡಿದ್ದರು ಎಂಬ ಮಾಹಿತಿ ಮೇಲೆ, ಪೊಲೀಸರು ಹಾಗೂ ಆರೋಗ್ಯ ಇಲಾಖೆಯ ಅಧಿಕಾರಿಗಳು ಮನವೊಲಿಸಿ ಕ್ವಾರಂಟೈನ್ಗಾಗಿ ಕಿಮ್ಸ್ನಲ್ಲಿಸಿದ್ದಾರೆ.
ಆದರೆ, ಕೊರೊನಾ ತಮಗೆ ಇಲ್ಲ ಎಂದು ಕೆಲವರು ತಗಾದೆ ತೆಗೆದಿದ್ದಾರೆ. ಆಗ ಅಧಿಕಾರಿಗಳು ಹಾಗೂ ಸ್ಥಳೀಯರ ನಡುವೆ ಮಾತಿನ ಚಕಮಕಿ ನಡೆದಿದೆ. ನಂತರ ತಪಾಸಣೆ ಮಾಡುವುದಾಗಿ ಹೇಳಿ ಪೊಲೀಸರು ಕರೆದುಕೊಂಡು ಬಂದಿದ್ದಾರೆ.