ಧಾರವಾಡ: ಮಾಜಿ ಸಚಿವ ವಿನಯ್ ಕುಲಕರ್ಣಿಯ ಮತ್ತೊಬ್ಬ ಆಪ್ತನಿಗೆ ಐಟಿ ಇಲಾಖೆ ನೋಟಿಸ್ ನೀಡಿದೆ. ಇಂದು ಬೆಳಗ್ಗೆ 10 ಗಂಟೆಗೆ ಹುಬ್ಬಳ್ಳಿ ಐಟಿ ಕಚೇರಿಗೆ ಆಗಮಿಸುವಂತೆ ವಿನಯ್ ಪರ ಚುನಾವಣಾ ಪ್ರಚಾರದಲ್ಲಿ ಓಡಾಡುತ್ತಿದ್ದ ಅರವಿಂದ ಏಗನಗೌಡರಿಗೆ ನೋಟಿಸ್ ಜಾರಿಗೊಳಿಸಲಾಗಿದೆ.
![income tax](https://etvbharatimages.akamaized.net/etvbharat/prod-images/kn-dwd-1-vinat-follower-it-shock-av-ka10001_06052023092825_0605f_1683345505_913.jpg)
ದಾಖಲೆ ಸಮೇತ ಕಚೇರಿ ಬರುವಂತೆ ಏಗನಗೌಡರ್ಗೆ ನೋಟಿಸ್ ನೀಡಿರುವ ಐಟಿ ಅಧಿಕಾರಿಗಳು, ಗುರುವಾರವಷ್ಟೇ ವಿನಯ್ ಕುಲಕರ್ಣಿ ಆಪ್ತ ಸಹಾಯಕ ಪ್ರಶಾಂತ ಕೇಕರೆ ಹಾಗೂ ಈಶ್ವರ ಶಿವಳ್ಳಿ ಮನೆ ಮೇಲೆ ದಾಳಿ ಮಾಡಿದ್ದರು. ಅರವಿಂದ ಧಾರವಾಡ ಗ್ರಾಮೀಣ ಕ್ಷೇತದ ಕಾಂಗ್ರೆಸ್ ಅಧ್ಯಕ್ಷರಾಗಿದ್ದು, ಈ ಹಿಂದೆ ಬಿಜೆಪಿಯಲ್ಲಿದ್ದ ಅವರು ಇತ್ತೀಚೆಗೆ ಕಾಂಗ್ರೆಸ್ ಸೇರಿದ್ದರು.
ಇದನ್ನೂ ಓದಿ : ಮಾಜಿ ಸಚಿವ ವಿನಯ್ ಕುಲಕರ್ಣಿ ಆಪ್ತನ ನಿವಾಸದ ಮೇಲೆ ಐಟಿ ದಾಳಿ