ETV Bharat / state

ಹುಬ್ಬಳ್ಳಿ: ಸೆ.8 ರಿಂದ 11ರವರಗೆ ಭಾರತ ನ್ಯೂಜಿಲ್ಯಾಂಡ್​​ ಎ ತಂಡಗಳ ನಡುವೆ ಟೆಸ್ಟ್​ ಪಂದ್ಯ - ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ಟಸ್ಟ್ ಪಂದ್ಯ​

ಭಾರತ ಎ ಮತ್ತು ನ್ಯೂಜಿಲ್ಯಾಂಡ್​​ ​ ಎ ತಂಡಗಳ ನಡುವಿನ ಅಂತಾರಾಷ್ಟ್ರೀಯ ಟೆಸ್ಟ್​ ಪಂದ್ಯ ಗುರುವಾರದಿಂದ ಹುಬ್ಬಳ್ಳಿಯ ಕೆಎಸ್​ಸಿಎ ಮೈದಾನದಲ್ಲಿ ಆರಂಭವಾಗಲಿದೆ.

Kn_hbl_02_ind_
ಹುಬ್ಬಳ್ಳಿಯಲ್ಲಿ ಅಂತರಾಷ್ಟ್ರೀಯ ಟೆಸ್ಟ್​ ಪಂದ್ಯ
author img

By

Published : Sep 6, 2022, 4:17 PM IST

ಹುಬ್ಬಳ್ಳಿ: ಇಲ್ಲಿಯ ರಾಜನಗರದ ಕೆಎಸ್​ಸಿಎ ಮೈದಾನದಲ್ಲಿ ಸೆ.8 ರಿಂದ 11 ರವರಗೆ ನಡೆಯಲಿರುವ ಭಾರತ ಎ ಹಾಗೂ ನ್ಯೂಜಿಲ್ಯಾಂಡ್​​​ ಎ ತಂಡಗಳ ನಡುವಿನ ಅಂತಾರಾಷ್ಟ್ರೀಯ ಟೆಸ್ಟ್​ ಪಂದ್ಯ ವೀಕ್ಷಿಸಲು 2 ಸಾವಿರ ಜನರಿಗೆ ಉಚಿತ ಪ್ರವೇಶ ನೀಡಲಾಗಿದೆ ಎಂದು ಕೆಎಸ್​ಸಿಎ ಧಾರವಾಡ ಕನ್ವೇನರ್ ಅವಿನಾಶ್ ಪೋತೆದಾರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಅಂತಾರಾಷ್ಟ್ರೀಯ ಟೆಸ್ಟ್​ ಪಂದ್ಯ

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ನೋಂದಾಯಿತ ಅಕಾಡೆಮಿಯ ಕ್ರಿಕೆಟ್ ಕಲಿಕಾ ಆಟಗಾರರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಸಾರ್ವಜನಿಕರ ವೀಕ್ಷಣೆಗೂ ಅನುಮತಿ ನೀಡಲಾಗಿದೆ ಎಂದರು. ಕಳೆದ ಮೂರು ವರ್ಷದಿಂದ ಈ ಮೈದಾನದಲ್ಲಿ ಯಾವುದೇ ಪಂದ್ಯಗಳು ನಡೆದಿಲ್ಲ. ಇದೀಗ ಬಿಸಿಸಿಐ ಅಂತಾರಾಷ್ಟ್ರೀಯ ಕ್ರಿಕೆಟ್​ ಪಂದ್ಯಕ್ಕೆ ಅವಕಾಶ ನೀಡಿದ್ದು, ನಗರದಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಂತಸ ಮೂಡಿಸಿದೆ ಎಂದು ತಿಳಿಸಿದರು.

ಬರುವ ದಿನಗಳಲ್ಲಿ ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳಿಗೆ ಅವಕಾಶ ನೀಡಬೇಕು ಎಂದು ಬಿಸಿಸಿಐಗೆ ಮನವಿ ಮಾಡಲಾಗಿದ್ದು, ಪ್ರಸಕ್ತ ವರ್ಷ ಮೈದಾನದಲ್ಲಿ ಮೂರು - ನಾಲ್ಕು ಪಂದ್ಯಗಳು ನಡೆಯುವ ಸಾಧ್ಯತೆ ಇದೆ. ಐಪಿಎಲ್ ಪಂದ್ಯಗಳಿಗೂ ಅವಕಾಶ ಸಿಗುವ ಸಾಧ್ಯತೆ ಇದೆ ಎಂದರು. ಈ ಸಂದರ್ಭ ವೀರಣ್ಣ ಸವಡಿ, ಅಲ್ತಾಪ್ ಕಿತ್ತೂರ, ಜೋನಲ್ ಕಮಿಟಿ ಸದಸ್ಯ ಶಿವಾನಂದ ಗುಂಜಾಳ ಇದ್ದರು.

ಇದನ್ನೂ ಓದಿ: ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ 'ಮಿಸ್ಟರ್​ ಐಪಿಎಲ್' ಸುರೇಶ್ ರೈನಾ

ಹುಬ್ಬಳ್ಳಿ: ಇಲ್ಲಿಯ ರಾಜನಗರದ ಕೆಎಸ್​ಸಿಎ ಮೈದಾನದಲ್ಲಿ ಸೆ.8 ರಿಂದ 11 ರವರಗೆ ನಡೆಯಲಿರುವ ಭಾರತ ಎ ಹಾಗೂ ನ್ಯೂಜಿಲ್ಯಾಂಡ್​​​ ಎ ತಂಡಗಳ ನಡುವಿನ ಅಂತಾರಾಷ್ಟ್ರೀಯ ಟೆಸ್ಟ್​ ಪಂದ್ಯ ವೀಕ್ಷಿಸಲು 2 ಸಾವಿರ ಜನರಿಗೆ ಉಚಿತ ಪ್ರವೇಶ ನೀಡಲಾಗಿದೆ ಎಂದು ಕೆಎಸ್​ಸಿಎ ಧಾರವಾಡ ಕನ್ವೇನರ್ ಅವಿನಾಶ್ ಪೋತೆದಾರ್ ಹೇಳಿದರು.

ಹುಬ್ಬಳ್ಳಿಯಲ್ಲಿ ಅಂತಾರಾಷ್ಟ್ರೀಯ ಟೆಸ್ಟ್​ ಪಂದ್ಯ

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಶಾಲಾ ಕಾಲೇಜು ವಿದ್ಯಾರ್ಥಿಗಳಿಗೆ ಹಾಗೂ ನೋಂದಾಯಿತ ಅಕಾಡೆಮಿಯ ಕ್ರಿಕೆಟ್ ಕಲಿಕಾ ಆಟಗಾರರ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ. ಇನ್ನು ಸಾರ್ವಜನಿಕರ ವೀಕ್ಷಣೆಗೂ ಅನುಮತಿ ನೀಡಲಾಗಿದೆ ಎಂದರು. ಕಳೆದ ಮೂರು ವರ್ಷದಿಂದ ಈ ಮೈದಾನದಲ್ಲಿ ಯಾವುದೇ ಪಂದ್ಯಗಳು ನಡೆದಿಲ್ಲ. ಇದೀಗ ಬಿಸಿಸಿಐ ಅಂತಾರಾಷ್ಟ್ರೀಯ ಕ್ರಿಕೆಟ್​ ಪಂದ್ಯಕ್ಕೆ ಅವಕಾಶ ನೀಡಿದ್ದು, ನಗರದಲ್ಲಿ ಅಂತಾರಾಷ್ಟ್ರೀಯ ಪಂದ್ಯ ನಡೆಯುತ್ತಿರುವುದು ಸಾರ್ವಜನಿಕರಿಗೆ ಸಂತಸ ಮೂಡಿಸಿದೆ ಎಂದು ತಿಳಿಸಿದರು.

ಬರುವ ದಿನಗಳಲ್ಲಿ ಮೈದಾನದಲ್ಲಿ ಅತೀ ಹೆಚ್ಚು ಪಂದ್ಯಗಳಿಗೆ ಅವಕಾಶ ನೀಡಬೇಕು ಎಂದು ಬಿಸಿಸಿಐಗೆ ಮನವಿ ಮಾಡಲಾಗಿದ್ದು, ಪ್ರಸಕ್ತ ವರ್ಷ ಮೈದಾನದಲ್ಲಿ ಮೂರು - ನಾಲ್ಕು ಪಂದ್ಯಗಳು ನಡೆಯುವ ಸಾಧ್ಯತೆ ಇದೆ. ಐಪಿಎಲ್ ಪಂದ್ಯಗಳಿಗೂ ಅವಕಾಶ ಸಿಗುವ ಸಾಧ್ಯತೆ ಇದೆ ಎಂದರು. ಈ ಸಂದರ್ಭ ವೀರಣ್ಣ ಸವಡಿ, ಅಲ್ತಾಪ್ ಕಿತ್ತೂರ, ಜೋನಲ್ ಕಮಿಟಿ ಸದಸ್ಯ ಶಿವಾನಂದ ಗುಂಜಾಳ ಇದ್ದರು.

ಇದನ್ನೂ ಓದಿ: ಎಲ್ಲ ಮಾದರಿಯ ಕ್ರಿಕೆಟ್‌ಗೆ ವಿದಾಯ ಘೋಷಿಸಿದ 'ಮಿಸ್ಟರ್​ ಐಪಿಎಲ್' ಸುರೇಶ್ ರೈನಾ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.