ETV Bharat / state

ಹುಬ್ಬಳ್ಳಿ ಫ್ಲೈ ಓವರ್ ಯೋಜನೆಯಲ್ಲಿ ರಾಣಿ ಚನ್ನಮ್ಮನಿಗೆ ಅವಮಾನ: ಉಳ್ಳಾಗಡ್ಡಿ ಮಠ ಆಕ್ರೋಶ - Rajat Ullagaddi Math

ಹುಬ್ಬಳ್ಳಿಯ ಫ್ಲೈ ಓವರ್ ನಿರ್ಮಾಣದ ನೀಲನಕ್ಷೆಯಲ್ಲಿ ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿಯನ್ನು ಮೇಲಕ್ಕೇರಿಸದೆ ಅವಮಾನ ಮಾಡಲಾಗಿದೆ ಎಂದು ಧಾರವಾಡ ಮಹಾನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿ ಮಠ ಬೇಸರ ವ್ಯಕ್ತಪಡಿಸಿದರು.

ಹುಬ್ಬಳ್ಳಿ ಫ್ಲೈ ಓವರ್ ಯೋಜನೆ
ಹುಬ್ಬಳ್ಳಿ ಫ್ಲೈ ಓವರ್ ಯೋಜನೆ
author img

By

Published : Jan 15, 2021, 12:40 PM IST

ಹುಬ್ಬಳ್ಳಿ: ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಚತುಷ್ಪಥ ರಸ್ತೆಯ ಫ್ಲೈ ಓವರ್ ನಿರ್ಮಾಣದ ನೀಲನಕ್ಷೆಯಲ್ಲಿ ಮಹಾನಗರಕ್ಕೆ ಕಳಶಪ್ರಾಯದಂತಿರುವ ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿಯನ್ನು ಮೇಲಕ್ಕೇರಿಸದೆ ಅವಮಾನ ಮಾಡಲಾಗಿದೆ ಎಂದು ಧಾರವಾಡ ಮಹಾನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿ ಮಠ ಆರೋಪಿಸಿದರು.

ಫ್ಲೈ ಓವರ್ ಯೋಜನೆ ಕುರಿತು ರಜತ್ ಉಳ್ಳಾಗಡ್ಡಿ ಮಠ ಬೇಸರ

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಲ್ಲಿಯ ಚತುಷ್ಪಥ ಫ್ಲೈ ಓವರ್ ರಸ್ತೆ ನಿರ್ಮಾಣಕ್ಕೆ ನಾಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪೂಜೆ ಸಲ್ಲಿಸಲಿದ್ದಾರೆ. ಇದಕ್ಕಾಗಿ ನಗರದ ತುಂಬೆಲ್ಲಾ ಬ್ಯಾನರ್​ಗಳನ್ನು ಹಾಕಲಾಗಿದೆ. ಆದರೆ ರಸ್ತೆ ನಿರ್ಮಾಣಕ್ಕೆ ಮಾಡಲಾಗಿರುವ ನೀಲನಕ್ಷೆಯಲ್ಲಿ ಚನ್ನಮ್ಮನ ಪುತ್ಥಳಿ ರಸ್ತೆಗಿಂತ ಕೆಳಗೆ ಕಾಣಿಸುತ್ತಿದೆ. ಆದ್ದರಿಂದ ಚನ್ನಮ್ಮನ ಪುತ್ಥಳಿಯನ್ನು ಮೇಲಕ್ಕೇರಿಸಬೇಕು ಎಂದು ರಾಜಕೀಯ ಮುಖಂಡರಿಗೆ ಕೆಪಿಸಿಸಿ ಸಂಯೋಜಕ ರಜತ್ ಉಳ್ಳಾಗಡ್ಡಿಮಠ ಮನವಿ ಮಾಡಿದರು.

ಹುಬ್ಬಳ್ಳಿಯ ಅಭಿವೃದ್ಧಿಗೆ ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ಆದರೆ ಇಂತಹ ಮಹಾನ್ ನಾಯಕಿಗೆ ಅಗೌರವ ತೋರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ಹುಬ್ಬಳ್ಳಿ: ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಚತುಷ್ಪಥ ರಸ್ತೆಯ ಫ್ಲೈ ಓವರ್ ನಿರ್ಮಾಣದ ನೀಲನಕ್ಷೆಯಲ್ಲಿ ಮಹಾನಗರಕ್ಕೆ ಕಳಶಪ್ರಾಯದಂತಿರುವ ಕಿತ್ತೂರು ರಾಣಿ ಚನ್ನಮ್ಮನ ಪುತ್ಥಳಿಯನ್ನು ಮೇಲಕ್ಕೇರಿಸದೆ ಅವಮಾನ ಮಾಡಲಾಗಿದೆ ಎಂದು ಧಾರವಾಡ ಮಹಾನಗರ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ರಜತ್ ಉಳ್ಳಾಗಡ್ಡಿ ಮಠ ಆರೋಪಿಸಿದರು.

ಫ್ಲೈ ಓವರ್ ಯೋಜನೆ ಕುರಿತು ರಜತ್ ಉಳ್ಳಾಗಡ್ಡಿ ಮಠ ಬೇಸರ

ಈ ಕುರಿತು ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು, ಇಲ್ಲಿಯ ಚತುಷ್ಪಥ ಫ್ಲೈ ಓವರ್ ರಸ್ತೆ ನಿರ್ಮಾಣಕ್ಕೆ ನಾಳೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಪೂಜೆ ಸಲ್ಲಿಸಲಿದ್ದಾರೆ. ಇದಕ್ಕಾಗಿ ನಗರದ ತುಂಬೆಲ್ಲಾ ಬ್ಯಾನರ್​ಗಳನ್ನು ಹಾಕಲಾಗಿದೆ. ಆದರೆ ರಸ್ತೆ ನಿರ್ಮಾಣಕ್ಕೆ ಮಾಡಲಾಗಿರುವ ನೀಲನಕ್ಷೆಯಲ್ಲಿ ಚನ್ನಮ್ಮನ ಪುತ್ಥಳಿ ರಸ್ತೆಗಿಂತ ಕೆಳಗೆ ಕಾಣಿಸುತ್ತಿದೆ. ಆದ್ದರಿಂದ ಚನ್ನಮ್ಮನ ಪುತ್ಥಳಿಯನ್ನು ಮೇಲಕ್ಕೇರಿಸಬೇಕು ಎಂದು ರಾಜಕೀಯ ಮುಖಂಡರಿಗೆ ಕೆಪಿಸಿಸಿ ಸಂಯೋಜಕ ರಜತ್ ಉಳ್ಳಾಗಡ್ಡಿಮಠ ಮನವಿ ಮಾಡಿದರು.

ಹುಬ್ಬಳ್ಳಿಯ ಅಭಿವೃದ್ಧಿಗೆ ನಾವು ಎಲ್ಲ ರೀತಿಯ ಸಹಕಾರ, ಬೆಂಬಲ ನೀಡುತ್ತೇವೆ. ಆದರೆ ಇಂತಹ ಮಹಾನ್ ನಾಯಕಿಗೆ ಅಗೌರವ ತೋರುವುದನ್ನು ಸಹಿಸಲು ಸಾಧ್ಯವಿಲ್ಲ ಎಂದು ಅವರು ಎಚ್ಚರಿಸಿದ್ದಾರೆ.

ETV Bharat Logo

Copyright © 2025 Ushodaya Enterprises Pvt. Ltd., All Rights Reserved.