ETV Bharat / state

ನೀರಾವರಿ ನಿಗಮ ಕಚೇರಿ ಸ್ಥಳಾಂತರ: ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ

author img

By

Published : Sep 15, 2020, 2:49 PM IST

Updated : Sep 15, 2020, 3:37 PM IST

ಕರ್ನಾಟಕ ನೀರಾವರಿ ನಿಗಮ ನಿಯಮಿತ ಕೇಂದ್ರ ಕಚೇರಿಯನ್ನು ಸ್ಥಳಾಂತರ ಮಾಡದಂತೆ ಧಾರವಾಡದಲ್ಲಿ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಆಗ್ರಹಿಸಿದ್ದಾರೆ.

ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ
ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ

ಧಾರವಾಡ: ಕರ್ನಾಟಕ ನೀರಾವರಿ ನಿಗಮ ನಿಯಮಿತ ಕೇಂದ್ರ ಕಚೇರಿಯನ್ನು ಸ್ಥಳಾಂತರ ಮಾಡದಂತೆ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಆಗ್ರಹಿಸಿದ್ದಾರೆ.

ಈ‌ ಕುರಿತು ಧಾರವಾಡದ ನೀರಾವರಿ ನಿಗಮದ ಕಚೇರಿ ಎದುರು ಧರಣಿ‌ ನಡೆಸುತ್ತಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು.

ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ ವಿರೇಶ ಸೊಬರದಮಠ

ಧಾರವಾಡದ ಶ್ರೀನಗರದಲ್ಲಿರುವ ನೀರಾವರಿ ಕಚೇರಿಯನ್ನು ಬೆಳಗಾವಿ ಸುವರ್ಣಸೌಧಕ್ಕೆ ವರ್ಗಾಯಿಸಿದ್ದಾರೆ. ಇದು ಈ ಭಾಗದ ಜನರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೀರಾವರಿ ಇಲಾಖೆ ಕಚೇರಿ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಕಳೆದ ಐದು ದಿನಗಳಿಂದ ಧರಣಿ ಮಾಡಲಾಗಿದ್ದು, ಈ ಬಗ್ಗೆ ಸ್ಥಳಾಂತರ ತಡೆ ಹಿಡಿಯುವಂತೆ ಹೈಕೋರ್ಟ್​ನಲ್ಲಿ ರಿಟ್ ಪಿಟಿಷನ್ ಅರ್ಜಿ ಸಲ್ಲಿಸಲಾಗಿದೆ. ರಿಟ್ ಪಿಟಿಷನ್ ಆದೇಶ ಆಗುವರೆಗೂ ಸ್ಥಳಾಂತರ ಪ್ರಕ್ರಿಯೆ ತಡೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಧಾರವಾಡ: ಕರ್ನಾಟಕ ನೀರಾವರಿ ನಿಗಮ ನಿಯಮಿತ ಕೇಂದ್ರ ಕಚೇರಿಯನ್ನು ಸ್ಥಳಾಂತರ ಮಾಡದಂತೆ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಆಗ್ರಹಿಸಿದ್ದಾರೆ.

ಈ‌ ಕುರಿತು ಧಾರವಾಡದ ನೀರಾವರಿ ನಿಗಮದ ಕಚೇರಿ ಎದುರು ಧರಣಿ‌ ನಡೆಸುತ್ತಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು.

ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ ವಿರೇಶ ಸೊಬರದಮಠ

ಧಾರವಾಡದ ಶ್ರೀನಗರದಲ್ಲಿರುವ ನೀರಾವರಿ ಕಚೇರಿಯನ್ನು ಬೆಳಗಾವಿ ಸುವರ್ಣಸೌಧಕ್ಕೆ ವರ್ಗಾಯಿಸಿದ್ದಾರೆ. ಇದು ಈ ಭಾಗದ ಜನರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೀರಾವರಿ ಇಲಾಖೆ ಕಚೇರಿ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಕಳೆದ ಐದು ದಿನಗಳಿಂದ ಧರಣಿ ಮಾಡಲಾಗಿದ್ದು, ಈ ಬಗ್ಗೆ ಸ್ಥಳಾಂತರ ತಡೆ ಹಿಡಿಯುವಂತೆ ಹೈಕೋರ್ಟ್​ನಲ್ಲಿ ರಿಟ್ ಪಿಟಿಷನ್ ಅರ್ಜಿ ಸಲ್ಲಿಸಲಾಗಿದೆ. ರಿಟ್ ಪಿಟಿಷನ್ ಆದೇಶ ಆಗುವರೆಗೂ ಸ್ಥಳಾಂತರ ಪ್ರಕ್ರಿಯೆ ತಡೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

Last Updated : Sep 15, 2020, 3:37 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.