ETV Bharat / state

ನೀರಾವರಿ ನಿಗಮ ಕಚೇರಿ ಸ್ಥಳಾಂತರ: ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ - ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ

ಕರ್ನಾಟಕ ನೀರಾವರಿ ನಿಗಮ ನಿಯಮಿತ ಕೇಂದ್ರ ಕಚೇರಿಯನ್ನು ಸ್ಥಳಾಂತರ ಮಾಡದಂತೆ ಧಾರವಾಡದಲ್ಲಿ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಆಗ್ರಹಿಸಿದ್ದಾರೆ.

ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ
ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ
author img

By

Published : Sep 15, 2020, 2:49 PM IST

Updated : Sep 15, 2020, 3:37 PM IST

ಧಾರವಾಡ: ಕರ್ನಾಟಕ ನೀರಾವರಿ ನಿಗಮ ನಿಯಮಿತ ಕೇಂದ್ರ ಕಚೇರಿಯನ್ನು ಸ್ಥಳಾಂತರ ಮಾಡದಂತೆ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಆಗ್ರಹಿಸಿದ್ದಾರೆ.

ಈ‌ ಕುರಿತು ಧಾರವಾಡದ ನೀರಾವರಿ ನಿಗಮದ ಕಚೇರಿ ಎದುರು ಧರಣಿ‌ ನಡೆಸುತ್ತಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು.

ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ ವಿರೇಶ ಸೊಬರದಮಠ

ಧಾರವಾಡದ ಶ್ರೀನಗರದಲ್ಲಿರುವ ನೀರಾವರಿ ಕಚೇರಿಯನ್ನು ಬೆಳಗಾವಿ ಸುವರ್ಣಸೌಧಕ್ಕೆ ವರ್ಗಾಯಿಸಿದ್ದಾರೆ. ಇದು ಈ ಭಾಗದ ಜನರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೀರಾವರಿ ಇಲಾಖೆ ಕಚೇರಿ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಕಳೆದ ಐದು ದಿನಗಳಿಂದ ಧರಣಿ ಮಾಡಲಾಗಿದ್ದು, ಈ ಬಗ್ಗೆ ಸ್ಥಳಾಂತರ ತಡೆ ಹಿಡಿಯುವಂತೆ ಹೈಕೋರ್ಟ್​ನಲ್ಲಿ ರಿಟ್ ಪಿಟಿಷನ್ ಅರ್ಜಿ ಸಲ್ಲಿಸಲಾಗಿದೆ. ರಿಟ್ ಪಿಟಿಷನ್ ಆದೇಶ ಆಗುವರೆಗೂ ಸ್ಥಳಾಂತರ ಪ್ರಕ್ರಿಯೆ ತಡೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

ಧಾರವಾಡ: ಕರ್ನಾಟಕ ನೀರಾವರಿ ನಿಗಮ ನಿಯಮಿತ ಕೇಂದ್ರ ಕಚೇರಿಯನ್ನು ಸ್ಥಳಾಂತರ ಮಾಡದಂತೆ ರೈತ ಸೇನಾ ರಾಜ್ಯಾಧ್ಯಕ್ಷ ವಿರೇಶ ಸೊಬರದಮಠ ಆಗ್ರಹಿಸಿದ್ದಾರೆ.

ಈ‌ ಕುರಿತು ಧಾರವಾಡದ ನೀರಾವರಿ ನಿಗಮದ ಕಚೇರಿ ಎದುರು ಧರಣಿ‌ ನಡೆಸುತ್ತಿರುವ ಅವರು ಇಂದು ಸುದ್ದಿಗಾರರೊಂದಿಗೆ ಮಾತನಾಡಿದರು.

ರಿಟ್ ಪಿಟಿಷನ್ ಸಲ್ಲಿಸಿದ ರೈತ ಮುಖಂಡ ವಿರೇಶ ಸೊಬರದಮಠ

ಧಾರವಾಡದ ಶ್ರೀನಗರದಲ್ಲಿರುವ ನೀರಾವರಿ ಕಚೇರಿಯನ್ನು ಬೆಳಗಾವಿ ಸುವರ್ಣಸೌಧಕ್ಕೆ ವರ್ಗಾಯಿಸಿದ್ದಾರೆ. ಇದು ಈ ಭಾಗದ ಜನರಿಗೆ ನುಂಗಲಾರದ ಬಿಸಿ ತುಪ್ಪವಾಗಿದೆ ಎಂದು ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ನೀರಾವರಿ ಇಲಾಖೆ ಕಚೇರಿ ಸ್ಥಳಾಂತರಕ್ಕೆ ಸಂಬಂಧಪಟ್ಟಂತೆ ಕಳೆದ ಐದು ದಿನಗಳಿಂದ ಧರಣಿ ಮಾಡಲಾಗಿದ್ದು, ಈ ಬಗ್ಗೆ ಸ್ಥಳಾಂತರ ತಡೆ ಹಿಡಿಯುವಂತೆ ಹೈಕೋರ್ಟ್​ನಲ್ಲಿ ರಿಟ್ ಪಿಟಿಷನ್ ಅರ್ಜಿ ಸಲ್ಲಿಸಲಾಗಿದೆ. ರಿಟ್ ಪಿಟಿಷನ್ ಆದೇಶ ಆಗುವರೆಗೂ ಸ್ಥಳಾಂತರ ಪ್ರಕ್ರಿಯೆ ತಡೆ ಹಿಡಿಯಬೇಕು ಎಂದು ಒತ್ತಾಯಿಸಿದ್ದಾರೆ.

Last Updated : Sep 15, 2020, 3:37 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.