ETV Bharat / state

ಹಿಂದೂ ಕಾರ್ಯಕರ್ತನ ಪರ ಪ್ರತಿಭಟನೆ ಹಿಂದೆ ಜೋಶಿ ಕೈವಾಡ: ಶೆಟ್ಟರ್

author img

By ETV Bharat Karnataka Team

Published : Jan 5, 2024, 10:40 PM IST

ಲೋಕಸಭೆ ಚುನಾವಣೆಯ ಲಾಭ ಪಡೆಯುವ ಉದ್ದೇಶದಿಂದ ಬಿಜೆಪಿ ನಾಯಕರು ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಟೀಕಿಸಿದ್ದಾರೆ.

ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮಾಜಿ ಸಿಎಂ ಜಗದೀಶ್ ಶೆಟ್ಟರ್
ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯ ಹಿಂದೂ ಕಾರ್ಯಕರ್ತನ ಬಂಧನ ವಿಷಯವನ್ನು ಬಿಜೆಪಿ ರಾಜಕೀಯಕ್ಕೆ ಬಳಸುತ್ತಿದೆ. ಇದರ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡ ಇದೆ. ಲೋಕಸಭೆಗೆ ಇದರ ಲಾಭ ಪಡೆಯುವ ಹುನ್ನಾರ ಅವರದ್ದು ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್​ ಸದಸ್ಯ ಜಗದೀಶ್ ಶೆಟ್ಟರ್ ಆರೋಪಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಧಾರ್ಮಿಕ, ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಮುಂದಾಗುತ್ತಿದೆ. ಈ ವಿಷಯಗಳ ಮೇಲೆ ಅಧಿಕಾರ ಹಿಡಿಯುವ ಕನಸು ಕಾಣುತ್ತದೆ. ಈ ಹಿಂದೆ ನಾನು ಮುಖ್ಯಮಂತ್ರಿ, ಶಾಸಕನಾಗಿದ್ದಾಗ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ವಜಾಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಅಲ್ಲದೇ 30 ವರ್ಷಗಳ ಹಳೆಯ ಹೋರಾಟದ ಪ್ರಕರಣಗಳನ್ನು ಪರಿವೀಕ್ಷಣೆ ಮಾಡಲು ತಿಳಿಸಿದ್ದೆ. ಈ ಹಿಂದೆ ಬಿಜೆಪಿ 7-8 ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಆವಾಗಲೇ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಅಭಿಮಾನ ಇದ್ದರೆ ಕೇಸ್​ಗಳನ್ನು ವಜಾಗೊಳಿಸಬೇಕಿತ್ತು. ಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕೆಂದು ಶೆಟ್ಟರ್​ ಒತ್ತಾಯಿಸಿದರು.

ಶ್ರೀಕಾಂತ್ ಪೂಜಾರಿ ಬಗ್ಗೆ ರಾಜ್ಯಾದ್ಯಂತ ಹೋರಾಟ ಮಾಡುವ ಆರ್.ಅಶೋಕ್ ಈ ಹಿಂದೆ ಗೃಹ ಸಚಿವರಾಗಿದ್ದಾಗ ಆಗ ಯಾಕೆ ಕೇಸ್ ಹಿಂದೆ ಪಡೆಯಲಿಲ್ಲ. ಇದೀಗ ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ಇಂತಹ ವಿಷಯಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದೊಂದು ಲೋಕಸಭಾ ಚುನಾವಣೆಯ ಗಿಮಿಕ್. ಸದ್ಯ ಈ ಪ್ರಕರಣ ಕೋರ್ಟ್​ನಲ್ಲಿದೆ. ಬಿಜೆಪಿಯವರು ಹೋರಾಟಗಾರರ ಮೇಲೆ ಕಾಳಜಿ ಇದ್ದರೆ ಬೇಲ್ ಕೊಡಿಸುವ ಕೆಲಸ ಮಾಡಬೇಕು. ಅದು ಬಿಟ್ಟು ಬೀದಿಗೆ ಇಳಿದು ಹೋರಾಟ ಮಾಡುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ನಾವು ಕಾನೂನು ಬಿಟ್ಟು ಏನೂ ಮಾಡಿಲ್ಲ, ಬಿಜೆಪಿ ರಾಜಕೀಯವಾಗಿ ಬಳಸುತ್ತಿದೆ: ಪರಮೇಶ್ವರ್

ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿಕೆ

ಹುಬ್ಬಳ್ಳಿ: ಹುಬ್ಬಳ್ಳಿಯ ಹಿಂದೂ ಕಾರ್ಯಕರ್ತನ ಬಂಧನ ವಿಷಯವನ್ನು ಬಿಜೆಪಿ ರಾಜಕೀಯಕ್ಕೆ ಬಳಸುತ್ತಿದೆ. ಇದರ ಹಿಂದೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರ ಕೈವಾಡ ಇದೆ. ಲೋಕಸಭೆಗೆ ಇದರ ಲಾಭ ಪಡೆಯುವ ಹುನ್ನಾರ ಅವರದ್ದು ಎಂದು ಮಾಜಿ ಸಿಎಂ ಹಾಗೂ ವಿಧಾನ ಪರಿಷತ್​ ಸದಸ್ಯ ಜಗದೀಶ್ ಶೆಟ್ಟರ್ ಆರೋಪಿಸಿದರು.

ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಧಾರ್ಮಿಕ, ಭಾವನಾತ್ಮಕ ವಿಷಯಗಳನ್ನಿಟ್ಟುಕೊಂಡು ರಾಜಕೀಯ ಲಾಭ ಪಡೆಯಲು ಮುಂದಾಗುತ್ತಿದೆ. ಈ ವಿಷಯಗಳ ಮೇಲೆ ಅಧಿಕಾರ ಹಿಡಿಯುವ ಕನಸು ಕಾಣುತ್ತದೆ. ಈ ಹಿಂದೆ ನಾನು ಮುಖ್ಯಮಂತ್ರಿ, ಶಾಸಕನಾಗಿದ್ದಾಗ ಹಿಂದೂ ಪರ ಸಂಘಟನೆ ಕಾರ್ಯಕರ್ತರ ಮೇಲಿನ ಪ್ರಕರಣಗಳನ್ನು ವಜಾಗೊಳಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದೇನೆ. ಅಲ್ಲದೇ 30 ವರ್ಷಗಳ ಹಳೆಯ ಹೋರಾಟದ ಪ್ರಕರಣಗಳನ್ನು ಪರಿವೀಕ್ಷಣೆ ಮಾಡಲು ತಿಳಿಸಿದ್ದೆ. ಈ ಹಿಂದೆ ಬಿಜೆಪಿ 7-8 ವರ್ಷಗಳ ಕಾಲ ಅಧಿಕಾರದಲ್ಲಿತ್ತು. ಆವಾಗಲೇ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರ ಮೇಲೆ ಅಭಿಮಾನ ಇದ್ದರೆ ಕೇಸ್​ಗಳನ್ನು ವಜಾಗೊಳಿಸಬೇಕಿತ್ತು. ಇದಕ್ಕೆ ಬಿಜೆಪಿಯವರು ಉತ್ತರ ಕೊಡಬೇಕೆಂದು ಶೆಟ್ಟರ್​ ಒತ್ತಾಯಿಸಿದರು.

ಶ್ರೀಕಾಂತ್ ಪೂಜಾರಿ ಬಗ್ಗೆ ರಾಜ್ಯಾದ್ಯಂತ ಹೋರಾಟ ಮಾಡುವ ಆರ್.ಅಶೋಕ್ ಈ ಹಿಂದೆ ಗೃಹ ಸಚಿವರಾಗಿದ್ದಾಗ ಆಗ ಯಾಕೆ ಕೇಸ್ ಹಿಂದೆ ಪಡೆಯಲಿಲ್ಲ. ಇದೀಗ ಲೋಕಸಭಾ ಚುನಾವಣೆಯಲ್ಲಿ ಲಾಭ ಪಡೆಯುವ ಉದ್ದೇಶದಿಂದ ಇಂತಹ ವಿಷಯಗಳನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಇದೊಂದು ಲೋಕಸಭಾ ಚುನಾವಣೆಯ ಗಿಮಿಕ್. ಸದ್ಯ ಈ ಪ್ರಕರಣ ಕೋರ್ಟ್​ನಲ್ಲಿದೆ. ಬಿಜೆಪಿಯವರು ಹೋರಾಟಗಾರರ ಮೇಲೆ ಕಾಳಜಿ ಇದ್ದರೆ ಬೇಲ್ ಕೊಡಿಸುವ ಕೆಲಸ ಮಾಡಬೇಕು. ಅದು ಬಿಟ್ಟು ಬೀದಿಗೆ ಇಳಿದು ಹೋರಾಟ ಮಾಡುವುದು ಸರಿಯಲ್ಲ ಎಂದರು.

ಇದನ್ನೂ ಓದಿ: ನಾವು ಕಾನೂನು ಬಿಟ್ಟು ಏನೂ ಮಾಡಿಲ್ಲ, ಬಿಜೆಪಿ ರಾಜಕೀಯವಾಗಿ ಬಳಸುತ್ತಿದೆ: ಪರಮೇಶ್ವರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.