ETV Bharat / state

ವಿಧಾನಸಭೆ ಕಲಾಪಕ್ಕೆ ಮಾಧ್ಯಮಗಳಿಗೆ ನಿಷೇಧ: ಪತ್ರಕರ್ತರಿಂದ ಪ್ರತಿಭಟನೆ - media persons protest in hubballi

ವಿಧಾನಸಭೆ ಕಲಾಪಗಳಿಗೆ ಖಾಸಗಿ ಮಾಧ್ಯಮಗಳನ್ನ ನಿಷೇಧಿಸಿರುವುದನ್ನು ಖಂಡಿಸಿ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನಾ ರ‍್ಯಾಲಿ ನಡೆಸಿ, ಮನವಿ ಸಲ್ಲಿಸಲಾಯಿತು.

ವಿಧಾನಸಭೆ ಕಲಾಪಕ್ಕೆ ಮಾಧ್ಯಮಗಳಿಗೆ ನಿಷೇಧ ಹೇರಿರುವುದನ್ನು ಖಂಡಿಸಿ ಪತ್ರಕರ್ತರಿಂದ ಪ್ರತಿಭಟನೆ
author img

By

Published : Oct 12, 2019, 9:16 AM IST

Updated : Oct 12, 2019, 9:21 AM IST

ಹುಬ್ಬಳಿ: ವಿಧಾನಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮ ನಿಷೇಧ ಖಂಡಿಸಿ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

ಪತ್ರಕರ್ತರ ಸಭಾಭವನದಿಂದ ತಹಶೀಲ್ದಾರ್​ ಕಚೇರಿವರೆಗೆ ರ‍್ಯಾಲಿ ನಡೆಸಿ ತಹಶೀಲ್ದಾರರ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ವಿಧಾನಸಭೆ ಕಲಾಪಕ್ಕೆ ಮಾಧ್ಯಮಗಳಿಗೆ ನಿಷೇಧ ಹೇರಿರುವುದನ್ನು ಖಂಡಿಸಿ ಪತ್ರಕರ್ತರಿಂದ ಪ್ರತಿಭಟನೆ

ರಾಜ್ಯ ಸರ್ಕಾರ ಮತ್ತು ಕಲಾಪದ ಸಭಾಧ್ಯಕ್ಷರ ವಿರುದ್ಧ ಪ್ರತಿಭಟನಾ ನಿರತ ಪತ್ರಕರ್ತರು ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಮೇಲೆ ಸಭಾಧ್ಯಕ್ಷರು ತೆಗೆದುಕೊಂಡ ನಿರ್ಧಾರ ಖಂಡನೀಯ. ಈ ಮೂಲಕ ಕಲಾಪಗಳನ್ನು ಪಾರದರ್ಶಕತೆಯಿಂದ ದೂರ ಮಾಡುವ ಸಂಚು ರೂಪಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕೂಡಲೇ ರಾಜ್ಯ ಸರ್ಕಾರ ಮತ್ತು ಸಭಾಧ್ಯಕ್ಷರು ಖಾಸಗಿ ಮಾಧ್ಯಮಗಳ ಮೇಲೆ ಹೇರಿರುವ ನಿರ್ಬಂಧವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಗಣಪತಿ ಗಂಗೂಳಿ, ಉಪಾಧ್ಯಕ್ಷ ಸುಶೀಲೆಂದ್ರ ಕುಂದರಗಿ, ಬಸವರಾಜ ಹೂಗಾರ, ಕೇಶವ್ ಮೂರ್ತಿ, ಶಾಮುಲಾ ಪಟ್ಟಿ, ಪರಶುರಾಮ ತಹಶೀಲ್ದಾರ, ಗುರುರಾಜ ಹೂಗಾರ, ಕೃಷ್ಣ ದಿವಾಕರ್, ರಾಜು‌ ಮುದ್ಗಲ್ ಇದ್ದರು.

ಹುಬ್ಬಳಿ: ವಿಧಾನಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮ ನಿಷೇಧ ಖಂಡಿಸಿ, ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನಾ ರ‍್ಯಾಲಿ ನಡೆಸಲಾಯಿತು.

ಪತ್ರಕರ್ತರ ಸಭಾಭವನದಿಂದ ತಹಶೀಲ್ದಾರ್​ ಕಚೇರಿವರೆಗೆ ರ‍್ಯಾಲಿ ನಡೆಸಿ ತಹಶೀಲ್ದಾರರ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಲಾಯಿತು.

ವಿಧಾನಸಭೆ ಕಲಾಪಕ್ಕೆ ಮಾಧ್ಯಮಗಳಿಗೆ ನಿಷೇಧ ಹೇರಿರುವುದನ್ನು ಖಂಡಿಸಿ ಪತ್ರಕರ್ತರಿಂದ ಪ್ರತಿಭಟನೆ

ರಾಜ್ಯ ಸರ್ಕಾರ ಮತ್ತು ಕಲಾಪದ ಸಭಾಧ್ಯಕ್ಷರ ವಿರುದ್ಧ ಪ್ರತಿಭಟನಾ ನಿರತ ಪತ್ರಕರ್ತರು ಘೋಷಣೆ ಕೂಗಿ, ಆಕ್ರೋಶ ವ್ಯಕ್ತಪಡಿಸಿದರು. ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಮೇಲೆ ಸಭಾಧ್ಯಕ್ಷರು ತೆಗೆದುಕೊಂಡ ನಿರ್ಧಾರ ಖಂಡನೀಯ. ಈ ಮೂಲಕ ಕಲಾಪಗಳನ್ನು ಪಾರದರ್ಶಕತೆಯಿಂದ ದೂರ ಮಾಡುವ ಸಂಚು ರೂಪಿಸಲಾಗಿದೆ ಎಂದು ಪ್ರತಿಭಟನಾಕಾರರು ದೂರಿದರು.

ಕೂಡಲೇ ರಾಜ್ಯ ಸರ್ಕಾರ ಮತ್ತು ಸಭಾಧ್ಯಕ್ಷರು ಖಾಸಗಿ ಮಾಧ್ಯಮಗಳ ಮೇಲೆ ಹೇರಿರುವ ನಿರ್ಬಂಧವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಗಣಪತಿ ಗಂಗೂಳಿ, ಉಪಾಧ್ಯಕ್ಷ ಸುಶೀಲೆಂದ್ರ ಕುಂದರಗಿ, ಬಸವರಾಜ ಹೂಗಾರ, ಕೇಶವ್ ಮೂರ್ತಿ, ಶಾಮುಲಾ ಪಟ್ಟಿ, ಪರಶುರಾಮ ತಹಶೀಲ್ದಾರ, ಗುರುರಾಜ ಹೂಗಾರ, ಕೃಷ್ಣ ದಿವಾಕರ್, ರಾಜು‌ ಮುದ್ಗಲ್ ಇದ್ದರು.

Intro:ಹುಬ್ಬಳಿBody:ವಿಧಾನಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮ ನಿಷೇಧ ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ

ಹುಬ್ಬಳ್ಳಿ:-ವಿಧಾನ ಸಭೆ ಕಲಾಪದಲ್ಲಿ ಖಾಸಗಿ ಮಾಧ್ಯಮಗಳ ಕ್ಯಾಮರಾಗಳನ್ನು ನಿಷೇಧ ಮಾಡಿರುವುದನ್ನು ಖಂಡಿಸಿ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದಿಂದ ಪ್ರತಿಭಟನೆ ಮಾಡಿ ತಹಶಿಲ್ದಾರರ ಮೂಲಕ ಸಭಾಧ್ಯಕ್ಷರಿಗೆ ಮನವಿ ಸಲ್ಲಿಸಿದರು.ಇದಕ್ಕೂ ಮುನ್ನ ಪತ್ರಕರ್ತರ ಸಭಾಭವನದಿಂದ ತಹಶಿಲ್ದಾರರ ಕಚೇರಿವರೆಗೆ ರ್ಯಾಲಿ ನಡೆಸಿದ್ರು. ಈ ವೇಳೆ ಕಲಾಪದಲ್ಲಿ ಖಾಸಗಿ ಮಾಧ್ಯಮಗಳ ಮೇಲೆ ನಿರ್ಬಂಧ ಹೇರಿರುವುದನ್ನು ಖಂಡಿಸಿ ರಾಜ್ಯ ಸರ್ಕಾರ, ಮತ್ತು ಕಲಾಪದ ಸಭಾಧ್ಯಕ್ಷರ ವಿರುದ್ದ ಪ್ರತಿಭಟನಾ ನಿರತ ಪತ್ರಕರ್ತರು ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮದ ಮೇಲೆ ಸಭಾಧ್ಯಕ್ಷರು ತೆಗೆದುಕೊಂಡ ನಿರ್ಧಾರ ಖಂಡನೀಯವಾಗಿದ್ದು, ಈ ಮೂಲಕ ಕಲಾಪಗಳನ್ನು ಪಾರದರ್ಶಕತೆಯಿಂದ ದೂರ ಮಾಡುವ ಸಂಚು ರೂಪಿಸಲಾಗಿದೆ. ಈ ಹಿಂದೆ ಕಲಾಪಗಳಲ್ಲಿ ಸಚಿವರು ತೋರಿದ ಘಟನೆಗಳನ್ನು ಈ ಕಾಲದಲ್ಲಿ ನೆನೆದುಕೊಳ್ಳುವುದು ಸೂಕ್ತವಾಗಿದೆ. ಅಲ್ಲದೇ ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವ ಮೂಲಕ ಸರ್ಕಾರ ಮತ್ತು ಜನರ ನಡುವಿನ ಸೇತುವೆಯನ್ನು ಹಾಳು ಮಾಡಿದೆ. ಈ ಕೂಡಲೇ ರಾಜ್ಯ ಸರ್ಕಾರ ಮತ್ತು ಸಭಾಧ್ಯಕ್ಷರು ಖಾಸಗಿ ಮಾಧ್ಯಮಗಳ ಮೇಲೆ ಹೇರಿರುವ ನಿರ್ಬಂಧವನ್ನು ವಾಪಾಸ್ ಪಡೆದು ಮೊದಲಿನಂತೆ ಕಲಾಪಗಳ ದೃಶ್ಯಗಳನ್ನು ಸೆರೆ ಹಿಡಿಯಲು ಅವಕಾಶವನ್ನು ಕಲ್ಪಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ಸಂಘದ ಅಧ್ಯಕ್ಷ ಗಣಪತಿ ಗಂಗೂಳಿ, ಉಪಾಧ್ಯಕ್ಷ ಸುಶೀಲೆಂದ್ರ ಕುಂದರಗಿ,ಬಸವರಾಜ ಹೂಗಾರ, ಕೇಶವ್ ಮೂರ್ತಿ, ಶಾಮುಲಾ ಪಟ್ಟಿ, ಪರಶುರಾಮ ತಹಶಿಲ್ದಾರ, ಗುರುರಾಜ ಹೂಗಾರ, ಕೃಷ್ಣ ದಿವಾಕರ್,ರಾಜು‌ಮುದ್ಗಲ್. ಸೇರಿದಂತೆ ಮುಂತಾದವರು ಇದ್ದರು.....!


______________________________


ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ ಕುಂದಗೋಳConclusion:ಯಲ್ಲಪ್ಪ ಕುಂದಗೊಳ
Last Updated : Oct 12, 2019, 9:21 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.