ETV Bharat / state

ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ: ಕೋಡಿಮಠ ಸ್ವಾಮೀಜಿ ಭವಿಷ್ಯ

author img

By

Published : Oct 4, 2022, 4:54 PM IST

ಆಶ್ವಿಜ ಕೊನೆಯಿಂದ ಯುಗಾದಿ ಕೊನೆಯವರೆಗೂ ಅಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

KN_DWD
ಕೋಡಿಮಠ ಶ್ರೀಗಳು

ಧಾರವಾಡ: ಪ್ರಾರಂಭದಲ್ಲೇ ನಾನು ಹೇಳಿದ್ದೆ, ಮಳೆ, ಗಾಳಿ, ಗುಡುಗು ಇದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ನಡುಗುತ್ತದೆ, ರೋಗ ಹೆಚ್ಚಾಗುತ್ತವೆ ಎಂದು ಈ ಹಿಂದೆ ಹೇಳಿದ್ದೆ. ಅದರಂತೆ ಇನ್ನೂ ಮುಂದೆ ಮಳೆಯಾಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ. ಮಳೆಯಿಂದ, ರೋಗದಿಂದ ಭೂಮಿಯಿಂದ ತೊಂದರೆಯಾಗುತ್ತದೆ. ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

ಅಲ್ಲೋಲ ಕಲ್ಲೋಲ ಪ್ರಸಂಗ ಹೆಚ್ಚಿದೆ: ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಭೂಮಿಯಲ್ಲಿ ಇರುವ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಿದೆ. ಈ ಸಂವತ್ಸರದ ಕಡೆವರೆಗೂ ಈ ತೊಂದರೆ ಇದೆ ಅಚ್ಛರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ ಅದೂ ಆಗುತ್ತದೆ ಕಾದು ನೋಡಿ. ಬೆಂಕಿಯಿಂದ ಹೆಚ್ಚು ಸಮಸ್ಯೆ ಇದೆ. ಅಪಮೃತ್ಯು ಹೆಚ್ಚಿದೆ. ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಒಂದೆಡೆ ಪ್ರಕೃತಿ ವಿಕೋಪ, ಮತಾಂದತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ ಎಂದು ಹೇಳಿದ್ದಾರೆ.

ಜಗತ್ತಿಗೆ ವಿಪರೀತ ಕ್ಷಾಮ: ರಾಜಕೀಯ ಭವಿಷ್ಯ ಹಿನ್ನೆಲೆ ಈಗ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಹೇಳುತ್ತೇನೆ ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ ಬಳ್ಳಾರಿಯಲ್ಲಿ ಈ ಬಗ್ಗೆ ಹೇಳಿದ್ದೆ ಕೊರೊನಾ ಹೋಗುತ್ತದೆ ಎಂದು ಹೋಗುವಾಗ ಜಗತ್ತಿಗೆ ವಿಪರೀತ ಕ್ಷಾಮ ಕೊಟ್ಟು ಹೋಗುತ್ತದೆ. ದುಃಖ ಕೊಟ್ಟು ಹೋಗುತ್ತದೆ, ಕುಡಿಯಲು ನೀರು ಇಲ್ಲದಂತೆ ಮಾಡುತ್ತದೆ ಅಂತಹ ಪ್ರಸಂಗ ಇದೆ.

ಕೊರೊನಾ ಈ ವರ್ಷದಲ್ಲಿ ಬಿಡುಗಡೆಯಾಗತ್ತದೆ. ಭವಿಷ್ಯ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ. ಆದರೆ, ಈ ಕೊರೊನಾ ಮೊದಲು ಬಂದಿದ್ದೇ ದೇವರ ಮೇಲೆ ಮೊದಲು ಮಠ, ಮಾನ್ಯಗಳ ಮೇಲೆ ಬಂತು ಆ ಮೇಲೆ ಮನುಷ್ಯರ ಮೇಲೆ ಬಂತು ಎಂದರು.

ರಾಜಕೀಯದ ಬಗ್ಗೆ ಏನೂ ಹೇಳಲ್ಲ: ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ. ಬಹಳ ಕಷ್ಟ ಕೊಟ್ಟು ಹೋಗುತ್ತದೆ. ಇನ್ನು ರಾಜಕೀಯ ಬದಲಾವಣೆ ಬಗ್ಗೆ ಏನೂ ಹೇಳಲು ಹೋಗೋದಿಲ್ಲ ಎಂದು ನಸುನಕ್ಕರು. ಎಲ್ಲರಿಗೂ ಒಳ್ಳೆಯದಾಗಲಿ ಸರ್ಕಾರ ಚೆನ್ನಾಗಿ ನಡೆಯುತ್ತಿದೆ ಅದಕ್ಕೇಕೆ ನಾನು ಅಪಶಕುನ ನುಡಿಯಬೇಕಾ? ಅದನ್ನು ಯುಗಾದಿ ಫಲದ ಮೇಲೆ ಹೇಳುತ್ತೇನೆ ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ.

ಇದು ಶುಭ ಆಗೋದಿಲ್ಲ ಅಶುಭವಾಗುತ್ತದೆ. ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು ಅದು ಸಂರಕ್ಷಣೆಯಾಗುತ್ತದೆ. ಆಶ್ವಿಜ ಕೊನೆಯಿಂದ ಯುಗಾದಿ ಕೊನೆಯವರೆಗೂ ಅಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಸುತ್ತೂರು ಶಾಖಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ.. ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್​ ನಾಯಕ

ಧಾರವಾಡ: ಪ್ರಾರಂಭದಲ್ಲೇ ನಾನು ಹೇಳಿದ್ದೆ, ಮಳೆ, ಗಾಳಿ, ಗುಡುಗು ಇದೆ. ಬೆಂಕಿಯಿಂದ ಕಾಟ, ಮತಾಂಧತೆ ಹೆಚ್ಚಳ, ಸಾವು ನೋವುಗಳಾಗುತ್ತವೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಈ ಕುರಿತು ಮಾತನಾಡಿದ ಅವರು, ಜನ ಅಶಾಂತಿಯಿಂದ ಇರುತ್ತಾರೆ. ಭೂಮಿ ನಡುಗುತ್ತದೆ, ರೋಗ ಹೆಚ್ಚಾಗುತ್ತವೆ ಎಂದು ಈ ಹಿಂದೆ ಹೇಳಿದ್ದೆ. ಅದರಂತೆ ಇನ್ನೂ ಮುಂದೆ ಮಳೆಯಾಗುವ ಲಕ್ಷಣ ಇದೆ. ಕಾರ್ತಿಕ ಮಾಸದಲ್ಲಿ ತೊಂದರೆಯಾಗುವ ಲಕ್ಷಣ ಇದೆ. ಮಳೆಯಿಂದ, ರೋಗದಿಂದ ಭೂಮಿಯಿಂದ ತೊಂದರೆಯಾಗುತ್ತದೆ. ವಿಶೇಷವಾಗಿ ಹಿಂದೆ ಹೇಳಿದಂತೆ ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಎಂದು ಭವಿಷ್ಯ ನುಡಿದಿದ್ದಾರೆ.

ಅಲ್ಲೋಲ ಕಲ್ಲೋಲ ಪ್ರಸಂಗ ಹೆಚ್ಚಿದೆ: ಕಾಡಿನಿಂದ ನಾಡಿಗೆ ಪ್ರಾಣಿಗಳು ಬರುತ್ತವೆ ಭೂಮಿಯಲ್ಲಿ ಇರುವ ವಿಷಜಂತು, ಪ್ರಾಣಿಗಳು ಹೊರಬಂದು ಜನರಿಗೆ ತೊಂದರೆ ಕೊಡುವ ಪ್ರಸಂಗ ಬಹಳ ಇದೆ. ಹಾಗಾಗಿ ಪ್ರಕೃತಿ ಅಲ್ಲೋಲ ಕಲ್ಲೋಲ ಆಗುವ ಪ್ರಸಂಗ ಹೆಚ್ಚಿದೆ. ಈ ಸಂವತ್ಸರದ ಕಡೆವರೆಗೂ ಈ ತೊಂದರೆ ಇದೆ ಅಚ್ಛರಿಯ ಅವಘಡ ಕಾದಿದೆ ಎಂದು ಈ ಹಿಂದೆ ಹೇಳಿದ್ದೆ ಅದೂ ಆಗುತ್ತದೆ ಕಾದು ನೋಡಿ. ಬೆಂಕಿಯಿಂದ ಹೆಚ್ಚು ಸಮಸ್ಯೆ ಇದೆ. ಅಪಮೃತ್ಯು ಹೆಚ್ಚಿದೆ. ಅಶಾಂತಿಯಾಗಿ ಕಲಹಗಳು ಹೆಚ್ಚಾಗುತ್ತವೆ. ಒಂದೆಡೆ ಪ್ರಕೃತಿ ವಿಕೋಪ, ಮತಾಂದತೆ ಹೆಚ್ಚಾಗಿ ಅಶಾಂತಿ, ಕಲಹಗಳು ಹೆಚ್ಚಾಗಿ ಜನಮನವನ್ನು ಶಾಂತಿ ಕದಡುವ ಕೆಲಸ ಆಗುತ್ತದೆ ಎಂದು ಹೇಳಿದ್ದಾರೆ.

ಜಗತ್ತಿಗೆ ವಿಪರೀತ ಕ್ಷಾಮ: ರಾಜಕೀಯ ಭವಿಷ್ಯ ಹಿನ್ನೆಲೆ ಈಗ ಚೆನ್ನಾಗಿ ನಡೆಯುತ್ತಿದೆ. ಚುನಾವಣೆ ಕಾಲದಲ್ಲಿ ಹೇಳುತ್ತೇನೆ ಇನ್ನೊಂದು ವರ್ಷದಲ್ಲಿ ಕೊರೊನಾ ಹೋಗುತ್ತದೆ ಬಳ್ಳಾರಿಯಲ್ಲಿ ಈ ಬಗ್ಗೆ ಹೇಳಿದ್ದೆ ಕೊರೊನಾ ಹೋಗುತ್ತದೆ ಎಂದು ಹೋಗುವಾಗ ಜಗತ್ತಿಗೆ ವಿಪರೀತ ಕ್ಷಾಮ ಕೊಟ್ಟು ಹೋಗುತ್ತದೆ. ದುಃಖ ಕೊಟ್ಟು ಹೋಗುತ್ತದೆ, ಕುಡಿಯಲು ನೀರು ಇಲ್ಲದಂತೆ ಮಾಡುತ್ತದೆ ಅಂತಹ ಪ್ರಸಂಗ ಇದೆ.

ಕೊರೊನಾ ಈ ವರ್ಷದಲ್ಲಿ ಬಿಡುಗಡೆಯಾಗತ್ತದೆ. ಭವಿಷ್ಯ ಜಗತ್ತಿನ ಇತಿಹಾಸದಲ್ಲೇ ಇಂತಹ ರೋಗ ಬಂದಿಲ್ಲ ಜನ ಕಷ್ಟ ಬಂದಾಗ ಮಾತ್ರ ದೇವರು, ಮಠ ಮಂದಿರ ಎನ್ನುತ್ತಾರೆ. ಆದರೆ, ಈ ಕೊರೊನಾ ಮೊದಲು ಬಂದಿದ್ದೇ ದೇವರ ಮೇಲೆ ಮೊದಲು ಮಠ, ಮಾನ್ಯಗಳ ಮೇಲೆ ಬಂತು ಆ ಮೇಲೆ ಮನುಷ್ಯರ ಮೇಲೆ ಬಂತು ಎಂದರು.

ರಾಜಕೀಯದ ಬಗ್ಗೆ ಏನೂ ಹೇಳಲ್ಲ: ಜನವರಿವರೆಗೂ ಕೊರೊನಾ ಹೆಚ್ಚು ಹರಡುವ ಕಾಲವಿದೆ. ಇದು ಮತ್ತೊಂದು ರೂಪವಾಗುವ ಲಕ್ಷಣವೂ ಇದೆ. ಬಹಳ ಕಷ್ಟ ಕೊಟ್ಟು ಹೋಗುತ್ತದೆ. ಇನ್ನು ರಾಜಕೀಯ ಬದಲಾವಣೆ ಬಗ್ಗೆ ಏನೂ ಹೇಳಲು ಹೋಗೋದಿಲ್ಲ ಎಂದು ನಸುನಕ್ಕರು. ಎಲ್ಲರಿಗೂ ಒಳ್ಳೆಯದಾಗಲಿ ಸರ್ಕಾರ ಚೆನ್ನಾಗಿ ನಡೆಯುತ್ತಿದೆ ಅದಕ್ಕೇಕೆ ನಾನು ಅಪಶಕುನ ನುಡಿಯಬೇಕಾ? ಅದನ್ನು ಯುಗಾದಿ ಫಲದ ಮೇಲೆ ಹೇಳುತ್ತೇನೆ ಶುಭನಾಮ ಸಂವತ್ಸರ ಅಶುಭವನ್ನು ಕೊಟ್ಟು ಹೋಗುತ್ತದೆ.

ಇದು ಶುಭ ಆಗೋದಿಲ್ಲ ಅಶುಭವಾಗುತ್ತದೆ. ಹೊರಗಡೆ ಹೋಗುವಾಗ ಕೈಯಲ್ಲಿ ಬಡಿಗೆ ಹಿಡಿದುಕೊಂಡು ಹೋಗುವುದು ಒಳ್ಳೆಯದು ಅದು ಸಂರಕ್ಷಣೆಯಾಗುತ್ತದೆ. ಆಶ್ವಿಜ ಕೊನೆಯಿಂದ ಯುಗಾದಿ ಕೊನೆಯವರೆಗೂ ಅಗಾಂಗ ಕಾಯಿಲೆಗಳು ಹೆಚ್ಚಾಗುತ್ತವೆ. ಪಾರ್ಶ್ವವಾಯು, ಹೃದಯಾಘಾತ ಈ ಕಾಯಿಲೆ ಹೆಚ್ಚಾಗಿ ಜನ ಸಾಯುತ್ತಾರೆ. ಮೂರು ತಿಂಗಳಲ್ಲಿ ಈ ಕಾಯಿಲೆ ಹೆಚ್ಚಾಗಲಿದೆ ಎಂದು ಕೋಡಿಮಠ ಸ್ವಾಮೀಜಿ ಭವಿಷ್ಯ ನುಡಿದಿದ್ದಾರೆ.

ಇದನ್ನೂ ಓದಿ: ಸುತ್ತೂರು ಶಾಖಾ ಮಠಕ್ಕೆ ರಾಹುಲ್ ಗಾಂಧಿ ಭೇಟಿ.. ಶ್ರೀಗಳ ಆಶೀರ್ವಾದ ಪಡೆದ ಕಾಂಗ್ರೆಸ್​ ನಾಯಕ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.