ಧಾರವಾಡ: ಅತಿ ವೇಗದಿಂದ ಕೆಎಸ್ಆರ್ಟಿಸಿ ಬಸ್ವೊಂದು ನಿಯಂತ್ರಣ ಕಳೆದುಕೊಂಡು ಹೊಲಕ್ಕೆ ನುಗ್ಗಿ, ಪಲ್ಟಿಯಾದ ಘಟನೆ ಹುಬ್ಬಳ್ಳಿ-ವಿಜಯಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಬರುವ ಬೆಣ್ಣಿ ಹಳ್ಳದ ಸೇತುವೆ ಬಳಿ ಬುಧವಾರ ಸಂಭವಿಸಿದೆ.
ಹುಬ್ಬಳ್ಳಿಯಿಂದ ಬಾಗಲಕೋಟೆಗೆ ತೆರಳುತ್ತಿದ್ದ ಬಸ್ ಇದಾಗಿದ್ದು, ಅತಿಯಾದ ವೇಗದಿಂದ ನಿಯಂತ್ರಣ ಕಳೆದುಕೊಂಡು ಹೊಲಕ್ಕೆ ನುಗ್ಗಿದೆ. ಬಾಗಲಕೋಟೆ ಡಿಪೋಗೆ ಸಂಬಂಧಿಸಿದ ಬಸ್ ಇದಾಗಿದೆ.
ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ
ಚಾಲಕನ ಅತಿಯಾದ ವೇಗವೇ ಘಟನೆಗೆ ಕಾರಣ ಎಂದು ಹೇಳಲಾಗುತ್ತಿದೆ. ಬಸ್ನಲ್ಲಿರುವ ಪ್ರಯಾಣಿಕರು, ಚಾಲಕ ಹಾಗೂ ನಿರ್ವಾಹಕರು ಗಾಯಗೊಂಡಿದ್ದು, ಸ್ಥಳೀಯ ನವಲಗುಂದ ತಾಲೂಕು ಆಸ್ಪತ್ರೆಗೆ ರವಾನಿಸಲಾಗಿದೆ.
ಸ್ಥಳಕ್ಕೆ ನವಲಗುಂದ ಪೊಲೀಸ್ ಠಾಣೆಯ ಪಿಎಸ್ಐ ಕಲ್ಮೇಶ ಬೆನ್ನೂರ್ ಹಾಗೂ ಸಿಬ್ಬಂದಿ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ರಾಮನಗರ: ಪತಿಯ ಕಿರುಕುಳ ತಾಳಲಾರದೆ ಐದು ತಿಂಗಳ ಗರ್ಭಿಣಿ ಆತ್ಮಹತ್ಯೆ