ಹುಬ್ಬಳ್ಳಿ : ಕುಂದಗೋಳ ಉಪ ಚುನಾವಣೆ ಹಿನ್ನೆಲೆಯಲ್ಲಿ ಸಚಿವ ಡಿ.ಕೆ. ಶಿವಕುಮಾರ್ ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಮಾತುಕತೆ ನಡೆಸಿದ್ರು.
ನಗರದ ವಿಮಾನ ನಿಲ್ದಾಣದಲ್ಲಿ ಮುಖಾಮುಖಿಯಾದ ನಾಯಕರು ಕುಂದಗೋಳ ಉಪ ಚುನಾವಣೆ ಕುರಿತಂತೆ ಚರ್ಚೆ ನಡೆಸಿದರು. ಕುಂದಗೋಳ ಉಪ ಚುನಾವಣೆ ಉಸ್ತುವಾರಿ ವಹಿಸಿಕೊಂಡಿರುವ ಡಿ.ಕೆ. ಶಿವಕುಮಾರ್ ಅವರಿಂದ ಮಾಹಿತಿ ಪಡೆದ ಕೆ.ಸಿ ವೇಣುಗೋಪಾಲ್ ಮೈತ್ರಿ ಪಕ್ಷದ ಅಭ್ಯರ್ಥಿ ಕುಸುಮ ಶಿವಳ್ಳಿ ಗೆಲುವಿಗೆ ನಾಯಕರು ಒಗ್ಗಟ್ಟಿನಿಂದ ಕೆಲಸ ನಿರ್ವಹಿಸಬೇಕು. ಕಾರ್ಯಕರ್ತರಲ್ಲಿ ಹಾಗೂ ಜೆಡಿಎಸ್ ನಾಯಕರಲ್ಲಿ ಸಮನ್ವಯತೆ ಕಾಯ್ದುಕೊಂಡು ಕುಸುಮ ಶಿವಳ್ಳಿ ಗೆಲುವಿಗೆ ಶ್ರಮಿಸುವಂತೆ ಸಲಹೆ ನೀಡಿದರು.
ನಂತರ ಸಚಿವ ಶಿವಕುಮಾರ್ ನೂಲ್ವಿಯಲ್ಲಿ ಆಯೋಜಿಸಿರುವ ಸಮಾವೇಶಕ್ಕೆ ತೆರಳಿದ್ರು. ವೇಣುಗೋಪಾಲ್ ಬೆಂಗಳೂರಿನತ್ತ ಪ್ರಯಾಣ ಬೆಳೆಸಿದ್ರು.