ಹುಬ್ಬಳ್ಳಿ: ಕೇಂದ್ರ ಸರ್ಕಾರ ಜಾರಿ ಮಾಡಿರುವ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಜಿಲ್ಲಾ ಪರಿಶಿಷ್ಟ ಜಾತಿ ಮತ್ತು ಪಂಗಡದ ಪೌರಕಾರ್ಮಿಕರ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ದೇಶದಲ್ಲಿ ಶತ-ಶತಮಾನದಿಂದ ಸರ್ವಧರ್ಮಿಯರು ಅಣ್ಣ-ತಮ್ಮಂದಿರಂತೆ ಬಾಳುತಿದ್ದಾರೆ. ಅಲ್ಲದೇ ಶಾಂತಿ ಸೌಹಾರ್ದತೆಯ ಪ್ರತೀಕವಾಗಿ ಜೀವನ ನಡೆಸುತ್ತಿದ್ದಾರೆ. ಆದರೆ, ಸಿಎಎ, ಎನ್ಆರ್ಸಿ ಜಾರಿಯಿಂದಾಗಿ ದೇಶದಲ್ಲಿ ಕೋಮುವಾದ ಸೃಷ್ಟಿಯಾಗುತ್ತಿದೆ ಎಂದು ಪ್ರತಿಭಟನಾಕಾರರು ಕಿಡಿ ಕಾರಿದರು.
ಕೂಡಲೇ ಸರ್ಕಾರ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ರದ್ದುಗೊಳಿಸಿ, ದೇಶದಲ್ಲಿ ಶಾಂತಿಯನ್ನು ಕಾಪಾಡಬೇಕು ಎಂದು ಒತ್ತಾಯಿಸಿದರು.