ETV Bharat / state

ಕೊಲೆ ಮಾಡಿದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ: ಜಿಲ್ಲಾ ಸತ್ರ ನ್ಯಾಯಾಲಯ ತೀರ್ಪು

author img

By

Published : Aug 12, 2021, 10:13 PM IST

ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದ ಎಂದು ಕೋಪಗೊಂಡು ಹೊಂಚು ಹಾಕಿ ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಜಿಲ್ಲಾ ಸತ್ರ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ತಲಾ 60 ಸಾವಿರ ರೂ. ದಂಡ ವಿಧಿಸಿದೆ.

culprits
ಜೀವಾವಧಿ ಶಿಕ್ಷೆ

ಹುಬ್ಬಳ್ಳಿ:ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದ ಎಂಬ ಕಾರಣಕ್ಕೆ ಹೊಂಚು ಹಾಕಿ ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 60 ಸಾವಿರ ರೂ. ದಂಡ ವಿಧಿಸಿ ನಾಯ್ಯಾಲಯ ಆದೇಶ ಹೊರಡಿಸಿದೆ.

ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಯಲ್ಲಾಪುರ ಓಣಿಯ ಕರಿಗಣ್ಣವರ ಹಕ್ಕಲದ ಗಣೇಶ ಎಂಟರ್​ಪ್ರೈಸೆಸ್ ಹಾಲಿನ ಡೈರಿ ಮಾಲೀಕ ರವಿಚಂದ್ರ ಕುಂದಗೋಳ ಎಂಬಾತ ಕೊಲೆಯಾದವ. ಈತ ರಾಘವೇಂದ್ರ ಮಾಳಗಿ ತಂಗಿ ಹಾಗೂ ಮಂಜುನಾಥ ಜೈನಗೌಡ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದ ಎನ್ನಲಾಗಿತ್ತು. ಈ ಹಿನ್ನೆಲೆ ದ್ವೇಷದಿಂದ 2014 ರ ಮೇ. 20 ರಂದು ರಾತ್ರಿ 3.30ಕ್ಕೆ ಡೈರಿಯಲ್ಲಿರುವಾಗ ಕಣ್ಣಿಗೆ ಕಾರದ ಪುಡಿ ಎರಚಿ, ನಂತರ ಬಡಗಿಯಿಂದ ಹೊಡೆದು ಪ್ರಜ್ಞೆ ತಪ್ಪಿಸಿ ಅವನ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಿಡ್ಯ್ನಾಪ್​ ಮಾಡಿದ್ದರು. ಟಾಟಾ ಏಸ್‌ನಲ್ಲಿ ಅಪಹರಿಸಿಕೊಂಡು ದಾಂಡೇಲಿಯ ಜೋಯಿಡಾ ರಸ್ತೆಯಲ್ಲಿ ಕಾಳಿ ನದಿಯ ದಂಡೆ ಮೇಲೆ ರವಿಚಂದ್ರನ ಕುತ್ತಿಗೆ ಹಗ್ಗ ಬಿಗಿದು ಕೊಲೆ ಮಾಡಿದ್ದರು.

life sentence for murder case culprits
ಜೀವಾವಧಿ ಶಿಕ್ಷೆ

ನಂತರ ಮೃತದೇಹವನ್ನು ವಿರ್ನೋಲಿ ಅರಣ್ಯ ವಲಯದ ತಗ್ಗಿನ ಪ್ರದೇಶದಲ್ಲಿ ಮಣ್ಣಲ್ಲಿ ಹೂತಿದ್ದರು. ಕೊಲೆ ಮಾಡಲು ಬಳಸಿದ ಬಡಗೆ, ಮೊಬೈಲ್ ಮತ್ತು ಸಲಕರಣೆಗಳನ್ನು ಹರಿಯುವ ನೀರಿನಲ್ಲಿ ಎಸೆದು ಸಾಕ್ಷಿ ಇಲ್ಲದ ಹಾಗೆ ಮಾಡಿದ್ದರು. ಆದರೆ ಕೊಲೆ ಮಾಡಲು ಬಳಸಿದ ಟಾಟಾಯೇಸ್‌ನ್ನು ಧಾರವಾಡದಲ್ಲಿ ಬಿಟ್ಟು ಬಂದಿದ್ದರು.

ಮಗ ಮನೆಗೆ ಬಾರದ ಕಾರಣ ತಾಯಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ತನಿಖೆ ಬೆನ್ನತ್ತಿದ ಪೊಲೀಸರಿಗೆ ಧಾರವಾಡದಲ್ಲಿರುವ ಅನುಮಾನಾಸ್ಪದ ಟಾಟಾಯೇಸ್ ದೊರೆತಿತ್ತು. ತನಿಖೆ ಮುಂದುವರಿಸಿದ ಪೊಲೀಸರು ಸಾಕ್ಷಿ ಸಮೇತ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

life sentence for murder case culprits
ಜೀವಾವಧಿ ಶಿಕ್ಷೆ

ಆ.12 ರಂದು ಗುರುವಾರದಂದು 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದು, ಬಂಧಿತ ಆರೋಪಿಗಳಾದ ರಾಘವೇಂದ್ರ ಮಾಳಗಿ ಮತ್ತು ಮಂಜುನಾಥ ಜೈ‌ನಗೌಡ್ರಗೆ ಕಲಂ 363, 302, 201ಅಡಿ ಜೀವಾವಧಿ ಶಿಕ್ಷೆ ಮತ್ತು ತಲಾ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಕಲಂ 301 ಅಡಿ 5 ವರ್ಷ ಕಾರಾಗೃಹ ಶಿಕ್ಷೆ, ತಲಾ 5 ಸಾವಿರ ರೂ. ದಂಡ. ಕಲಂ 363 ಅಡಿ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ. ದಂಡದ ಮೊತ್ತ 1 ಲಕ್ಷ ರೂ. ಮೃತನ ತಾಯಿಗೆ ನೀಡಲು ನ್ಯಾಯಾಲಯ ಆದೇಶ ನೀಡಿದೆ. ಬೆಂಡಿಗೇರಿ ಇನ್ಸ್​​ಪೆಕ್ಟರ್​ ಟಿ.ಜಿ. ದೊಡ್ಡಮನಿ ಪ್ರಕರಣದ ತನಿಖೆ ಮಾಡಿದ್ದು, ಸರ್ಕಾರದ ಪರವಾಗಿ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ಅಭಿಯೋಜಕಿ ಗಿರಿಜಾ ತಮ್ಮಿವಾಳ ವಾದ ಮಾಡಿದ್ದಾರೆ.

ಹುಬ್ಬಳ್ಳಿ:ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದ ಎಂಬ ಕಾರಣಕ್ಕೆ ಹೊಂಚು ಹಾಕಿ ಕೊಲೆ ಮಾಡಿದ್ದ ಇಬ್ಬರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 60 ಸಾವಿರ ರೂ. ದಂಡ ವಿಧಿಸಿ ನಾಯ್ಯಾಲಯ ಆದೇಶ ಹೊರಡಿಸಿದೆ.

ಬೆಂಡಿಗೇರಿ ಪೊಲೀಸ್ ಠಾಣಾ ವ್ಯಾಪ್ತಿಯ ಯಲ್ಲಾಪುರ ಓಣಿಯ ಕರಿಗಣ್ಣವರ ಹಕ್ಕಲದ ಗಣೇಶ ಎಂಟರ್​ಪ್ರೈಸೆಸ್ ಹಾಲಿನ ಡೈರಿ ಮಾಲೀಕ ರವಿಚಂದ್ರ ಕುಂದಗೋಳ ಎಂಬಾತ ಕೊಲೆಯಾದವ. ಈತ ರಾಘವೇಂದ್ರ ಮಾಳಗಿ ತಂಗಿ ಹಾಗೂ ಮಂಜುನಾಥ ಜೈನಗೌಡ ಹೆಂಡತಿಯೊಂದಿಗೆ ಅನೈತಿಕ ಸಂಬಂಧ ಬೆಳೆಸಲು ಪ್ರಯತ್ನಿಸಿದ್ದ ಎನ್ನಲಾಗಿತ್ತು. ಈ ಹಿನ್ನೆಲೆ ದ್ವೇಷದಿಂದ 2014 ರ ಮೇ. 20 ರಂದು ರಾತ್ರಿ 3.30ಕ್ಕೆ ಡೈರಿಯಲ್ಲಿರುವಾಗ ಕಣ್ಣಿಗೆ ಕಾರದ ಪುಡಿ ಎರಚಿ, ನಂತರ ಬಡಗಿಯಿಂದ ಹೊಡೆದು ಪ್ರಜ್ಞೆ ತಪ್ಪಿಸಿ ಅವನ ಕೈಕಾಲು ಕಟ್ಟಿ, ಬಾಯಿಗೆ ಬಟ್ಟೆ ತುರುಕಿ ಕಿಡ್ಯ್ನಾಪ್​ ಮಾಡಿದ್ದರು. ಟಾಟಾ ಏಸ್‌ನಲ್ಲಿ ಅಪಹರಿಸಿಕೊಂಡು ದಾಂಡೇಲಿಯ ಜೋಯಿಡಾ ರಸ್ತೆಯಲ್ಲಿ ಕಾಳಿ ನದಿಯ ದಂಡೆ ಮೇಲೆ ರವಿಚಂದ್ರನ ಕುತ್ತಿಗೆ ಹಗ್ಗ ಬಿಗಿದು ಕೊಲೆ ಮಾಡಿದ್ದರು.

life sentence for murder case culprits
ಜೀವಾವಧಿ ಶಿಕ್ಷೆ

ನಂತರ ಮೃತದೇಹವನ್ನು ವಿರ್ನೋಲಿ ಅರಣ್ಯ ವಲಯದ ತಗ್ಗಿನ ಪ್ರದೇಶದಲ್ಲಿ ಮಣ್ಣಲ್ಲಿ ಹೂತಿದ್ದರು. ಕೊಲೆ ಮಾಡಲು ಬಳಸಿದ ಬಡಗೆ, ಮೊಬೈಲ್ ಮತ್ತು ಸಲಕರಣೆಗಳನ್ನು ಹರಿಯುವ ನೀರಿನಲ್ಲಿ ಎಸೆದು ಸಾಕ್ಷಿ ಇಲ್ಲದ ಹಾಗೆ ಮಾಡಿದ್ದರು. ಆದರೆ ಕೊಲೆ ಮಾಡಲು ಬಳಸಿದ ಟಾಟಾಯೇಸ್‌ನ್ನು ಧಾರವಾಡದಲ್ಲಿ ಬಿಟ್ಟು ಬಂದಿದ್ದರು.

ಮಗ ಮನೆಗೆ ಬಾರದ ಕಾರಣ ತಾಯಿ ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಈ ತನಿಖೆ ಬೆನ್ನತ್ತಿದ ಪೊಲೀಸರಿಗೆ ಧಾರವಾಡದಲ್ಲಿರುವ ಅನುಮಾನಾಸ್ಪದ ಟಾಟಾಯೇಸ್ ದೊರೆತಿತ್ತು. ತನಿಖೆ ಮುಂದುವರಿಸಿದ ಪೊಲೀಸರು ಸಾಕ್ಷಿ ಸಮೇತ ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದರು.

life sentence for murder case culprits
ಜೀವಾವಧಿ ಶಿಕ್ಷೆ

ಆ.12 ರಂದು ಗುರುವಾರದಂದು 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನ್ಯಾಯಾಧೀಶರು ತೀರ್ಪು ನೀಡಿದ್ದು, ಬಂಧಿತ ಆರೋಪಿಗಳಾದ ರಾಘವೇಂದ್ರ ಮಾಳಗಿ ಮತ್ತು ಮಂಜುನಾಥ ಜೈ‌ನಗೌಡ್ರಗೆ ಕಲಂ 363, 302, 201ಅಡಿ ಜೀವಾವಧಿ ಶಿಕ್ಷೆ ಮತ್ತು ತಲಾ 60 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದ್ದಾರೆ.

ಕಲಂ 301 ಅಡಿ 5 ವರ್ಷ ಕಾರಾಗೃಹ ಶಿಕ್ಷೆ, ತಲಾ 5 ಸಾವಿರ ರೂ. ದಂಡ. ಕಲಂ 363 ಅಡಿ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಡ ವಿಧಿಸಿದೆ. ದಂಡದ ಮೊತ್ತ 1 ಲಕ್ಷ ರೂ. ಮೃತನ ತಾಯಿಗೆ ನೀಡಲು ನ್ಯಾಯಾಲಯ ಆದೇಶ ನೀಡಿದೆ. ಬೆಂಡಿಗೇರಿ ಇನ್ಸ್​​ಪೆಕ್ಟರ್​ ಟಿ.ಜಿ. ದೊಡ್ಡಮನಿ ಪ್ರಕರಣದ ತನಿಖೆ ಮಾಡಿದ್ದು, ಸರ್ಕಾರದ ಪರವಾಗಿ 1ನೇ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಲದ ಅಭಿಯೋಜಕಿ ಗಿರಿಜಾ ತಮ್ಮಿವಾಳ ವಾದ ಮಾಡಿದ್ದಾರೆ.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.