ETV Bharat / state

ಮಹದಾಯಿ ಮಾತುಕತೆಗೆ ಒಪ್ಪದ ಗೋವಾ ಸಿಎಂ: ಹುಬ್ಬಳ್ಳಿಯಲ್ಲಿ ಭುಗಿಲೆದ್ದ ಆಕ್ರೋಶ

author img

By

Published : Sep 14, 2019, 2:50 PM IST

Updated : Sep 14, 2019, 3:04 PM IST

ಮಹದಾಯಿ-ಕಳಸಾ ಬಂಡೂರಿ ವಿಚಾರವಾಗಿ ಸಭೆ ನಡೆಸಲು ತೀರ್ಮಾನಿಸಿದಾಗ ಸೌಹಾರ್ದಯುತ ಮಾತುಕತೆಗೆ ಒಪ್ಪಿದ ಗೋವಾ ಸಿಎಂ ವಿರುದ್ಧ ಖಂಡನೆ ವ್ಯಕ್ತವಾಗುತ್ತಿದೆ. ಕೂಡಲೇ ಒಕ್ಕೂಟ ವ್ಯವಸ್ಥೆಯ ವಿರುದ್ಧ ನಡೆದುಕೊಳ್ಳದ ಮುಖ್ಯಮಂತ್ರಿಗಳ ವಿರುದ್ದ ದೇಶದ ಪ್ರಧಾನಿ ಕ್ರಮ ಕೈಗೊಳ್ಳಬೇಕು ಎಂದು ಕಳಸಾ ಬಂಡೂರಿ ಹೋರಾಟಗಾರರು ಒತ್ತಾಯಿಸಿದ್ದಾರೆ.

ಪ್ರತಿಭಟನೆ

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ನೀರಿನ ವಿಚಾರವಾಗಿ ಗೋವಾ ಮುಖ್ಯಮಂತ್ರಿಯ ಧೋರಣೆ ಖಂಡಿಸಿ ಮಹದಾಯಿ-ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ತಮ್ಮ ಆಕ್ರೋಶ ಹೊರಹಾಕಿದರು. ಈ ವೇಳೆ, ಕಳಸಾ ಬಂಡೂರಿ ಹೋರಾಟಗಾರ ಅಮೃತ ಇಜಾರೆ ಮಾತನಾಡಿ, ಮಹದಾಯಿ ಕಳಸಾ ಬಂಡೂರಿ ವಿಚಾರವಾಗಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ‌ ಮುಖ್ಯಮಂತ್ರಿಗಳ ಸಭೆ ನಡೆಸಲು ತೀರ್ಮಾನಿಸಿದಾಗ ಸೌಹಾರ್ದಯುತ ಮಾತುಕತೆಗೆ ಒಪ್ಪಿದ ಗೋವಾ ಸಿಎಂ ನಡೆ ಖಂಡನೀಯ. ಕೂಡಲೇ ಒಕ್ಕೂಟ ವ್ಯವಸ್ಥೆಯ ವಿರುದ್ಧ ನಡೆದುಕೊಳ್ಳುವ ಮುಖ್ಯಮಂತ್ರಿಗಳ ವಿರುದ್ಧ ದೇಶದ ಪ್ರಧಾನಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಒಕ್ಕೂಟ ವ್ಯವಸ್ಥೆ ಉಳಿಯಲು ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಮಹದಾಯಿ ನದಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.

ಗೋವಾ ಸಿಎಂ ವಿರುದ್ಧ ಪ್ರತಿಭಟನೆ ನಡೆಸಿದ ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರು

ರಾಜ್ಯ ಸರ್ಕಾರ ಕಳಸಾ - ಬಂಡೂರಿ ನಾಲಾ ಯೋಜನೆಗೆ ಬಜೆಟ್​ನಲ್ಲಿ ಹಣವನ್ನಿಟ್ಟು ಕಳಸಾ ಬಂಡೂರಿ ನಾಲಾವನ್ನು ಅಭಿವೃದ್ಧಪಡಿಸಿ ರೈತರಿಗೆ ಸಹಾಯ ಮಾಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಮಹದಾಯಿ ಕಳಸಾ ಬಂಡೂರಿ ವಿಚಾರವಾಗಿ ಮಲತಾಯಿ ಧೋರಣೆಯನ್ನು ಮತ್ತೆ ಮುಂದುವರೆಸಿದರೆ ಮತ್ತೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು. ಅಲ್ಲದೇ, ಕೂಡಲೇ ಪ್ರಧಾನಿ ಮಹದಾಯಿ ವಿಚಾರವಾಗಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ನೂರಾರು ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

ಹುಬ್ಬಳ್ಳಿ: ಮಹದಾಯಿ, ಕಳಸಾ ಬಂಡೂರಿ ನೀರಿನ ವಿಚಾರವಾಗಿ ಗೋವಾ ಮುಖ್ಯಮಂತ್ರಿಯ ಧೋರಣೆ ಖಂಡಿಸಿ ಮಹದಾಯಿ-ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿತು.

ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು, ತಮ್ಮ ಆಕ್ರೋಶ ಹೊರಹಾಕಿದರು. ಈ ವೇಳೆ, ಕಳಸಾ ಬಂಡೂರಿ ಹೋರಾಟಗಾರ ಅಮೃತ ಇಜಾರೆ ಮಾತನಾಡಿ, ಮಹದಾಯಿ ಕಳಸಾ ಬಂಡೂರಿ ವಿಚಾರವಾಗಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ‌ ಮುಖ್ಯಮಂತ್ರಿಗಳ ಸಭೆ ನಡೆಸಲು ತೀರ್ಮಾನಿಸಿದಾಗ ಸೌಹಾರ್ದಯುತ ಮಾತುಕತೆಗೆ ಒಪ್ಪಿದ ಗೋವಾ ಸಿಎಂ ನಡೆ ಖಂಡನೀಯ. ಕೂಡಲೇ ಒಕ್ಕೂಟ ವ್ಯವಸ್ಥೆಯ ವಿರುದ್ಧ ನಡೆದುಕೊಳ್ಳುವ ಮುಖ್ಯಮಂತ್ರಿಗಳ ವಿರುದ್ಧ ದೇಶದ ಪ್ರಧಾನಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಒಕ್ಕೂಟ ವ್ಯವಸ್ಥೆ ಉಳಿಯಲು ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಮಹದಾಯಿ ನದಿ ಸಮಸ್ಯೆಯನ್ನು ಬಗೆಹರಿಸಬೇಕು ಎಂದರು.

ಗೋವಾ ಸಿಎಂ ವಿರುದ್ಧ ಪ್ರತಿಭಟನೆ ನಡೆಸಿದ ಮಹದಾಯಿ, ಕಳಸಾ ಬಂಡೂರಿ ಹೋರಾಟಗಾರರು

ರಾಜ್ಯ ಸರ್ಕಾರ ಕಳಸಾ - ಬಂಡೂರಿ ನಾಲಾ ಯೋಜನೆಗೆ ಬಜೆಟ್​ನಲ್ಲಿ ಹಣವನ್ನಿಟ್ಟು ಕಳಸಾ ಬಂಡೂರಿ ನಾಲಾವನ್ನು ಅಭಿವೃದ್ಧಪಡಿಸಿ ರೈತರಿಗೆ ಸಹಾಯ ಮಾಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಮಹದಾಯಿ ಕಳಸಾ ಬಂಡೂರಿ ವಿಚಾರವಾಗಿ ಮಲತಾಯಿ ಧೋರಣೆಯನ್ನು ಮತ್ತೆ ಮುಂದುವರೆಸಿದರೆ ಮತ್ತೆ ಹೋರಾಟ ತೀವ್ರಗೊಳಿಸಲಾಗುವುದು ಎಂದರು. ಅಲ್ಲದೇ, ಕೂಡಲೇ ಪ್ರಧಾನಿ ಮಹದಾಯಿ ವಿಚಾರವಾಗಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದ್ದಾರೆ.

ಪ್ರತಿಭಟನೆಯಲ್ಲಿ ನೂರಾರು ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿಯ ಸದಸ್ಯರು ಭಾಗವಹಿಸಿದ್ದರು.

Intro:ಹುಬ್ಬಳಿBody:ಗೋವಾ ಸಿಎಂ ಹೇಳಿಕೆ ಖಂಡಿಸಿ ಮಹದಾಯಿ ಕಳಸಾ ಬಂಡೂರಿ ಹೋರಾಟಗಾರರ ಪ್ರತಿಭಟನೆ

ಹುಬ್ಬಳ್ಳಿ:- ಮಹದಾಯಿ ಕಳಸಾ ಬಂಡೂರಿ ನೀರನ ವಿಚಾರವಾಗಿ ಗೋವಾ ಮುಖ್ಯಮಂತ್ರಿಯ ಧೋರಣೆಯನ್ನು ಖಂಡಿಸಿ ಮಹದಾಯಿ ಕಳಸಾ ಬಂಡೂರಿ ಹೋರಾಡ ಸಮನ್ವಯ ಸಮಿತಿ ನಗರದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಪ್ರತಿಭಟನೆ ನಡೆಸಿದ್ರು.
ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದ ಪ್ರತಿಭಟನಾಕಾರರು ತಮ್ಮ ಆಕ್ರೋಶ ಹೊರಹಾಕಿದರು ಈ ವೇಳೆ ಕಳಸಾ ಬಂಡೂರಿ ಹೋರಾಟಗಾರ ಅಮೃತ ಇಜಾರೆ ಮಾತನಾಡಿ, ಮಹದಾಯಿ ಕಳಸಾ ಬಂಡೂರಿ ವಿಚಾರವಾಗಿ ಕರ್ನಾಟಕ, ಮಹಾರಾಷ್ಟ್ರ, ಗೋವಾ ಮೂರು ರಾಜ್ಯಗಳ‌ ಮುಖ್ಯಮಂತ್ರಿಗಳ ಸಭೆ ನಡೆಸಲು ತಿರ್ಮಾಣಿಸಿದ್ದಾಗ ಸೌಹಾರ್ದಯುತ ಮಾತುಕತೆಗೆ ಒಪ್ಪಿದ ಗೋವಾ ಸಿಎಂ ನಂತರದಲ್ಲಿ ವಿರೋಧ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದು ಖಂಡನೀಯವಾಗಿದ್ದು, ಕೂಡಲೇ ಒಕ್ಕೂಟ ವ್ಯವಸ್ಥೆಯ ವಿರುದ್ದ ನಡೆದುಕೊಳ್ಳುವ ಮುಖ್ಯಮಂತ್ರಿಗಳ ವಿರುದ್ದ ದೇಶದ ಪ್ರಧಾನಿ ಕ್ರಮ ಕೈಗೊಳ್ಳಬೇಕು. ಅಲ್ಲದೇ ಒಕ್ಕೂಟ ವ್ಯವಸ್ಥೆ ಉಳಿಯಲು ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಮಹದಾಯಿ ನದಿ ಸಮಸ್ಯೆಯನ್ನು ಬಗೆಹರಿಸಬೇಕು. ರಾಜ್ಯ ಸರ್ಕಾರ ಕಳಸಾ - ಬಂಡೂರಿ ನಾಲಾ ಯೋಜನೆಗೆ ಬಜೆಟ್ ನಲ್ಲಿ ಹಣವನ್ನಿಟ್ಟು ಕಳಸಾ ಬಂಡೂರಿ ನಾಲಾವನ್ನು ಅಭಿವೃದ್ಧಿ ಪಡಿಸಿ ರೈತರಿಗೆ ಸಹಾಯ ಮಾಡಬೇಕು. ರಾಜ್ಯ ಮತ್ತು ಕೇಂದ್ರ ಸರ್ಕಾರ ಮಹದಾಯಿ ಕಳಸಾ ಬಂಡೂರಿ ವಿಚಾರವಾಗಿ ಮಲದಾಯಿದೋರಣೆಯನ್ನು ಮತ್ತೆ ಮುಂದುವರೆಸಿದರೆ ಇದೀಗ ಮತ್ತೆ ಆರಂಭವಾದ ನೀರಿನ ಹೋರಾಟ ಮುಂದಿನ‌ ದಿನಗಳಲ್ಲಿ ತೀವ್ರಗೊಳಿಸಲಾಗುವುದು ಕೂಡಲೇ ಪ್ರಧಾನಿ ಮಧ್ಯಸ್ಥಿಕೆ ವಹಿಸಿ ಸಮಸ್ಯೆ ಬಗೆಹರಿಸಬೇಕೆಂದು ಆಗ್ರಹಿಸಿದರು.ಪ್ರತಿಭಟನೆಯಲ್ಲಿ ನೂರಾರು ಮಹದಾಯಿ ಕಳಸಾ ಬಂಡೂರಿ ಹೋರಾಟ ಸಮನ್ವಯ ಸಮಿತಿಯ ಸದಸ್ಯರು ಇದ್ದರು.

__________________________

ಹುಬ್ಬಳ್ಳಿ: ಸ್ಟ್ರಿಂಜರ್

ಯಲ್ಲಪ್ ಕುಂದಗೋಳConclusion:ಯಲ್ಲಪ್ಲ ಕುಂದೊಳ
Last Updated : Sep 14, 2019, 3:04 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.