ETV Bharat / state

ಲಿಂಗಾಯತರ ಕಡೆಗಣನೆ ಪ್ರದೀಪ್ ಶೆಟ್ಟರ್ ಆರೋಪ: ಎಂದೂ ಇಲ್ಲದ ಜಾತಿ ಪ್ರೇಮ ಈಗ ಯಾಕೆ ಎಂದು ಮಹೇಶ ಟೆಂಗಿನಕಾಯಿ ಟಾಂಗ್

author img

By ETV Bharat Karnataka Team

Published : Sep 4, 2023, 5:19 PM IST

ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಬಸವರಾಜ ಕುಂದಗೋಳಮಠ ಹಾಗೂ ನನಗೂ ಬಹಳಷ್ಟು ಅನ್ಯಾಯವಾಗಿದೆ ಎಂದು ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದ್ದಾರೆ.

ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ
ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹಾಗೂ ಶಾಸಕ ಮಹೇಶ ಟೆಂಗಿನಕಾಯಿ
ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆಗೆ ಶಾಸಕ ಮಹೇಶ ಟೆಂಗಿನಕಾಯಿ ಟಾಂಗ್ ನೀಡಿದ್ದಾರೆ

ಹುಬ್ಬಳ್ಳಿ : ಬಿಜೆಪಿ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಅವರಿಗೂ ಪಕ್ಷದಿಂದ ಸಾಕಷ್ಟು ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಯಾರೋ ಬರೆದುಕೊಟ್ಟಿರುವ ಪತ್ರವನ್ನು ಬಹಿರಂಗಪಡಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಬಿಜೆಪಿ ಸಭೆಯ ಬಳಿಕ ಮಾತನಾಡಿದ ಅವರು, ನನಗೆ ಆಗಿರುವ ಅನ್ಯಾಯದ ಬಗ್ಗೆ ನಾನು ನಿನ್ನೆಯಷ್ಟೇ ಮಾತನಾಡಿದ್ದೇನೆ. ಅಲ್ಲದೇ ಈ ಬಗ್ಗೆ ಬಿಜೆಪಿ ವರಿಷ್ಠರು ನನ್ನ ಜೊತೆಗೆ ಮಾತನಾಡಿದ್ದಾರೆ. ಇನ್ನು ಮುಂದಿನ ದಿನಗಳಲ್ಲಾದರೂ ಇಂತಹ ವ್ಯವಸ್ಥೆ ಬದಲಾಗಬೇಕಿದೆ ಎಂದರು.

ಕುಂದಗೋಳಮಠ ಅವರಿಗೂ ಸಾಕಷ್ಟು ಅನ್ಯಾಯವಾಗಿದೆ. ಆದ್ದರಿಂದ ಸ್ವಂತ ಬುದ್ಧಿಯಿಂದ ಅವರು ಪತ್ರವನ್ನು ಬರೆದಿಲ್ಲ. ಯಾರೋ ಬರೆದು ಅವರಿಗೆ ಕೊಟ್ಟಿದ್ದಾರೆ‌. ಅವರು ಕೂಡ ನನ್ನ ಜೊತೆಗೆ ಮಾತನಾಡಿ, ತಮಗೆ ಆಗಿರುವ ಅನ್ಯಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು. ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಕುಂದಗೋಳಮಠ ಅವರಿಗೆ ಹಾಗೂ ನನಗೂ ಸಾಕಷ್ಟು ಅನ್ಯಾಯವಾಗಿದೆ. ಈ ಬಗ್ಗೆ ವರಿಷ್ಠರು ಗಮನ ಹರಿಸುವ ಮೂಲಕ ಲಿಂಗಾಯತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅವರು ಹೇಳಿದರು. ಬಿಜೆಪಿ ಮುಖಂಡರು ಲಿಂಗಾಯತ ನಾಯಕರನ್ನೇ ಟಾರ್ಗೆಟ್​​ ಮಾಡುತ್ತಿದ್ದಾರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರದೀಶ್ ಶೆಟ್ಟರ್, ಲಿಂಗಾಯತ ನಾಯಕರಿಗೆ ಆಗುತ್ತಿರುವ ಅನ್ಯಾಯದ ಕುರಿತು ಶೀಘ್ರವೇ ಬಹಿರಂಗಪಡಿಸಲಿದ್ದೇನೆ. ಇನ್ನು ಹದಿನೈದು ದಿನ ಕಾದು ನೋಡಿ. ಎಲ್ಲವೂ ಸರಿಹೋಗುತ್ತೆ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಆಂತರಿಕವಾಗಿ ಸಂಚಲನ ಮೂಡಿಸಿದ್ದಾರೆ.

ಲಿಂಗಾಯತ ನಾಯಕರ ಕಡೆಗಣನೆಗೆ ಪ್ರಮುಖ ಕಾರಣ ಯಾರು ಅನ್ನೋದನ್ನ ಸೀಕ್ರೆಟ್​​ ಆಗಿಟ್ಟ ಪ್ರದೀಪ್ ಶೆಟ್ಟರ್, ಹದಿನೈದು ದಿನಗಳ ನಂತರ ಪಕ್ಷದ ನಾಯಕರೇ ಇದನ್ನ ಸರಿಪಡಿಸುತ್ತಾರೆ. ಹಾಗೇನಾದರೂ ಸರಿಪಡಿಸದೇ ಹೋದಲ್ಲಿ 15 ದಿನಗಳ ನಂತರ ಕಾದು ನೋಡಿ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಎಂದೂ ಇಲ್ಲದ ಜಾತಿ ಪ್ರೇಮ ಈಗ ಯಾಕೆ- ಪ್ರದೀಪ್ ಶೆಟ್ಟರ್​ಗೆ ಟೆಂಗಿನಕಾಯಿ ಟಾಂಗ್: ಬಿಜೆಪಿ ಪಕ್ಷ ಯಾವುದೇ ಜಾತಿಯನ್ನು ಕಡೆಗಣಿಸಿಲ್ಲ. ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿರುವುದನ್ನು ನೋಡಿದರೆ ನಿಜಕ್ಕೂ ನನಗೆ ಮುಜುಗರ ಉಂಟಾಗುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಲಿಂಗಾಯತರಿಗೆ ಮಾತ್ರವಲ್ಲದೇ ಯಾವುದೇ ಜಾತಿ ಜನಾಂಗದವರನ್ನು ಬಿಜೆಪಿ ಕಡೆಗಣನೆ ಮಾಡಿಲ್ಲ. ಅಲ್ಲದೇ ಲಿಂಗಾಯತರನ್ನು ಕಡೆಗಣನೆ ಮಾಡಿದ್ದರೆ ಧಾರವಾಡ ಜಿಲ್ಲೆಯಲ್ಲಿಯೇ ಏಳು ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡಿದೆ ಎಂದರು.

ರಾಜ್ಯದ ಇತಿಹಾಸವನ್ನು ನೋಡುವುದಾದರೆ ಲಿಂಗಾಯತರೇ ಹೆಚ್ಚಿನ ಸಂಖ್ಯೆಯಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಅಲ್ಲದೆ ಯಾವುದೇ ರೀತಿಯಲ್ಲಿ ಕಡೆಗಣನೆ ಮಾಡಿಲ್ಲ ಎಂದು ಅವರು ಹೇಳಿದರು. ಬಕೆಟ್ ಹಿಡಿದವರಿಗೆ ಟಿಕೆಟ್ ನೀಡಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾಳೆ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವಿಷಯದ ಬಗ್ಗೆ ಸ್ಪಷ್ಟನೆ ನೀಡುತ್ತೇನೆ. ಅಲ್ಲದೇ ಇಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದೆ‌. ಸೂಕ್ತ ಸ್ಥಾನಮಾನವನ್ನು ಕೂಡ ನೀಡಿ ಗೌರವಯುತವಾಗಿ ನಡೆಸಿಕೊಂಡು ಬಂದಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಮತ್ತೆ ಶುರುವಾದ ಲಿಂಗಾಯತ ಅಸ್ತ್ರ: ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಎಂಎಲ್​ಸಿ ಪ್ರದೀಪ್ ಶೆಟ್ಟರ್

ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆಗೆ ಶಾಸಕ ಮಹೇಶ ಟೆಂಗಿನಕಾಯಿ ಟಾಂಗ್ ನೀಡಿದ್ದಾರೆ

ಹುಬ್ಬಳ್ಳಿ : ಬಿಜೆಪಿ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಅವರಿಗೂ ಪಕ್ಷದಿಂದ ಸಾಕಷ್ಟು ಅನ್ಯಾಯವಾಗಿದೆ. ಈ ನಿಟ್ಟಿನಲ್ಲಿ ಯಾರೋ ಬರೆದುಕೊಟ್ಟಿರುವ ಪತ್ರವನ್ನು ಬಹಿರಂಗಪಡಿಸಿದ್ದಾರೆ ಎಂದು ವಿಧಾನಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿದರು.

ನಗರದಲ್ಲಿಂದು ಬಿಜೆಪಿ ಸಭೆಯ ಬಳಿಕ ಮಾತನಾಡಿದ ಅವರು, ನನಗೆ ಆಗಿರುವ ಅನ್ಯಾಯದ ಬಗ್ಗೆ ನಾನು ನಿನ್ನೆಯಷ್ಟೇ ಮಾತನಾಡಿದ್ದೇನೆ. ಅಲ್ಲದೇ ಈ ಬಗ್ಗೆ ಬಿಜೆಪಿ ವರಿಷ್ಠರು ನನ್ನ ಜೊತೆಗೆ ಮಾತನಾಡಿದ್ದಾರೆ. ಇನ್ನು ಮುಂದಿನ ದಿನಗಳಲ್ಲಾದರೂ ಇಂತಹ ವ್ಯವಸ್ಥೆ ಬದಲಾಗಬೇಕಿದೆ ಎಂದರು.

ಕುಂದಗೋಳಮಠ ಅವರಿಗೂ ಸಾಕಷ್ಟು ಅನ್ಯಾಯವಾಗಿದೆ. ಆದ್ದರಿಂದ ಸ್ವಂತ ಬುದ್ಧಿಯಿಂದ ಅವರು ಪತ್ರವನ್ನು ಬರೆದಿಲ್ಲ. ಯಾರೋ ಬರೆದು ಅವರಿಗೆ ಕೊಟ್ಟಿದ್ದಾರೆ‌. ಅವರು ಕೂಡ ನನ್ನ ಜೊತೆಗೆ ಮಾತನಾಡಿ, ತಮಗೆ ಆಗಿರುವ ಅನ್ಯಾಯವನ್ನು ವ್ಯಕ್ತಪಡಿಸಿದ್ದಾರೆ ಎಂದು ಅವರು ಹೇಳಿದರು. ಕಲಘಟಗಿ ವಿಧಾನಸಭಾ ಕ್ಷೇತ್ರದಿಂದ ಕುಂದಗೋಳಮಠ ಅವರಿಗೆ ಹಾಗೂ ನನಗೂ ಸಾಕಷ್ಟು ಅನ್ಯಾಯವಾಗಿದೆ. ಈ ಬಗ್ಗೆ ವರಿಷ್ಠರು ಗಮನ ಹರಿಸುವ ಮೂಲಕ ಲಿಂಗಾಯತ ಸಮುದಾಯಕ್ಕೆ ಆಗುತ್ತಿರುವ ಅನ್ಯಾಯವನ್ನು ಗಂಭೀರವಾಗಿ ಪರಿಗಣಿಸಬೇಕಿದೆ ಎಂದು ಅವರು ಹೇಳಿದರು. ಬಿಜೆಪಿ ಮುಖಂಡರು ಲಿಂಗಾಯತ ನಾಯಕರನ್ನೇ ಟಾರ್ಗೆಟ್​​ ಮಾಡುತ್ತಿದ್ದಾರಾ? ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದ ಪ್ರದೀಶ್ ಶೆಟ್ಟರ್, ಲಿಂಗಾಯತ ನಾಯಕರಿಗೆ ಆಗುತ್ತಿರುವ ಅನ್ಯಾಯದ ಕುರಿತು ಶೀಘ್ರವೇ ಬಹಿರಂಗಪಡಿಸಲಿದ್ದೇನೆ. ಇನ್ನು ಹದಿನೈದು ದಿನ ಕಾದು ನೋಡಿ. ಎಲ್ಲವೂ ಸರಿಹೋಗುತ್ತೆ ಎಂದು ಹೇಳುವ ಮೂಲಕ ಬಿಜೆಪಿಯಲ್ಲಿ ಆಂತರಿಕವಾಗಿ ಸಂಚಲನ ಮೂಡಿಸಿದ್ದಾರೆ.

ಲಿಂಗಾಯತ ನಾಯಕರ ಕಡೆಗಣನೆಗೆ ಪ್ರಮುಖ ಕಾರಣ ಯಾರು ಅನ್ನೋದನ್ನ ಸೀಕ್ರೆಟ್​​ ಆಗಿಟ್ಟ ಪ್ರದೀಪ್ ಶೆಟ್ಟರ್, ಹದಿನೈದು ದಿನಗಳ ನಂತರ ಪಕ್ಷದ ನಾಯಕರೇ ಇದನ್ನ ಸರಿಪಡಿಸುತ್ತಾರೆ. ಹಾಗೇನಾದರೂ ಸರಿಪಡಿಸದೇ ಹೋದಲ್ಲಿ 15 ದಿನಗಳ ನಂತರ ಕಾದು ನೋಡಿ ಎಂದು ಹೇಳುವ ಮೂಲಕ ಕುತೂಹಲ ಮೂಡಿಸಿದ್ದಾರೆ.

ಎಂದೂ ಇಲ್ಲದ ಜಾತಿ ಪ್ರೇಮ ಈಗ ಯಾಕೆ- ಪ್ರದೀಪ್ ಶೆಟ್ಟರ್​ಗೆ ಟೆಂಗಿನಕಾಯಿ ಟಾಂಗ್: ಬಿಜೆಪಿ ಪಕ್ಷ ಯಾವುದೇ ಜಾತಿಯನ್ನು ಕಡೆಗಣಿಸಿಲ್ಲ. ಎಂದೂ ಇಲ್ಲದ ಜಾತಿ ಪ್ರೇಮ ಇಂದು ಉಕ್ಕಿ ಹರಿಯುತ್ತಿರುವುದನ್ನು ನೋಡಿದರೆ ನಿಜಕ್ಕೂ ನನಗೆ ಮುಜುಗರ ಉಂಟಾಗುತ್ತಿದೆ ಎಂದು ಶಾಸಕ ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ್ ಶೆಟ್ಟರ್ ಹೇಳಿಕೆಗೆ ಟಾಂಗ್ ಕೊಟ್ಟಿದ್ದಾರೆ.

ಲಿಂಗಾಯತರಿಗೆ ಮಾತ್ರವಲ್ಲದೇ ಯಾವುದೇ ಜಾತಿ ಜನಾಂಗದವರನ್ನು ಬಿಜೆಪಿ ಕಡೆಗಣನೆ ಮಾಡಿಲ್ಲ. ಅಲ್ಲದೇ ಲಿಂಗಾಯತರನ್ನು ಕಡೆಗಣನೆ ಮಾಡಿದ್ದರೆ ಧಾರವಾಡ ಜಿಲ್ಲೆಯಲ್ಲಿಯೇ ಏಳು ವಿಧಾನಸಭಾ ಕ್ಷೇತ್ರದಲ್ಲಿ ಲಿಂಗಾಯತರಿಗೆ ಟಿಕೆಟ್ ನೀಡಿದೆ ಎಂದರು.

ರಾಜ್ಯದ ಇತಿಹಾಸವನ್ನು ನೋಡುವುದಾದರೆ ಲಿಂಗಾಯತರೇ ಹೆಚ್ಚಿನ ಸಂಖ್ಯೆಯಲ್ಲಿ ಮುಖ್ಯಮಂತ್ರಿಯಾಗಿದ್ದಾರೆ. ಅಲ್ಲದೆ ಯಾವುದೇ ರೀತಿಯಲ್ಲಿ ಕಡೆಗಣನೆ ಮಾಡಿಲ್ಲ ಎಂದು ಅವರು ಹೇಳಿದರು. ಬಕೆಟ್ ಹಿಡಿದವರಿಗೆ ಟಿಕೆಟ್ ನೀಡಿಕೆಯ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ನಾಳೆ ಈ ಬಗ್ಗೆ ಪತ್ರಿಕಾಗೋಷ್ಠಿ ನಡೆಸಿ ಎಲ್ಲ ವಿಷಯದ ಬಗ್ಗೆ ಸ್ಪಷ್ಟನೆ ನೀಡುತ್ತೇನೆ. ಅಲ್ಲದೇ ಇಲ್ಲಿ ನಿಷ್ಠಾವಂತ ಕಾರ್ಯಕರ್ತರಿಗೆ ಟಿಕೆಟ್ ನೀಡಿದೆ‌. ಸೂಕ್ತ ಸ್ಥಾನಮಾನವನ್ನು ಕೂಡ ನೀಡಿ ಗೌರವಯುತವಾಗಿ ನಡೆಸಿಕೊಂಡು ಬಂದಿದೆ ಎಂದು ಅವರು ಹೇಳಿದರು.

ಇದನ್ನೂ ಓದಿ: ರಾಜ್ಯ ಬಿಜೆಪಿಯಲ್ಲಿ ಮತ್ತೆ ಶುರುವಾದ ಲಿಂಗಾಯತ ಅಸ್ತ್ರ: ಬಹಿರಂಗವಾಗಿ ಅಸಮಾಧಾನ ಹೊರಹಾಕಿದ ಎಂಎಲ್​ಸಿ ಪ್ರದೀಪ್ ಶೆಟ್ಟರ್

ETV Bharat Logo

Copyright © 2024 Ushodaya Enterprises Pvt. Ltd., All Rights Reserved.