ಹುಬ್ಬಳ್ಳಿ: ದ್ವಿಚಕ್ರ ವಾಹನಕ್ಕೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತ ಪಟ್ಟಿರುವ ಘಟನೆ ಕಲಘಟಗಿಯ ನೀರಸಾಗರ ಕ್ರಾಸ್ ಬಳಿ ನಡೆದಿದೆ.
ಹನುಮಂತಪ್ಪ ಬಸವಂತಪ್ಪ ಸಾವಂತನವರ(47) ಅಪಘಾತದಲ್ಲಿ ಮೃತಪಟ್ಟ ದುರ್ದೈವಿ. ಟಿಪ್ಪರ್ ಲಾರಿಯೊಂದು ಕಲ್ಲು ತುಂಬಿಕೊಂಡು ಧಾರವಾಡ ಕಡೆಯಿಂದ ಕಲಘಟಗಿ ಹೊರಟಿದ್ದು, ಬೈಕ್ಗೆ ಡಿಕ್ಕಿ ಹೊಡೆದಿದೆ. ಅಪಘಾತ ನಂತರ ಟಿಪ್ಪರ್ ಲಾರಿ ಚಾಲಕ ಪರಾರಿಯಾಗಿದ್ದಾರೆ.
ಗಾಯಾಳು ಹನುಮಂತಪ್ಪ ಬಸವಂತಪ್ಪ ಸಾವಂತನವರ ಅವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದು, ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.