ETV Bharat / state

ಧಾರವಾಡದಲ್ಲಿ ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್ ವಿತರಣೆ

author img

By

Published : Jan 21, 2022, 10:38 PM IST

ಹೋಮ್ ಐಸೋಲೇಷನ್‍ದಲ್ಲಿರುವ ಕೋವಿಡ್​ ಸೋಂಕಿತರಿಗೆ ಧಾರವಾಡಲ್ಲಿ ಮನೆ ಬಾಗಿಲಿಗೆ ಹೋಗಿ ಔಷಧಿ ಕಿಟ್ ವಿತರಣೆ ಮಾಡುತ್ತಿದೆ. ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಈ ಹೊಸ ಕ್ರಮ ಕೈಗೊಂಡಿವೆ..

Medicine kit distribution to covid patients in Dharwad
ಧಾರವಾಡದಲ್ಲಿ ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್ ವಿತರಣೆ

ಧಾರವಾಡ : ಹೋಮ್ ಐಸೋಲೇಷನ್‍ದಲ್ಲಿರುವ ಸೋಂಕಿತರು ಮಾರ್ಗಸೂಚಿಗಳ ಪಾಲನೆಯೊಂದಿಗೆ ರೋಗದಿಂದ ಗುಣಮುಖರಾಗಲು ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಹೊಸ ಕ್ರಮಕೈಗೊಂಡಿದೆ. ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್ ವಿತರಣೆ ಮಾಡುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದು ಉತ್ತಮ ರೀತಿಯಿಂದ ಅನುಷ್ಠಾನವಾಗುತ್ತಿದೆ.

ಮನೆ ಬಾಗಿಲಿಗೆ ಏಕೆ ವಿತರಣೆ : ಕೋವಿಡ್ ಸೋಂಕಿತ ವ್ಯಕ್ತಿ ಸಾರ್ವಜನಿಕವಾಗಿ ಸಂಚರಿಸುವುದರಿಂದ ರೋಗ ಇತರರಿಗೂ ಬೇಗ ಹರಡುತ್ತದೆ. ಹಾಗಾಗಿ, ಸೋಂಕಿತ ವ್ಯಕ್ತಿಯು ಸಾರ್ವಜನಿಕವಾಗಿ, ಅನಗತ್ಯವಾಗಿ ಸಂಚರಿಸುವುದನ್ನು ನಿಯಂತ್ರಿಸಲು ಚಿಕಿತ್ಸೆ, ಔಷಧಿ ಹಾಗೂ ಆಸ್ಪತ್ರೆಗಳಿಗೆ ಅಲೆಯದಂತೆ ಮಾಡಲು ಔಷಧಿ ಕಿಟ್‍ಗಳನ್ನು ಸೋಂಕಿತರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಸೋಂಕಿತನ ಕುಟುಂಬವನ್ನು ಜಾಗೃತಗೊಳಿಸಲಾಗುತ್ತದೆ.

ಔಷಧಿ ಕಿಟ್ ಹೇಗೆ ಪಡೆಯುವುದು : ಮಹಾನಗರ ಪಾಲಿಕೆಯಲ್ಲಿ ಕೋವಿಡ್ ಸೋಂಕಿತರಿಗೆ ಔಷಧಿ ವಿತರಣೆಗಾಗಿ ಸಹಾಯವಾಣಿ ಆರಂಭಿಸಲಾಗಿದೆ. ದಿನದ 24 ಗಂಟೆಯೂ ಮೂರು ಶಿಫ್ಟ್ ಮೇಲೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಹಾನಗರದ ಯಾವುದೇ ಭಾಗದಿಂದ ಕೋವಿಡ್ ಸೋಂಕಿತರು ಔಷಧಿ ಕಿಟ್ ಕೇಳಿ ಕರೆ ಮಾಡಿದರೆ, ತಕ್ಷಣ ಸಂಬಂಧಿತ ವಲಯ ಕಚೇರಿ ಮೂಲಕ ಆಯಾ ವಾರ್ಡ್‍ನಲ್ಲಿರುವ ಸೋಂಕಿತರ ಮನೆ ಬಾಗಿಲಿಗೆ ಔಷಧಿ ತಲುಪಿಸಲಾಗುತ್ತಿದೆ. ರಾತ್ರಿಯೂ ಸಹ ಈ ಸೇವೆ ಲಭ್ಯವಿದೆ. ಗ್ರಾಮೀಣ ಪ್ರದೇಶದಲ್ಲಿ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕಾ ಆಸ್ಪತ್ರೆಗಳಿಂದ ಔಷಧಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

ಔಷಧಿ ಕಿಟ್ ವಿತರಕರು : ಔಷಧಿ ಕಿಟ್ ವಿತರಣೆಗಾಗಿ ಸುಮಾರು 30ಕ್ಕೂ ಹೆಚ್ಚು ವಾಹನಗಳನ್ನು ಸಿದ್ಧಗೊಳಿಸಲಾಗಿದೆ. ಪಾಲಿಕೆಯ ಪ್ರತಿ ವಲಯಕ್ಕೆ 2 ರಿಂದ 3 ವಾಹನ ನೀಡಲಾಗಿದೆ. ಪ್ರತಿ ತಂಡದಲ್ಲಿ ಹೆಲ್ತ್ ಇನ್ಸ್​ಪೆಕ್ಟರ್, ಬಿಲ್ ಕಲೆಕ್ಟರ್ ಮತ್ತು ಅಗತ್ಯವಿದ್ದಲ್ಲಿ ಆರೋಗ್ಯ ಸಿಬ್ಬಂದಿ ಇರುತ್ತಾರೆ. ಸೋಂಕು ದೃಢಪಟ್ಟ ವ್ಯಕ್ತಿಗೆ ಮತ್ತು ಕರೆ ಮಾಡಿದ ಸೋಂಕಿತರ ಮನೆಗೆ ತಂಡವು ಭೇಟಿ ನೀಡಿ, ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳ ಕಿಟ್ ನೀಡಿ, ಸೋಂಕಿತನ ಆರೋಗ್ಯ ವಿಚಾರಿಸುತ್ತದೆ. ಹೋಮ್ ಐಸೋಲೇಷನ್ ಮಾರ್ಗಸೂಚಿಗಳನ್ನು ವಿವರಿಸಿ ಆಪ್ತ ಸಮಾಲೋಚನೆ ಮೂಲಕ ಧೈರ್ಯ, ಆತ್ಮವಿಶ್ವಾಸ ಮೂಡಿಸುತ್ತದೆ.

ಸೋಂಕಿತ ಮಕ್ಕಳಿಗಾಗಿ ವಿಶೇಷ ತಂಡ : ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸುತ್ತಿದ್ದು, ಜಿಲ್ಲೆಯ ಹಲವಾರು ಮಕ್ಕಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿತ ಮಕ್ಕಳಿಗೆ ಅಗತ್ಯ ಚಿಕಿತ್ಸೆ, ಔಷಧಿ ನೀಡಿ ಅವರನ್ನು ಗುಣಮುಖರನ್ನಾಗಿ ಮಾಡಲಾಗಿದೆ. ಕೋವಿಡ್ ಸೋಂಕು ದೃಢಪಟ್ಟ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಲು ಮಕ್ಕಳ ಡಾಕ್ಟರ್​​​ಗಳ ಏಳು ವಿಶೇಷ ತಂಡಗಳನ್ನು ರಚಿಸಲಾಗಿದೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ನೇಮಕಗೊಂಡಿರುವ ವೈದ್ಯರು ಈ ವಿಶೇಷ ತಂಡದಲ್ಲಿದ್ದು, ಅವರು ಮಕ್ಕಳಿಗೆ ಆಪ್ತ ಸಮಾಲೋಚನೆ ಮಾಡಿ ನಿಯಮಿತ ಆಹಾರ, ಔಷಧಿ ಪ್ರಮಾಣ, ವ್ಯಾಯಾಮ ಕುರಿತು ತಿಳುವಳಿಕೆ ನೀಡುತ್ತಾರೆ.

ಇದುವರೆಗೆ 7730 ಔಷಧಿ ಕಿಟ್ ವಿತರಣೆ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುಮಾರು 7730 ಔಷಧಿ ಕಿಟ್‍ಗಳನ್ನು ವಿತರಿಸಲಾಗಿದ್ದು, ಇದರಲ್ಲಿ ಧಾರವಾಡ ತಾಲೂಕಿನಲ್ಲಿ- 910, ಕುಂದಗೋಳ ತಾಲೂಕಿನಲ್ಲಿ- 700, ಕಲಘಟಗಿ ತಾಲೂಕಿನಲ್ಲಿ- 100, ನವಲಗುಂದ ತಾಲೂಕಿನಲ್ಲಿ- 650, ಚಿಟಗುಪ್ಪಿ ಆಸ್ಪತ್ರೆ 100 ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 4970 ಔಷಧಿ ಕಿಟ್‍ಗಳನ್ನು ವಿತರಿಸಲಾಗಿದೆ. ನಿನ್ನೆ (ಜ.20) ದಿನ 1600 ಮತ್ತು ಇಂದು (ಜ.21) 3150 ಔಷಧಿ ಕಿಟ್‍ಗಳನ್ನು ಪಾಲಿಕೆ ವ್ಯಾಪ್ತಿಯ ಸೋಂಕಿತರ ಮನೆ ಬಾಗಿಲಿಗೆ ತಲುಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​​ ತಿಳಿಸಿದ್ದಾರೆ.

ಜಿಲ್ಲಾಡಳಿತ ಹೋಮ್ ಐಸೋಲೇಷನ್ ಆಗುವವರಿಗೆ ಔಷಧಿ ಕಿಟ್ ತಲುಪಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಅಗತ್ಯವಾಗಬಹುದಾದ ಔಷಧಿಗಳ ದಾಸ್ತಾನು ಸಹ ಹೊಂದಿದ್ದು, ಎಲ್ಲಾ ಪಿಎಚ್‍ಸಿ ತಾಲೂಕಾ ಅಸ್ಪತ್ರೆಗಳಿಗೆ ಮತ್ತು ಜಿಲ್ಲಾಸ್ಪತ್ರೆಗೆ ಈಗಾಗಲೇ ಔಷಧಿಗಳನ್ನು ವಿತರಿಸಿ ಸ್ಟಾಕ್ ಹೊಂದಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು, ಸೋಂಕಿತರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಆಯುಕ್ತರ ಮನವಿ : ಮಹಾನಗರ ವ್ಯಾಪ್ತಿಯಲ್ಲಿ ಸೋಂಕು ನಿಯಂತ್ರಣಕ್ಕೆ ಮೊದಲು ಸೋಂಕಿತರ ಸಹಕಾರ ಬೇಕು. ಸೋಂಕಿತರ ಮನೆ ಬಾಗಿಲಿಗೆ ಔಷಧಿ ತಲುಪಿಸಿ, ಆರೋಗ್ಯ ಸೇವೆ ನೀಡುತ್ತಿದ್ದೇವೆ. ಪಾಲಿಕೆಯ ಸಹಾಯವಾಣಿಗೆ ಕರೆ ಮಾಡಿ ಸೋಂಕಿತರು ಔಷಧಿ, ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್​ಗೆ ದಾಖಲಾಗುವ ಬಗ್ಗೆ ಕೇಳಿದಲ್ಲಿ ತಕ್ಷಣ ಅಗತ್ಯವಿರುವ ಸೇವೆ ನೀಡಲು ಪಾಲಿಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಸೋಂಕಿತರಿಗೆ ಔಷಧಿ ಕಿಟ್ ಪಡೆಯಲು ಸಹಾಯವಾಣಿ : ಮಹಾನಗರ ಪಾಲಿಕೆಯಲ್ಲಿ ತೆರೆಯಲಾದ ಸಹಾಯವಾಣಿ ಸಂಖ್ಯೆ : 0836-2213803 ಹಾಗೂ 08362213806 ಮತ್ತು ಮೊಬೈಲ್ ಸಂಖ್ಯೆ: 9141051611 ಗೆ ಕರೆ ಮಾಡಿ ಔಷಧಿ ಕಿಟ್ ಅಗತ್ಯವಿರುವ ಕುರಿತು ತಿಳಿಸಬಹುದು. ದಿನದ 24 ಗಂಟೆ ಇದು ಕಾರ್ಯನಿರ್ವಹಿಸುತ್ತದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ಧಾರವಾಡ : ಹೋಮ್ ಐಸೋಲೇಷನ್‍ದಲ್ಲಿರುವ ಸೋಂಕಿತರು ಮಾರ್ಗಸೂಚಿಗಳ ಪಾಲನೆಯೊಂದಿಗೆ ರೋಗದಿಂದ ಗುಣಮುಖರಾಗಲು ಜಿಲ್ಲಾಡಳಿತ ಮತ್ತು ಮಹಾನಗರಪಾಲಿಕೆ ಹೊಸ ಕ್ರಮಕೈಗೊಂಡಿದೆ. ಸೋಂಕಿತರ ಮನೆ ಬಾಗಿಲಿಗೆ ಔಷಧಿ ಕಿಟ್ ವಿತರಣೆ ಮಾಡುತ್ತಿದೆ. ಕಳೆದ ಮೂರ್ನಾಲ್ಕು ದಿನಗಳಿಂದ ಇದು ಉತ್ತಮ ರೀತಿಯಿಂದ ಅನುಷ್ಠಾನವಾಗುತ್ತಿದೆ.

ಮನೆ ಬಾಗಿಲಿಗೆ ಏಕೆ ವಿತರಣೆ : ಕೋವಿಡ್ ಸೋಂಕಿತ ವ್ಯಕ್ತಿ ಸಾರ್ವಜನಿಕವಾಗಿ ಸಂಚರಿಸುವುದರಿಂದ ರೋಗ ಇತರರಿಗೂ ಬೇಗ ಹರಡುತ್ತದೆ. ಹಾಗಾಗಿ, ಸೋಂಕಿತ ವ್ಯಕ್ತಿಯು ಸಾರ್ವಜನಿಕವಾಗಿ, ಅನಗತ್ಯವಾಗಿ ಸಂಚರಿಸುವುದನ್ನು ನಿಯಂತ್ರಿಸಲು ಚಿಕಿತ್ಸೆ, ಔಷಧಿ ಹಾಗೂ ಆಸ್ಪತ್ರೆಗಳಿಗೆ ಅಲೆಯದಂತೆ ಮಾಡಲು ಔಷಧಿ ಕಿಟ್‍ಗಳನ್ನು ಸೋಂಕಿತರ ಮನೆ ಬಾಗಿಲಿಗೆ ತಲುಪಿಸುವ ಮೂಲಕ ಸೋಂಕಿತನ ಕುಟುಂಬವನ್ನು ಜಾಗೃತಗೊಳಿಸಲಾಗುತ್ತದೆ.

ಔಷಧಿ ಕಿಟ್ ಹೇಗೆ ಪಡೆಯುವುದು : ಮಹಾನಗರ ಪಾಲಿಕೆಯಲ್ಲಿ ಕೋವಿಡ್ ಸೋಂಕಿತರಿಗೆ ಔಷಧಿ ವಿತರಣೆಗಾಗಿ ಸಹಾಯವಾಣಿ ಆರಂಭಿಸಲಾಗಿದೆ. ದಿನದ 24 ಗಂಟೆಯೂ ಮೂರು ಶಿಫ್ಟ್ ಮೇಲೆ ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಮಹಾನಗರದ ಯಾವುದೇ ಭಾಗದಿಂದ ಕೋವಿಡ್ ಸೋಂಕಿತರು ಔಷಧಿ ಕಿಟ್ ಕೇಳಿ ಕರೆ ಮಾಡಿದರೆ, ತಕ್ಷಣ ಸಂಬಂಧಿತ ವಲಯ ಕಚೇರಿ ಮೂಲಕ ಆಯಾ ವಾರ್ಡ್‍ನಲ್ಲಿರುವ ಸೋಂಕಿತರ ಮನೆ ಬಾಗಿಲಿಗೆ ಔಷಧಿ ತಲುಪಿಸಲಾಗುತ್ತಿದೆ. ರಾತ್ರಿಯೂ ಸಹ ಈ ಸೇವೆ ಲಭ್ಯವಿದೆ. ಗ್ರಾಮೀಣ ಪ್ರದೇಶದಲ್ಲಿ ಆಯಾ ಪ್ರಾಥಮಿಕ ಆರೋಗ್ಯ ಕೇಂದ್ರ ಹಾಗೂ ತಾಲೂಕಾ ಆಸ್ಪತ್ರೆಗಳಿಂದ ಔಷಧಿ ತಲುಪಿಸುವ ವ್ಯವಸ್ಥೆ ಮಾಡಲಾಗಿದೆ.

ಔಷಧಿ ಕಿಟ್ ವಿತರಕರು : ಔಷಧಿ ಕಿಟ್ ವಿತರಣೆಗಾಗಿ ಸುಮಾರು 30ಕ್ಕೂ ಹೆಚ್ಚು ವಾಹನಗಳನ್ನು ಸಿದ್ಧಗೊಳಿಸಲಾಗಿದೆ. ಪಾಲಿಕೆಯ ಪ್ರತಿ ವಲಯಕ್ಕೆ 2 ರಿಂದ 3 ವಾಹನ ನೀಡಲಾಗಿದೆ. ಪ್ರತಿ ತಂಡದಲ್ಲಿ ಹೆಲ್ತ್ ಇನ್ಸ್​ಪೆಕ್ಟರ್, ಬಿಲ್ ಕಲೆಕ್ಟರ್ ಮತ್ತು ಅಗತ್ಯವಿದ್ದಲ್ಲಿ ಆರೋಗ್ಯ ಸಿಬ್ಬಂದಿ ಇರುತ್ತಾರೆ. ಸೋಂಕು ದೃಢಪಟ್ಟ ವ್ಯಕ್ತಿಗೆ ಮತ್ತು ಕರೆ ಮಾಡಿದ ಸೋಂಕಿತರ ಮನೆಗೆ ತಂಡವು ಭೇಟಿ ನೀಡಿ, ಚಿಕಿತ್ಸೆಗೆ ಅಗತ್ಯವಿರುವ ಔಷಧಿಗಳ ಕಿಟ್ ನೀಡಿ, ಸೋಂಕಿತನ ಆರೋಗ್ಯ ವಿಚಾರಿಸುತ್ತದೆ. ಹೋಮ್ ಐಸೋಲೇಷನ್ ಮಾರ್ಗಸೂಚಿಗಳನ್ನು ವಿವರಿಸಿ ಆಪ್ತ ಸಮಾಲೋಚನೆ ಮೂಲಕ ಧೈರ್ಯ, ಆತ್ಮವಿಶ್ವಾಸ ಮೂಡಿಸುತ್ತದೆ.

ಸೋಂಕಿತ ಮಕ್ಕಳಿಗಾಗಿ ವಿಶೇಷ ತಂಡ : ಕೋವಿಡ್ 3ನೇ ಅಲೆಯು ಮಕ್ಕಳನ್ನು ಬಾಧಿಸುತ್ತಿದ್ದು, ಜಿಲ್ಲೆಯ ಹಲವಾರು ಮಕ್ಕಳಲ್ಲಿ ಕೋವಿಡ್ ಸೋಂಕು ದೃಢಪಟ್ಟಿದೆ. ಸೋಂಕಿತ ಮಕ್ಕಳಿಗೆ ಅಗತ್ಯ ಚಿಕಿತ್ಸೆ, ಔಷಧಿ ನೀಡಿ ಅವರನ್ನು ಗುಣಮುಖರನ್ನಾಗಿ ಮಾಡಲಾಗಿದೆ. ಕೋವಿಡ್ ಸೋಂಕು ದೃಢಪಟ್ಟ ಮಕ್ಕಳಿಗೆ ವಿಶೇಷ ಕಾಳಜಿ ವಹಿಸಲು ಮಕ್ಕಳ ಡಾಕ್ಟರ್​​​ಗಳ ಏಳು ವಿಶೇಷ ತಂಡಗಳನ್ನು ರಚಿಸಲಾಗಿದೆ. ರಾಷ್ಟ್ರೀಯ ಬಾಲ ಸ್ವಾಸ್ಥ್ಯ ಕಾರ್ಯಕ್ರಮದಡಿ ನೇಮಕಗೊಂಡಿರುವ ವೈದ್ಯರು ಈ ವಿಶೇಷ ತಂಡದಲ್ಲಿದ್ದು, ಅವರು ಮಕ್ಕಳಿಗೆ ಆಪ್ತ ಸಮಾಲೋಚನೆ ಮಾಡಿ ನಿಯಮಿತ ಆಹಾರ, ಔಷಧಿ ಪ್ರಮಾಣ, ವ್ಯಾಯಾಮ ಕುರಿತು ತಿಳುವಳಿಕೆ ನೀಡುತ್ತಾರೆ.

ಇದುವರೆಗೆ 7730 ಔಷಧಿ ಕಿಟ್ ವಿತರಣೆ : ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಸುಮಾರು 7730 ಔಷಧಿ ಕಿಟ್‍ಗಳನ್ನು ವಿತರಿಸಲಾಗಿದ್ದು, ಇದರಲ್ಲಿ ಧಾರವಾಡ ತಾಲೂಕಿನಲ್ಲಿ- 910, ಕುಂದಗೋಳ ತಾಲೂಕಿನಲ್ಲಿ- 700, ಕಲಘಟಗಿ ತಾಲೂಕಿನಲ್ಲಿ- 100, ನವಲಗುಂದ ತಾಲೂಕಿನಲ್ಲಿ- 650, ಚಿಟಗುಪ್ಪಿ ಆಸ್ಪತ್ರೆ 100 ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಗೆ 4970 ಔಷಧಿ ಕಿಟ್‍ಗಳನ್ನು ವಿತರಿಸಲಾಗಿದೆ. ನಿನ್ನೆ (ಜ.20) ದಿನ 1600 ಮತ್ತು ಇಂದು (ಜ.21) 3150 ಔಷಧಿ ಕಿಟ್‍ಗಳನ್ನು ಪಾಲಿಕೆ ವ್ಯಾಪ್ತಿಯ ಸೋಂಕಿತರ ಮನೆ ಬಾಗಿಲಿಗೆ ತಲುಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ನಿತೇಶ್ ಪಾಟೀಲ್​​ ತಿಳಿಸಿದ್ದಾರೆ.

ಜಿಲ್ಲಾಡಳಿತ ಹೋಮ್ ಐಸೋಲೇಷನ್ ಆಗುವವರಿಗೆ ಔಷಧಿ ಕಿಟ್ ತಲುಪಿಸಲು ಅಗತ್ಯ ಸಿದ್ಧತೆ ಮಾಡಿಕೊಂಡಿದೆ. ಅಗತ್ಯವಾಗಬಹುದಾದ ಔಷಧಿಗಳ ದಾಸ್ತಾನು ಸಹ ಹೊಂದಿದ್ದು, ಎಲ್ಲಾ ಪಿಎಚ್‍ಸಿ ತಾಲೂಕಾ ಅಸ್ಪತ್ರೆಗಳಿಗೆ ಮತ್ತು ಜಿಲ್ಲಾಸ್ಪತ್ರೆಗೆ ಈಗಾಗಲೇ ಔಷಧಿಗಳನ್ನು ವಿತರಿಸಿ ಸ್ಟಾಕ್ ಹೊಂದಿಸಲಾಗಿದೆ. ಜಿಲ್ಲೆಯಲ್ಲಿ ಸೋಂಕು ನಿಯಂತ್ರಣಕ್ಕೆ ಜಿಲ್ಲಾಡಳಿತ ಅಗತ್ಯ ಕ್ರಮ ಕೈಗೊಂಡಿದ್ದು, ಸಾರ್ವಜನಿಕರು, ಸೋಂಕಿತರು ಕೋವಿಡ್ ಮಾರ್ಗಸೂಚಿಗಳನ್ನು ಪಾಲಿಸುವ ಮೂಲಕ ಸಹಕಾರ ನೀಡಬೇಕೆಂದು ಜಿಲ್ಲಾಧಿಕಾರಿಗಳು ಮನವಿ ಮಾಡಿದ್ದಾರೆ.

ಆಯುಕ್ತರ ಮನವಿ : ಮಹಾನಗರ ವ್ಯಾಪ್ತಿಯಲ್ಲಿ ಸೋಂಕು ನಿಯಂತ್ರಣಕ್ಕೆ ಮೊದಲು ಸೋಂಕಿತರ ಸಹಕಾರ ಬೇಕು. ಸೋಂಕಿತರ ಮನೆ ಬಾಗಿಲಿಗೆ ಔಷಧಿ ತಲುಪಿಸಿ, ಆರೋಗ್ಯ ಸೇವೆ ನೀಡುತ್ತಿದ್ದೇವೆ. ಪಾಲಿಕೆಯ ಸಹಾಯವಾಣಿಗೆ ಕರೆ ಮಾಡಿ ಸೋಂಕಿತರು ಔಷಧಿ, ಆಸ್ಪತ್ರೆ ಅಥವಾ ಕೋವಿಡ್ ಕೇರ್ ಸೆಂಟರ್​ಗೆ ದಾಖಲಾಗುವ ಬಗ್ಗೆ ಕೇಳಿದಲ್ಲಿ ತಕ್ಷಣ ಅಗತ್ಯವಿರುವ ಸೇವೆ ನೀಡಲು ಪಾಲಿಕೆ ಸಕಲ ಸಿದ್ಧತೆ ಮಾಡಿಕೊಂಡಿದೆ.

ಸೋಂಕಿತರಿಗೆ ಔಷಧಿ ಕಿಟ್ ಪಡೆಯಲು ಸಹಾಯವಾಣಿ : ಮಹಾನಗರ ಪಾಲಿಕೆಯಲ್ಲಿ ತೆರೆಯಲಾದ ಸಹಾಯವಾಣಿ ಸಂಖ್ಯೆ : 0836-2213803 ಹಾಗೂ 08362213806 ಮತ್ತು ಮೊಬೈಲ್ ಸಂಖ್ಯೆ: 9141051611 ಗೆ ಕರೆ ಮಾಡಿ ಔಷಧಿ ಕಿಟ್ ಅಗತ್ಯವಿರುವ ಕುರಿತು ತಿಳಿಸಬಹುದು. ದಿನದ 24 ಗಂಟೆ ಇದು ಕಾರ್ಯನಿರ್ವಹಿಸುತ್ತದೆ ಎಂದು ಮಹಾನಗರ ಪಾಲಿಕೆಯ ಆಯುಕ್ತರು ತಿಳಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

For All Latest Updates

TAGGED:

ETV Bharat Logo

Copyright © 2024 Ushodaya Enterprises Pvt. Ltd., All Rights Reserved.