ETV Bharat / state

ಮಹಾದಾಯಿ ಗೆಜೆಟ್ ಅಧಿಸೂಚನೆ: ಪ್ರಧಾನಿಗೆ ಧನ್ಯವಾದ ತಿಳಿಸಿದ ಜಗದೀಶ್ ಶೆಟ್ಟರ್​

author img

By

Published : Feb 28, 2020, 1:59 PM IST

ಎರಡು ದಿನದ ಹಿಂದೆ ರಾಜ್ಯ ಹಾಗೂ ಕೇಂದ್ರ ಸಚಿವರು ಕೂಡಿಕೊಂಡು ಕೇಂದ್ರ ನೀರಾವರಿ ಸಚಿವ ಗಜೇಂದ್ರ ಶೇಕಾವತ್ ಅವರನ್ನು ಭೇಟಿಯಾಗಿ ಮಾತನಾಡಿದ್ದೆವು. ಅವರೂ ಕೂಡ ನಮಗೆ ಭರವಸೆ ನೀಡಿದ್ದರು. ಆ ಭರವಸೆಯಂತೆ ಒಂದೇ ದಿನದಲ್ಲಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ಸಂತಸ ತಂದಿದೆ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದರು.

Minister Jagdish Shettar Reaction on Mahadayi Gazette Notification
ಮಹದಾಯಿ ಗೆಜೆಟ್ ನೋಟಿಫಿಕೇಶನ್

ಹುಬ್ಬಳ್ಳಿ: ಮಹಾದಾಯಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ಸ್ವಾಗತಾರ್ಹ. ಉತ್ತರ ಕರ್ನಾಟಕದ ಜನತೆಗೆ ಮಾತ್ರವಲ್ಲದೆ ರಾಜ್ಯದ ಜನತೆಗೆ ಇದು ಖುಷಿಯ ಕ್ಷಣ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದರು.

ಮಹಾದಾಯಿ ಯೋಜನೆಯ ಕುರಿತು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ಕುರಿತು ಮಾಧ್ಯಮದ ಜೊತೆ ಮಾತನಾಡಿ, ಸುಮಾರು ದಿನಗಳ ಹೋರಾಟಕ್ಕೆ ಸಿಕ್ಕ ಜಯ ಇದಾಗಿದೆ. ಎರಡು ದಿನದ ಹಿಂದೆ ರಾಜ್ಯ ಹಾಗೂ ಕೇಂದ್ರ ಸಚಿವರು ಕೂಡಿಕೊಂಡು ಕೇಂದ್ರ ನೀರಾವರಿ ಸಚಿವ ಶೇಕಾವತ ಅವರನ್ನು ಭೇಟಿಯಾಗಿ ಮಾತನಾಡಿದ್ದೆವು. ಅವರು ಕೂಡ ಭರವಸೆಯನ್ನು ನೀಡಿದ್ದರು. ಆ ಭರವಸೆಯಂತೆ ಒಂದೇ ದಿನದಲ್ಲಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ಸಂತಸ ತಂದಿದೆ ಎಂದರು.

ಮಹಾದಾಯಿ ಗೆಜೆಟ್ ನೋಟಿಫಿಕೇಶನ್

ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ರಾಜ್ಯಕ್ಕೆ ಸಿಕ್ಕಿರುವ ದೊಡ್ಡ ಜಯವಾಗಿದೆ ಎಂದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ನೀರಾವರಿ ಸಚಿವ ಶೇಕಾವತ್ ಅವರಿಗೆ ಸಚಿವ ಅಭಿನಂದನೆ ಸಲ್ಲಿಸಿದರು.

ಹುಬ್ಬಳ್ಳಿ: ಮಹಾದಾಯಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ಸ್ವಾಗತಾರ್ಹ. ಉತ್ತರ ಕರ್ನಾಟಕದ ಜನತೆಗೆ ಮಾತ್ರವಲ್ಲದೆ ರಾಜ್ಯದ ಜನತೆಗೆ ಇದು ಖುಷಿಯ ಕ್ಷಣ ಎಂದು ಸಚಿವ ಜಗದೀಶ್ ಶೆಟ್ಟರ್ ಪ್ರತಿಕ್ರಿಯಿಸಿದರು.

ಮಹಾದಾಯಿ ಯೋಜನೆಯ ಕುರಿತು ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸಿದ ಕುರಿತು ಮಾಧ್ಯಮದ ಜೊತೆ ಮಾತನಾಡಿ, ಸುಮಾರು ದಿನಗಳ ಹೋರಾಟಕ್ಕೆ ಸಿಕ್ಕ ಜಯ ಇದಾಗಿದೆ. ಎರಡು ದಿನದ ಹಿಂದೆ ರಾಜ್ಯ ಹಾಗೂ ಕೇಂದ್ರ ಸಚಿವರು ಕೂಡಿಕೊಂಡು ಕೇಂದ್ರ ನೀರಾವರಿ ಸಚಿವ ಶೇಕಾವತ ಅವರನ್ನು ಭೇಟಿಯಾಗಿ ಮಾತನಾಡಿದ್ದೆವು. ಅವರು ಕೂಡ ಭರವಸೆಯನ್ನು ನೀಡಿದ್ದರು. ಆ ಭರವಸೆಯಂತೆ ಒಂದೇ ದಿನದಲ್ಲಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ಸಂತಸ ತಂದಿದೆ ಎಂದರು.

ಮಹಾದಾಯಿ ಗೆಜೆಟ್ ನೋಟಿಫಿಕೇಶನ್

ಗೆಜೆಟ್ ನೋಟಿಫಿಕೇಶನ್ ಹೊರಡಿಸಿರುವುದು ರಾಜ್ಯಕ್ಕೆ ಸಿಕ್ಕಿರುವ ದೊಡ್ಡ ಜಯವಾಗಿದೆ ಎಂದ ಅವರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಹಾಗೂ ನೀರಾವರಿ ಸಚಿವ ಶೇಕಾವತ್ ಅವರಿಗೆ ಸಚಿವ ಅಭಿನಂದನೆ ಸಲ್ಲಿಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.