ETV Bharat / state

ಕಾಂಗ್ರೆಸ್ ಭಸ್ಮಾಸುರ ಅನ್ನೋದು ಹೆಚ್​​ಡಿಕೆಗೆ ಈಗ ಅರ್ಥವಾಗಿದೆ: ಪ್ರಲ್ಹಾದ ಜೋಶಿ

author img

By

Published : Dec 6, 2020, 3:38 PM IST

ಕೇಂದ್ರ ಸರ್ಕಾರ ಜಾರಿಗೆ ತರಲು ಉದ್ದೇಶಿಸಿರುವ ಮಹತ್ವದ ಕೃಷಿ ಕಾಯ್ದೆಗಳನ್ನು ಖಂಡಿಸಿ ಪ್ರತಿಭಟನೆ ಮಾಡುತ್ತಿರುವ ರೈತರ ಜೊತೆ ಮುಕ್ತವಾಗಿ ಚರ್ಚೆ ಮಾಡಿದ್ದೇವೆ. ಕೇಂದ್ರ ಸರ್ಕಾರ ರೈತರ ಪರ ಕೆಲಸ ಮಾಡುತ್ತಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು. ಇದೇ ವೇಳೆ ಅವರು ಹೆಚ್‌ಡಿಕೆ ಹೇಳಿಕೆ ಬಗ್ಗೆಯೂ ಪ್ರತಿಕ್ರಿಯಿಸಿದರು.

minister pralahada_Joshi
ಪ್ರಲ್ಹಾದ ಜೋಶಿ

ಹುಬ್ಬಳ್ಳಿ: ಕೇಂದ್ರ ಸರ್ಕಾರ ರೈತರು, ಬಡವರು ಹಾಗು ಕೂಲಿ ಕಾರ್ಮಿಕರ ಪರವಾಗಿದೆ. ನಾವು ರೈತರ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರೈತ ಮಸೂದೆ ಕಾಯ್ದೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ ಮಾಡುತ್ತಿರುವ ರೈತರ ಜೊತೆ ಮುಕ್ತವಾಗಿ ಚರ್ಚೆ ಮಾಡಿದ್ದೇವೆ. ಕಾಯ್ದೆಗಳ ಬಗ್ಗೆ ಗೊಂದಲಗಳಿದ್ದರೆ ಅದನ್ನು ಬಗೆಹರಿಸಲು ಸರ್ಕಾರ ಸಿದ್ಧವಿದೆ. ಆದ್ದರಿಂದ ರೈತರು ಹೋರಾಟ ಹಿಂಪಡೆಯಬೇಕು ಎಂದು ಸಚಿವರು ಮನವಿ ಮಾಡಿದರು.

ಇದರ ಜೊತೆಗೆ ಡಿ.09 ರಂದು ರೈತರ ಜೊತೆ ಮತ್ತೆ ಸಭೆ ನಡೆಯಲಿದೆ. ಅಂದು ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುವ ವಿಶ್ವಾಸ ವ್ಯಕ್ತಪಡಿಸಿದರು.

ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ:

ಕಾಂಗ್ರೆಸ್ ಜೊತೆ ಸೇರಿ ಹಾಳಾದೆ ಎಂದು ಮಾಜಿ‌ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಕಾಂಗ್ರೆಸ್ ಭಸ್ಮಾಸುರ ಇದ್ದಂತೆ ಅನ್ನೋದು ಅವರಿಗೆ ಈಗ ಅರ್ಥವಾಗಿದೆ. ಇದು ಸಂತೋಷದ ವಿಚಾರ ಎಂದರು.

ದಿ: ಕುಮಾರಸ್ವಾಮಿ ಲೂಸ್ ಟಾಕ್ ಕಡೆಗಣಿಸಲು ತೀರ್ಮಾನ: ಹೆಚ್​ಡಿಕೆ ಅಸ್ತ್ರಕ್ಕೆ ಕಾಂಗ್ರೆಸ್​ ಪ್ರತ್ಯಸ್ತ್ರ ತಂತ್ರ

ಹುಬ್ಬಳ್ಳಿ: ಕೇಂದ್ರ ಸರ್ಕಾರ ರೈತರು, ಬಡವರು ಹಾಗು ಕೂಲಿ ಕಾರ್ಮಿಕರ ಪರವಾಗಿದೆ. ನಾವು ರೈತರ ಸಮಸ್ಯೆಗಳ ಕುರಿತು ಮುಕ್ತವಾಗಿ ಚರ್ಚಿಸುತ್ತಿದ್ದೇವೆ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.

ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದರು.

ರೈತ ಮಸೂದೆ ಕಾಯ್ದೆ ತಿದ್ದುಪಡಿ ಖಂಡಿಸಿ ಪ್ರತಿಭಟನೆ ಮಾಡುತ್ತಿರುವ ರೈತರ ಜೊತೆ ಮುಕ್ತವಾಗಿ ಚರ್ಚೆ ಮಾಡಿದ್ದೇವೆ. ಕಾಯ್ದೆಗಳ ಬಗ್ಗೆ ಗೊಂದಲಗಳಿದ್ದರೆ ಅದನ್ನು ಬಗೆಹರಿಸಲು ಸರ್ಕಾರ ಸಿದ್ಧವಿದೆ. ಆದ್ದರಿಂದ ರೈತರು ಹೋರಾಟ ಹಿಂಪಡೆಯಬೇಕು ಎಂದು ಸಚಿವರು ಮನವಿ ಮಾಡಿದರು.

ಇದರ ಜೊತೆಗೆ ಡಿ.09 ರಂದು ರೈತರ ಜೊತೆ ಮತ್ತೆ ಸಭೆ ನಡೆಯಲಿದೆ. ಅಂದು ಎಲ್ಲಾ ಸಮಸ್ಯೆಗಳು ಇತ್ಯರ್ಥವಾಗುವ ವಿಶ್ವಾಸ ವ್ಯಕ್ತಪಡಿಸಿದರು.

ಹೆಚ್‌ಡಿಕೆ ಹೇಳಿಕೆಗೆ ಪ್ರತಿಕ್ರಿಯೆ:

ಕಾಂಗ್ರೆಸ್ ಜೊತೆ ಸೇರಿ ಹಾಳಾದೆ ಎಂದು ಮಾಜಿ‌ ಸಿಎಂ ಕುಮಾರಸ್ವಾಮಿ ಹೇಳಿಕೆಗೆ ಪ್ರತಿಕ್ರಿಯಿಸುತ್ತಾ, ಕಾಂಗ್ರೆಸ್ ಭಸ್ಮಾಸುರ ಇದ್ದಂತೆ ಅನ್ನೋದು ಅವರಿಗೆ ಈಗ ಅರ್ಥವಾಗಿದೆ. ಇದು ಸಂತೋಷದ ವಿಚಾರ ಎಂದರು.

ದಿ: ಕುಮಾರಸ್ವಾಮಿ ಲೂಸ್ ಟಾಕ್ ಕಡೆಗಣಿಸಲು ತೀರ್ಮಾನ: ಹೆಚ್​ಡಿಕೆ ಅಸ್ತ್ರಕ್ಕೆ ಕಾಂಗ್ರೆಸ್​ ಪ್ರತ್ಯಸ್ತ್ರ ತಂತ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.