ETV Bharat / state

ನಕಲಿ ಕಾಂಗ್ರೆಸ್​ನ ನಕಲಿ ನಾಯಕ ಸಿದ್ದರಾಮಯ್ಯ: ಪ್ರಲ್ಹಾದ್ ಜೋಶಿ

author img

By

Published : May 29, 2022, 1:33 PM IST

ನಕಲಿ ಕಾಂಗ್ರೆಸ್​ನ ನಕಲಿ ನಾಯಕ ಸಿದ್ದರಾಮಯ್ಯ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಟೀಕಿಸಿದ್ದಾರೆ..

Minister Pralhad Joshi
ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಹುಬ್ಬಳ್ಳಿ(ಧಾರವಾಡ) : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಜಿ ಕೇಂದ್ರದ ಆಸೆಗಾಗಿ ಆರ್​ಎಸ್​ಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ಟ್ವೀಟ್​ಗೆ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆರ್​ಎಸ್​​ಎಸ್‌ನಿಂದಲೇ ಬಂದವರು. ಅದಕ್ಕೆ ನಾವು ಮಾತನಾಡುತ್ತೇವೆ. ಧರ್ಮವೊಂದರ ತುಷ್ಟೀಕರಣಕ್ಕೋಸ್ಕರ ಸಿದ್ದರಾಮಯ್ಯ ಹಾಗೇ ಮಾತನಾಡುತ್ತಿದ್ದಾರೆ.

ಇಟಲಿ ಮೂಲದ ನಾಯಕರಿಗೆ ಹತ್ತಿರವಾಗಲು ಸಿದ್ದರಾಮಯ್ಯ ಆ ರೀತಿಯ ಹೇಳಿಕೆ ನೀಡ್ತಿದ್ದಾರೆ. ಇನ್ಮೇಲೆ ನಾನು ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಬಾರದೆಂದು ತೀರ್ಮಾನಿಸಿದ್ದೇನೆ ಎಂದು ಜೋಶಿ ಹೇಳಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿರುವುದು..

ಸಿದ್ದರಾಮಯ್ಯ ಓರ್ವ ಡ್ಯುಪ್ಲಿಕೇಟ್ ಕಾಂಗ್ರೆಸ್​ನ ಡ್ಯುಪ್ಲಿಕೇಟ್ ಲೀಡರ್. ನಾವ್ಯಾರೂ ಕೇವಲ ಬಿಜೆಪಿಯವರೇ ಹಿಂದೂಗಳೆಂದು ಹೇಳಿಲ್ಲ. ಸದ್ಯ ಇವರು ನಾವು ಹಿಂದೂಗಳೆಂದು ಹೇಳುತ್ತಿದ್ದಾರೆ ಅನ್ನೋದೇ ಸಂತೋಷ. ಈ ಹಿಂದೆ ಇವರು ನಾವು ಹಿಂದೂಗಳೇ ಅಲ್ಲ ಎನ್ನುತ್ತಿದ್ದರು. ಇವಾಗ ಹಿಂದೂ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಬಿಜೆಪಿಯಲ್ಲಿದ್ದವರು ಮಾತ್ರ ಹಿಂದೂಗಳೇ?: ಆರ್​ಎಸ್​ಎಸ್​ ನಾಯಕರಿಗೆ ಸಿದ್ದರಾಮಯ್ಯ ಪ್ರಶ್ನೆ

ಆರ್​ಎಸ್​ಎಸ್ ಬಗ್ಗೆ ಸಿದ್ದರಾಮಯ್ಯನವರಿಗೆ ಎಲ್ಲಾ ಗೊತ್ತಿದೆ. ಸುಮ್ಮನೇ ಗಂಜಿ ಕೇಂದ್ರದ ಆಸೆಗಾಗಿ ಆರ್​ಎಸ್​ಎಸ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಮೊದಲು ಅವರ ನಾಯಕರ ಮೂಲ ತಿಳಿದುಕೊಳ್ಳಲಿ ಎಂದು ಸಿದ್ದರಾಮಯ್ಯ ವಿರುದ್ಧ ಜೋಶಿ ವಾಗ್ದಾಳಿ ನಡೆಸಿದರು.

ಹುಬ್ಬಳ್ಳಿ(ಧಾರವಾಡ) : ವಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಗಂಜಿ ಕೇಂದ್ರದ ಆಸೆಗಾಗಿ ಆರ್​ಎಸ್​ಎಸ್ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಿದ್ದರಾಮಯ್ಯ ಟ್ವೀಟ್​ಗೆ ತಿರುಗೇಟು ನೀಡಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾವು ಆರ್​ಎಸ್​​ಎಸ್‌ನಿಂದಲೇ ಬಂದವರು. ಅದಕ್ಕೆ ನಾವು ಮಾತನಾಡುತ್ತೇವೆ. ಧರ್ಮವೊಂದರ ತುಷ್ಟೀಕರಣಕ್ಕೋಸ್ಕರ ಸಿದ್ದರಾಮಯ್ಯ ಹಾಗೇ ಮಾತನಾಡುತ್ತಿದ್ದಾರೆ.

ಇಟಲಿ ಮೂಲದ ನಾಯಕರಿಗೆ ಹತ್ತಿರವಾಗಲು ಸಿದ್ದರಾಮಯ್ಯ ಆ ರೀತಿಯ ಹೇಳಿಕೆ ನೀಡ್ತಿದ್ದಾರೆ. ಇನ್ಮೇಲೆ ನಾನು ಸಿದ್ದರಾಮಯ್ಯನವರ ಹೇಳಿಕೆಗೆ ಪ್ರತಿಕ್ರಿಯೆ ನೀಡಬಾರದೆಂದು ತೀರ್ಮಾನಿಸಿದ್ದೇನೆ ಎಂದು ಜೋಶಿ ಹೇಳಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಾಗ್ದಾಳಿ ನಡೆಸಿರುವುದು..

ಸಿದ್ದರಾಮಯ್ಯ ಓರ್ವ ಡ್ಯುಪ್ಲಿಕೇಟ್ ಕಾಂಗ್ರೆಸ್​ನ ಡ್ಯುಪ್ಲಿಕೇಟ್ ಲೀಡರ್. ನಾವ್ಯಾರೂ ಕೇವಲ ಬಿಜೆಪಿಯವರೇ ಹಿಂದೂಗಳೆಂದು ಹೇಳಿಲ್ಲ. ಸದ್ಯ ಇವರು ನಾವು ಹಿಂದೂಗಳೆಂದು ಹೇಳುತ್ತಿದ್ದಾರೆ ಅನ್ನೋದೇ ಸಂತೋಷ. ಈ ಹಿಂದೆ ಇವರು ನಾವು ಹಿಂದೂಗಳೇ ಅಲ್ಲ ಎನ್ನುತ್ತಿದ್ದರು. ಇವಾಗ ಹಿಂದೂ ಎನ್ನುತ್ತಿದ್ದಾರೆ ಎಂದು ವ್ಯಂಗ್ಯವಾಡಿದರು.

ಇದನ್ನೂ ಓದಿ: ಬಿಜೆಪಿಯಲ್ಲಿದ್ದವರು ಮಾತ್ರ ಹಿಂದೂಗಳೇ?: ಆರ್​ಎಸ್​ಎಸ್​ ನಾಯಕರಿಗೆ ಸಿದ್ದರಾಮಯ್ಯ ಪ್ರಶ್ನೆ

ಆರ್​ಎಸ್​ಎಸ್ ಬಗ್ಗೆ ಸಿದ್ದರಾಮಯ್ಯನವರಿಗೆ ಎಲ್ಲಾ ಗೊತ್ತಿದೆ. ಸುಮ್ಮನೇ ಗಂಜಿ ಕೇಂದ್ರದ ಆಸೆಗಾಗಿ ಆರ್​ಎಸ್​ಎಸ್ ಬಗ್ಗೆ ಮಾತನಾಡುತ್ತಿದ್ದಾರೆ. ಅವರು ಮೊದಲು ಅವರ ನಾಯಕರ ಮೂಲ ತಿಳಿದುಕೊಳ್ಳಲಿ ಎಂದು ಸಿದ್ದರಾಮಯ್ಯ ವಿರುದ್ಧ ಜೋಶಿ ವಾಗ್ದಾಳಿ ನಡೆಸಿದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.