ETV Bharat / state

ಈದ್ಗಾ ವಿಚಾರದಲ್ಲಿ ಬಿಜೆಪಿ ಏಕಪಕ್ಷೀಯ ನಿರ್ಧಾರ: ಶಾಸಕ ಅಬ್ಬಯ್ಯ

author img

By

Published : Aug 30, 2022, 10:00 PM IST

ಬಿಜೆಪಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ನಿರ್ಣಯದ ಮೂಲಕ ಸಮಾಜದಲ್ಲಿ ಶಾಂತಿ ಭಂಗ ಮಾಡುವ ಕೆಲಸಕ್ಕೆ ಮುಂದಾಗಿದೆ. ಇದು ಬಿಜೆಪಿಯ ಏಕಪಕ್ಷೀಯ ನಿರ್ಧಾರವಾಗಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಹೇಳಿದ್ದಾರೆ.

MLA Abbayya Garam against Union Minister
ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿರುವ ಹಿಂದೆ ಬಿಜೆಪಿಯ ಏಕಪಕ್ಷೀಯ ನಿರ್ಧಾರವಿದೆ. ಇದು ಬಿಜೆಪಿ ಚುನಾವಣೆಯ ಗಿಮಿಕ್ ಆಗಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸುಮಾರು 1000 ಕ್ಕೂ ಅಧಿಕ ಕಡೆಗಳಲ್ಲಿ ಗಣೇಶೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಮಾಡಲಾಗುತ್ತಿದೆ. ಆದರೆ ಬಿಜೆಪಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ನಿರ್ಣಯದ ಮೂಲಕ ಸಮಾಜದಲ್ಲಿ ಶಾಂತಿ ಭಂಗ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಕೇಂದ್ರ ಸಚಿವರ ವಿರುದ್ಧ ಶಾಸಕ ಅಬ್ಬಯ್ಯ ಗರಂ

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಪಾಲಿಕೆ ಕಮಿಷನರ್​ಗೆ ಅಧಿಕಾರ ನೀಡಿದ ಹೈಕೋರ್ಟ್

ಈಗಾಗಲೇ ಕೇಂದ್ರ ಸಚಿವರು ಸದನ ಸಮಿತಿ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆ ಸರಿಯಲ್ಲ. ನಾವು ಮೊದಲಿಂದಲೂ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವುದನ್ನು ವಿರೋಧ ಮಾಡುತ್ತಾ ಬಂದಿದ್ದೇವೆ. ಅದಾಗ್ಯೂ ಬಿಜೆಪಿಯವರು ಈ ನಿರ್ಧಾರಕ್ಕೆ ಬಂದು ಸಮಾಜದ ಒಂದು ಕೋಮಿನ ಜನರ ಭಾವನೆಗಳಿಗೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂಬುದು ನಮ್ಮ ಅಭಿಪ್ರಾಯ ಎಂದರು.

ಹುಬ್ಬಳ್ಳಿ: ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿರುವ ಹಿಂದೆ ಬಿಜೆಪಿಯ ಏಕಪಕ್ಷೀಯ ನಿರ್ಧಾರವಿದೆ. ಇದು ಬಿಜೆಪಿ ಚುನಾವಣೆಯ ಗಿಮಿಕ್ ಆಗಿದೆ ಎಂದು ಶಾಸಕ ಪ್ರಸಾದ್ ಅಬ್ಬಯ್ಯ ಗಂಭೀರ ಆರೋಪ ಮಾಡಿದ್ದಾರೆ.

ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಗರದ ಸುಮಾರು 1000 ಕ್ಕೂ ಅಧಿಕ ಕಡೆಗಳಲ್ಲಿ ಗಣೇಶೋತ್ಸವ ಆಚರಣೆಯನ್ನು ವಿಜೃಂಭಣೆಯಿಂದ ಮಾಡಲಾಗುತ್ತಿದೆ. ಆದರೆ ಬಿಜೆಪಿ ಈದ್ಗಾ ಮೈದಾನದಲ್ಲಿ ಸಾರ್ವಜನಿಕ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವ ನಿರ್ಣಯದ ಮೂಲಕ ಸಮಾಜದಲ್ಲಿ ಶಾಂತಿ ಭಂಗ ಮಾಡುವ ಕೆಲಸಕ್ಕೆ ಮುಂದಾಗಿದೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಕೇಂದ್ರ ಸಚಿವರ ವಿರುದ್ಧ ಶಾಸಕ ಅಬ್ಬಯ್ಯ ಗರಂ

ಇದನ್ನೂ ಓದಿ: ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ : ಪಾಲಿಕೆ ಕಮಿಷನರ್​ಗೆ ಅಧಿಕಾರ ನೀಡಿದ ಹೈಕೋರ್ಟ್

ಈಗಾಗಲೇ ಕೇಂದ್ರ ಸಚಿವರು ಸದನ ಸಮಿತಿ ವಿಚಾರಕ್ಕೆ ಸಂಬಂಧಿಸಿದಂತೆ ನೀಡಿರುವ ಹೇಳಿಕೆ ಸರಿಯಲ್ಲ. ನಾವು ಮೊದಲಿಂದಲೂ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡುವುದನ್ನು ವಿರೋಧ ಮಾಡುತ್ತಾ ಬಂದಿದ್ದೇವೆ. ಅದಾಗ್ಯೂ ಬಿಜೆಪಿಯವರು ಈ ನಿರ್ಧಾರಕ್ಕೆ ಬಂದು ಸಮಾಜದ ಒಂದು ಕೋಮಿನ ಜನರ ಭಾವನೆಗಳಿಗೆ ದಕ್ಕೆ ತರುವ ಕೆಲಸ ಮಾಡುತ್ತಿದ್ದಾರೆ ಎಂಬುದು ನಮ್ಮ ಅಭಿಪ್ರಾಯ ಎಂದರು.

ETV Bharat Logo

Copyright © 2024 Ushodaya Enterprises Pvt. Ltd., All Rights Reserved.