ಹುಬ್ಬಳ್ಳಿ : ಮೇ23ರ ನಂತರ ಮೋದಿಗೆ 'ಮಹಾನ್ ಫೇಕ್ ಮಹಾರಾಜ' ಅಂತಾ ಹೆಸರು ಬರಲಿದೆ ಎಂದು ಕಾಂಗ್ರೆಸ್ ಮುಖಂಡ ಬಿ.ಕೆ. ಹರಿಪ್ರಸಾದ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಮೋದಿ ಈಗ ವಿಜ್ಞಾನಿ ಆಗಿದ್ದಾರೆ. ಬಾಲಾಕೋಟ್ ದಾಳಿ ಸಂದರ್ಭದಲ್ಲಿ ಮೋದಿ ಮೋಡದ ವಿಜ್ಞಾನಿ ಆಗಿದ್ದರು. ಪ್ಲ್ಯಾಸ್ಟಿಕ್ ಸರ್ಜರಿ ವಿಜ್ಞಾನಿ ಕೂಡ ಆಗಿದ್ದಾರೆ. ಅವರ ಗ್ರಾಜ್ಯುಯೆಟ್ ಫೇಕ್, ಅವರ ಕೊಟ್ಟ ಕಾರ್ಯಕ್ರಮಗಳು ಕೂಡ ಫೇಕ್ ಎಂದರು.
ಮೊದಲು ಪ್ರಧಾನ ಸೇವಕ ಅಂದ್ರು, ಆ ಬಳಿಕ ಚೌಕಿದಾರ ಅಂದ್ರು. ಆದರೆ ಮೇ 23ರ ಬಳಿಕ ಅವರಿಗೆ ಬೇರೆಯದೇ ಹೆಸರೇ ಬರಲಿದೆ ಎಂದು ಅವರು ಹೇಳಿದರು. ಕಾಂಗ್ರೆಸ್ ಮುಖಂಡರು ಇರುವ ಹೋಟೆಲ್ಗಳ ಮೇಲೆ ದಾಳಿ ವಿಚಾರವಾಗಿ ಮಾತನಾಡಿದ ಅವರು, ಐಟಿ ಮತ್ತು ಇಡಿಯನ್ನು ರಾಜಕೀಯ ದಾಳಕ್ಕಾಗಿ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ ಎಂದರು.
ಸರ್ಕಾರದ ಭವಿಷ್ಯ ರಾಹುಲ್ ಗಾಂಧಿ ಮತ್ತು ದೇವೇಗೌಡರ ನಿರ್ಣಯದ ಮೇಲಿದೆ. ಅವರನ್ನು ಬಿಟ್ಟು ಉಳಿದವರ ಮಾತುಗಳು ಕೇವಲ ರಾಜಕೀಯ ಪ್ರೇರಿತ ಹೇಳಿಕೆಗಳು ಮಾತ್ರ. ರಮೇಶ ಜಾರಕಿಹೊಳಿ ಇನ್ನು ಸಹ ಪಕ್ಷದಲ್ಲಿ ಇದ್ದಾರೆ.ಅವರು ನಮ್ಮ ಪಕ್ಷದಲ್ಲೇ ಇರ್ತಾರೆ ಬೇರೆ ಎಲ್ಲಿಯೂ ಹೋಗಿಲ್ಲ. ರಮೇಶ ಜಾರಕಿಹೊಳಿ ಯಾವುದೇ ಪಕ್ಷ ವಿರೋಧಿ ಚಟುವಟಿಕೆ ಮಾಡಿಲ್ಲ ಎಂದರು.