ETV Bharat / state

ಧಾರವಾಡ: ಪೌರತ್ವ ಕಾಯ್ದೆ ಕೈಬಿಡುವಂತೆ ಮುಸ್ಲಿಂ ಮಹಿಳೆಯರ ಪ್ರತಿಭಟನೆ

author img

By

Published : Jan 15, 2020, 3:36 PM IST

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಸಿಎಎ ಮತ್ತು ಎನ್​ಆರ್​ಸಿ ವಿರೋಧಿಸಿ ಧಾರವಾಡದಲ್ಲಿ ಮುಸ್ಲಿಂ ಮಹಿಳೆಯರು ಪ್ರತಿಭಟನೆ ನಡೆಸಿದ್ದು, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

Protest
ಮುಸ್ಲಿಂ ಮಹಿಳೆಯರ ಪ್ರತಿಭಟನೆ


ಧಾರವಾಡ: ಸಿಎಎ, ಎನ್.ಆರ್.ಸಿ, ಎನ್.ಪಿ.ಆರ್ ಅಸಾಂವಿಧಾನಿಕವಾಗಿದೆ ಎಂದು ಆರೋಪಿಸಿರುವ ಅಂಜುಮನ್ ಇಸ್ಲಾಂ ಸಂಸ್ಥೆಯು, ತಕ್ಷಣವೇ ಕಾಯ್ದೆಯನ್ನು ಕೈಬಿಡುವಂತೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ಧಾರವಾಡದ ಇಸ್ಲಾಂ ಸಂಸ್ಥೆ ಆವರಣದಲ್ಲಿ ಜಮಾಯಿಸಿದ ನೂರಾರು ಮುಸ್ಲಿಂ ಮಹಿಳೆಯರು, ಎನ್ಆರ್​​ಸಿ ಹಾಗೂ ಸಿಎಎ ಕಾಯ್ದೆಗಳನ್ನು ತಕ್ಷಣ ಕೈಬಿಡಬೇಕು ಎಂದು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ಕಾಯ್ದೆ ಕೈಬಿಡಬೇಕೆಂದು ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಅರ್ಪಿಸಿದರು.

ಮುಸ್ಲಿಂ ಮಹಿಳೆಯರ ಪ್ರತಿಭಟನೆ

ಪೌರತ್ವ ಕಾಯ್ದೆ ಸಂವಿಧಾನದ ವಿರೋಧಿಯಾಗಿದೆ, ಇದರಿಂದ ಮುಸ್ಲಿಮರಿಗೆ ಗಂಡಾಂತರವಿದೆ. ಮುಂದಿನ ದಿನಗಳಲ್ಲಿ ಈ ಕಾಯ್ದೆ ದಲಿತ, ಹಿಂದುಳಿದ ವರ್ಗದ ಬುಡಕಟ್ಟು ಜನಾಂಗದವರಿಗೆ ಅಪಾಯಕಾರಿಯಾಗಲಿದೆ. ಇಷ್ಟೆಲ್ಲಾ ತಿಳಿದಿದ್ದರೂ ಕೇಂದ್ರ ಸರ್ಕಾರ ಈ‌ ಮಸೂದೆಯನ್ನು ಭಾರತದ ನಾಗರೀಕತ್ವ ನೀಡುವ ನೆಪದಲ್ಲಿ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಿದೆ ಎಂದು‌ ಆರೋಪಿಸಿದರು.


ಧಾರವಾಡ: ಸಿಎಎ, ಎನ್.ಆರ್.ಸಿ, ಎನ್.ಪಿ.ಆರ್ ಅಸಾಂವಿಧಾನಿಕವಾಗಿದೆ ಎಂದು ಆರೋಪಿಸಿರುವ ಅಂಜುಮನ್ ಇಸ್ಲಾಂ ಸಂಸ್ಥೆಯು, ತಕ್ಷಣವೇ ಕಾಯ್ದೆಯನ್ನು ಕೈಬಿಡುವಂತೆ ನಗರದಲ್ಲಿ ಪ್ರತಿಭಟನೆ ನಡೆಸಿತು.

ಧಾರವಾಡದ ಇಸ್ಲಾಂ ಸಂಸ್ಥೆ ಆವರಣದಲ್ಲಿ ಜಮಾಯಿಸಿದ ನೂರಾರು ಮುಸ್ಲಿಂ ಮಹಿಳೆಯರು, ಎನ್ಆರ್​​ಸಿ ಹಾಗೂ ಸಿಎಎ ಕಾಯ್ದೆಗಳನ್ನು ತಕ್ಷಣ ಕೈಬಿಡಬೇಕು ಎಂದು ಕೇಂದ್ರ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಪೌರತ್ವ ಕಾಯ್ದೆ ಕೈಬಿಡಬೇಕೆಂದು ರಾಷ್ಟ್ರಪತಿಗಳಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಅರ್ಪಿಸಿದರು.

ಮುಸ್ಲಿಂ ಮಹಿಳೆಯರ ಪ್ರತಿಭಟನೆ

ಪೌರತ್ವ ಕಾಯ್ದೆ ಸಂವಿಧಾನದ ವಿರೋಧಿಯಾಗಿದೆ, ಇದರಿಂದ ಮುಸ್ಲಿಮರಿಗೆ ಗಂಡಾಂತರವಿದೆ. ಮುಂದಿನ ದಿನಗಳಲ್ಲಿ ಈ ಕಾಯ್ದೆ ದಲಿತ, ಹಿಂದುಳಿದ ವರ್ಗದ ಬುಡಕಟ್ಟು ಜನಾಂಗದವರಿಗೆ ಅಪಾಯಕಾರಿಯಾಗಲಿದೆ. ಇಷ್ಟೆಲ್ಲಾ ತಿಳಿದಿದ್ದರೂ ಕೇಂದ್ರ ಸರ್ಕಾರ ಈ‌ ಮಸೂದೆಯನ್ನು ಭಾರತದ ನಾಗರೀಕತ್ವ ನೀಡುವ ನೆಪದಲ್ಲಿ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಿದೆ ಎಂದು‌ ಆರೋಪಿಸಿದರು.

Intro:ಧಾರವಾಡ: ಅಸಂವಿಧಾನಿಕ ಹಾಗೂ‌‌ ಅಮಾನವೀಯ‌ ಸಿಎಎ, ಎನ್.ಸಿ.ಆರ್. ಎನ್.ಪಿ.ಆರ್ ತಕ್ಷಣ ಕೈಬೀಡುವಂತೆ ಆಗ್ರಹಿಸಿ ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಪ್ರತಿಭಟನೆ ನಡೆಸಲಾಯಿತು.

ಧಾರವಾಡದ ಇಸ್ಲಾಂ ಸಂಸ್ಥೆ ಆವರಣದಲ್ಲಿ ಜಮಾಯಿಸಿದ ನೂರಾರು ಮುಸ್ಲಿಂ ಮಹಿಳೆಯರು ಎನ್ಆರ್ಸಿ ಹಾಗೂ ಸಿಎಎ ಕಾಯ್ದೆಗಳನ್ನು ತಕ್ಷಣ ಕೈಬೀಡಬೇಕು ಎಂದು ಒತ್ತಾಯಿಸಿದರು.Body:ಕೇಂದ್ರ ಸರ್ಕಾರದ ವಿರುದ್ದ ದಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ ಮುಸ್ಲಿಂ ‌ಮಹಿಳೆಯರು ಪೌರತ್ವ ಕಾಯ್ದೆ ಕೈಬೀಡಬೇಕು ಎಂದು ರಾಷ್ಟ್ರಪತಿಗಳಿಗೆ ಮನವಿ ಅರ್ಪಿಸಿದರು. ಅಸಂವಿಧಾನಿಕ ಮತ್ತು ಅಮಾನವೀಯ ಪೌರತ್ವ ತಿದ್ದುಪಡಿ ಮಸೂದೆಯನ್ನು ತಕ್ಷಣ ಹಿಂಪಡೆಯಬೇಕು ಎಂದು ಆಗ್ರಹ ಮಾಡಿದರು.

ಪೌರತ್ವ ಕಾಯ್ದೆ ಸಂವಿಧಾನದ ವಿರೋಧಿಯಾಗಿದೆ. ಇದರಿಂದ ಮುಸ್ಲಿಂರಿಗೆ ಗಂಡಾಂತರವಿದೆ. ಮುಂದಿನ ದಿನಗಳಲ್ಲಿ ಸಹ ಈ ಕಾಯ್ದೆ ದಲಿತ ಹಿಂದುಳಿದ ವರ್ಗದ ಬುಡಕಟ್ಟು ಜನಾಂಗದವರಿಗೆ ಅಪಾಯಕಾರಿಯಾಗಲಿದೆ. ಆದ್ರೂ ಕೇಂದ್ರ ಸರ್ಕಾರ ಈ‌ ಮಸೂದೆಯನ್ನು ಭಾರತದ ನಾಗರೀಕತ್ವ ನೀಡುವ ನೆಪದಲ್ಲಿ ಧರ್ಮದ ಆಧಾರದ ಮೇಲೆ ತಾರತಮ್ಯ ಮಾಡಿದೆ ಎಂದು‌ ದೂರಿದರು..Conclusion:
ETV Bharat Logo

Copyright © 2024 Ushodaya Enterprises Pvt. Ltd., All Rights Reserved.